Yuvavahini

DEC 27, 2023 5.07 PM IST

ಯುವವಾಹಿನಿ (ರಿ.) ಕೊಲ್ಯ ಘಟಕ

ಹೃದಯ ತುಂಬಿದ ಅಭಿಮಾನ ಮರೆಯಲಸಾಧ್ಯ : ನಯನಾ ಸುರೇಶ್

ಕೊಲ್ಯ: ಕೊಲ್ಯ ಘಟಕದ ಸರ್ವ ಸದಸ್ಯರ ಪ್ರೀತಿ ಅಭಿಮಾನಕ್ಕೆ ನಾನು ಮೂಕಳಾಗಿದ್ದೇನೆ, ಮಾತು ಮೌನವಾಗಿದೆ ಹೃದಯ ತುಂಬಿ ಬಂದಿದೆ. ಸಂತೋಷವನ್ನು ವ್ಯಕ್ತ ಪಡಿಸಲು ನನ್ನಲ್ಲಿ ಪದಗಳಿಲ್ಲ ಎಂದು ಆನಂದ ಬಾಷ್ಪಿತರಾಗಿ ಕೊಲ್ಯ ಘಟಕದಲ್ಲಿ ಡಿಸೆಂಬರ್ 27 ರಂದು ನಡೆದ ಸಾಪ್ತಾಹಿಕ ಸಭೆಯಲ್ಲಿನ ಬೀಳ್ಕೊಡುಗೆಯ ಸನ್ಮಾನದ ಕುರಿತು ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ನಯನಾ ಸುರೇಶ್ ಅವರು ಬಾವುಕರಾಗಿ ಮತನಾಡಿದರು.

ಸಂಘಟನಾ ಕಾರ್ಯದರ್ಶಿಯಾಗಿ ಕೊಲ್ಯ ಘಟಕಕ್ಕೆ ಪ್ರೋತ್ಸಾಹ ನೀಡಿ ಸಹಕರಿಸಿದ ಶ್ರೀಮತಿ ನಯನಾ ಸುರೇಶ್ ರವರನ್ನು ಯುವವಾಹಿನಿ(ರಿ.) ಕೊಲ್ಯ ಘಟಕದ ಸಾಪ್ತಾಹಿಕ ಸಭೆಯಲ್ಲಿ ಸಂಪ್ರದಾಯಬದ್ಧವಾಗಿ ಬೀಳ್ಕೊಡುಗೆಯ ಗೌರವ ನೀಡಲಾಯಿತು. ಘಟಕದ ಮಹಿಳಾ ಸದಸ್ಯರು ಹಣೆಗೆ ಸಿಂಧೂರ ಹಚ್ಚಿ, ಆರತಿಯನ್ನು ಬೆಳಗಿ, ಬಳೆಯನ್ನು ತೊಡಿಸಿದರು. ಪ್ರೀತಿಯ ದ್ಯೋತಕವಾಗಿ ಹೂವು ಮತ್ತು ಸೀರೆಯನ್ನು ನೀಡಲಾಯಿತು.

ಸಂಘಟನಾ ಕಾರ್ಯದರ್ಶಿ ನಯನಾ ಸುರೇಶ್ ರವರು ನಮ್ಮೊಂದಿಗೆ ಮಾತೆಯಂತೆ, ಹಿರಿಯಕ್ಕನಾಗಿ ಒಂದೇ ಕುಟುಂಬದ ಸದಸ್ಯರಂತೆ ಬೆರೆತು ಅಪಾರ ಪ್ರೋತ್ಸಾಹವನ್ನು ನೀಡಿದ್ದಾರೆ. ಅವರ ಸಹಕಾರಕ್ಕೆ ನಾವು ಚಿರಋಣಿಗಳೆಂದು ಕೊಲ್ಯ ಘಟಕದ ಅಧ್ಯಕ್ಷರು ಲತೀಶ್ ಎಂ ಸಂಕೋಳಿಗೆಯವರು ಸಂತಸ ವ್ಯಕ್ತಪಡಿಸಿದರು.

ಘಟಕದ ಮಾಜಿ ಅಧ್ಯಕ್ಷರು ಹಾಗೂ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕುಸುಮಾಕರ ಕುಂಪಲರವರು ತಮ್ಮ ಅವಧಿಯಲ್ಲಿ ಸಹಕರಿಸಿದ ನಯನಾ ಸುರೇಶ್ ರವರನ್ನು ಗೌರವಿಸಿ, ಮಾತೃಸ್ವರೂಪಿಯ ಬಗ್ಗೆ ನಾಲ್ನುಡಿಗಳನ್ನಾಡಿದರು.

ಸಾಪ್ತಾಹಿಕ ಸಭೆಯಲ್ಲಿ ಕೊಲ್ಯ ಘಟಕದ ಪ್ರಥಮ ಉಪಾಧ್ಯಕ್ಷರಾದ ಸುಧಾ ಸುರೇಶ್, ನಿಕಟಪೂರ್ವ ಅಧ್ಯಕ್ಷರಾದ ಸುಂದರ್ ಸುವರ್ಣ, ದ್ವಿತೀಯ ಉಪಾಧ್ಯಕ್ಷರಾದ ನಿತಿನ್ ಕರ್ಕೆರ, ಕೋಶಾಧಿಕಾರಿ ವಿನುತಾ ಪಾಂಡಿಹಿತ್ಲು, ಸ್ಥಾಪಕಾಧ್ಯಕ್ಷರಾದ ಸುರೇಶ್ ಬಿಲ್ಲವ, ಮಾಜಿ ಅಧ್ಯಕ್ಷರುಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಜೀವನ್ ಕೊಲ್ಯ ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!