ಯುವವಾಹಿನಿ (ರಿ.) ಕೊಲ್ಯ ಘಟಕ

ಹೃದಯ ತುಂಬಿದ ಅಭಿಮಾನ ಮರೆಯಲಸಾಧ್ಯ : ನಯನಾ ಸುರೇಶ್

ಕೊಲ್ಯ: ಕೊಲ್ಯ ಘಟಕದ ಸರ್ವ ಸದಸ್ಯರ ಪ್ರೀತಿ ಅಭಿಮಾನಕ್ಕೆ ನಾನು ಮೂಕಳಾಗಿದ್ದೇನೆ, ಮಾತು ಮೌನವಾಗಿದೆ ಹೃದಯ ತುಂಬಿ ಬಂದಿದೆ. ಸಂತೋಷವನ್ನು ವ್ಯಕ್ತ ಪಡಿಸಲು ನನ್ನಲ್ಲಿ ಪದಗಳಿಲ್ಲ ಎಂದು ಆನಂದ ಬಾಷ್ಪಿತರಾಗಿ ಕೊಲ್ಯ ಘಟಕದಲ್ಲಿ ಡಿಸೆಂಬರ್ 27 ರಂದು ನಡೆದ ಸಾಪ್ತಾಹಿಕ ಸಭೆಯಲ್ಲಿನ ಬೀಳ್ಕೊಡುಗೆಯ ಸನ್ಮಾನದ ಕುರಿತು ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ನಯನಾ ಸುರೇಶ್ ಅವರು ಬಾವುಕರಾಗಿ ಮತನಾಡಿದರು.

ಸಂಘಟನಾ ಕಾರ್ಯದರ್ಶಿಯಾಗಿ ಕೊಲ್ಯ ಘಟಕಕ್ಕೆ ಪ್ರೋತ್ಸಾಹ ನೀಡಿ ಸಹಕರಿಸಿದ ಶ್ರೀಮತಿ ನಯನಾ ಸುರೇಶ್ ರವರನ್ನು ಯುವವಾಹಿನಿ(ರಿ.) ಕೊಲ್ಯ ಘಟಕದ ಸಾಪ್ತಾಹಿಕ ಸಭೆಯಲ್ಲಿ ಸಂಪ್ರದಾಯಬದ್ಧವಾಗಿ ಬೀಳ್ಕೊಡುಗೆಯ ಗೌರವ ನೀಡಲಾಯಿತು. ಘಟಕದ ಮಹಿಳಾ ಸದಸ್ಯರು ಹಣೆಗೆ ಸಿಂಧೂರ ಹಚ್ಚಿ, ಆರತಿಯನ್ನು ಬೆಳಗಿ, ಬಳೆಯನ್ನು ತೊಡಿಸಿದರು. ಪ್ರೀತಿಯ ದ್ಯೋತಕವಾಗಿ ಹೂವು ಮತ್ತು ಸೀರೆಯನ್ನು ನೀಡಲಾಯಿತು.

ಸಂಘಟನಾ ಕಾರ್ಯದರ್ಶಿ ನಯನಾ ಸುರೇಶ್ ರವರು ನಮ್ಮೊಂದಿಗೆ ಮಾತೆಯಂತೆ, ಹಿರಿಯಕ್ಕನಾಗಿ ಒಂದೇ ಕುಟುಂಬದ ಸದಸ್ಯರಂತೆ ಬೆರೆತು ಅಪಾರ ಪ್ರೋತ್ಸಾಹವನ್ನು ನೀಡಿದ್ದಾರೆ. ಅವರ ಸಹಕಾರಕ್ಕೆ ನಾವು ಚಿರಋಣಿಗಳೆಂದು ಕೊಲ್ಯ ಘಟಕದ ಅಧ್ಯಕ್ಷರು ಲತೀಶ್ ಎಂ ಸಂಕೋಳಿಗೆಯವರು ಸಂತಸ ವ್ಯಕ್ತಪಡಿಸಿದರು.

ಘಟಕದ ಮಾಜಿ ಅಧ್ಯಕ್ಷರು ಹಾಗೂ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕುಸುಮಾಕರ ಕುಂಪಲರವರು ತಮ್ಮ ಅವಧಿಯಲ್ಲಿ ಸಹಕರಿಸಿದ ನಯನಾ ಸುರೇಶ್ ರವರನ್ನು ಗೌರವಿಸಿ, ಮಾತೃಸ್ವರೂಪಿಯ ಬಗ್ಗೆ ನಾಲ್ನುಡಿಗಳನ್ನಾಡಿದರು.

ಸಾಪ್ತಾಹಿಕ ಸಭೆಯಲ್ಲಿ ಕೊಲ್ಯ ಘಟಕದ ಪ್ರಥಮ ಉಪಾಧ್ಯಕ್ಷರಾದ ಸುಧಾ ಸುರೇಶ್, ನಿಕಟಪೂರ್ವ ಅಧ್ಯಕ್ಷರಾದ ಸುಂದರ್ ಸುವರ್ಣ, ದ್ವಿತೀಯ ಉಪಾಧ್ಯಕ್ಷರಾದ ನಿತಿನ್ ಕರ್ಕೆರ, ಕೋಶಾಧಿಕಾರಿ ವಿನುತಾ ಪಾಂಡಿಹಿತ್ಲು, ಸ್ಥಾಪಕಾಧ್ಯಕ್ಷರಾದ ಸುರೇಶ್ ಬಿಲ್ಲವ, ಮಾಜಿ ಅಧ್ಯಕ್ಷರುಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಜೀವನ್ ಕೊಲ್ಯ ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!