ಯುವವಾಹಿನಿ(ರಿ.) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಯುವವಾಹಿನಿ ಯುವಜನತೆಯ ಸ್ಪೂರ್ತಿ : ಹರೀಶ್ ಕೆ.ಪೂಜಾರಿ

ಮಂಗಳೂರು : ಯುವವಾಹಿನಿ ಸಂಸ್ಥೆಯು ಯುವಕರ ಆಕರ್ಷಣೆಯ ಮೂಲಕ ಯುವಜನತೆಯಲ್ಲಿ ಹೊಸ ಸ್ಪೂರ್ತಿ ತುಂಬಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ.ಪೂಜಾರಿ ತಿಳಿಸಿದರು.

ಅವರು 2024 ಫೆಬ್ರವರಿ 20 ರಂದು ಮಂಗಳೂರಿನ ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ ಮಂಗಳೂರು ಘಟಕದ ಪದಗ್ರಹಣ ಸಮಾರಂಭದಲ್ಲಿ ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.

ಶ್ರೀನಿವಾಸ್ ಬಲ್ಕ್ ಕ್ಯಾರಿಯರ್ ಇದರ ಮಾಲೀಕರಾದ ಲೋಕೇಶ್ ಆರ್ ಅಮೀನ್ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಂಜನ್ ಕೆ ಪಣಂಬೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ ಸುವರ್ಣ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಶೈಕ್ಷಣಿಕ ಕ್ಷೇತ್ರದಲ್ಲಿ ಕುಮಾರಿ ಮೇಘನ, ಆರೋಗ್ಯ ಕ್ಷೇತ್ರದಲ್ಲಿ ಕುಮಾರಿ ಡಾ.ಸಿಂಧೂರಶ್ಮಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ಕುಮಾರಿ ಚಿನ್ಮಯಿ, ಕ್ರೀಡಾಕ್ಷೇತ್ರದ ಈಜು ಪಟು ನಿಶಾನ್ ಇವರುಗಳ ವಿಶೇಷ ಸಾಧನೆ ಪ್ರತಿಭೆಗಳನ್ನು ಗುರುತಿಸಿ ಗೌರವಿಸಲಾಯಿತು.

ಯುವವಾಹಿನಿ ಮಂಗಳೂರು ಘಟಕದ 2024-25ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಆಯ್ಕೆ ಸಮಿತಿಯ ಸಂಚಾಲಕರಾದ ಗಣೇಶ್ ವಿ ಕೋಡಿಕಲ್ ರವರು ಸಭೆಗೆ ಪರಿಚಯಿಸಿದರು.

ನೂತನ ಅಧ್ಯಕ್ಷರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ನಾಗೇಶ್ ಅಮೀನ್‌ರವರು ಮಾತನಾಡಿ, ಮಂಗಳೂರು ಘಟಕವನ್ನು ಯಶಸ್ವಿಯಾಗಿ ಮುನ್ನಡೆಸುವ ಜವಾಬ್ದಾರಿಯನ್ನು ಸರ್ವರ ಸಹಕಾರದಿಂದ ನಿಭಾಯಿಸುವ ಆತ್ಮವಿಶ್ವಾಸ ಇದೆ ಎಂದರು.

ಮಂಗಳೂರು ಘಟಕದಿಂದ ಆಯ್ಕೆಯಾದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ. ಪೂಜಾರಿ, ಕೋಶಾಧಿಕಾರಿ ಹರೀಶ್ .ವಿ. ಪಚ್ಚನಾಡಿ ಮತ್ತು ಸಮಾವೇಶ ನಿರ್ದೇಶಕರಾದ ಗಣೇಶ್. ವಿ. ಕೋಡಿಕಲ್ ಇವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ವಿವಿಧ ಘಟಕಗಳಿಂದ ಆಗಮಿಸಿದ ಅದ್ಯಕ್ಷರು ಹಾಗೂ ಪದಾಧಿಕಾರಿಗಳು ಅದ್ಯಕ್ಷರು ಯಶಸ್ವಿಗೆ ಅಭಿನಂದನೆ ಸಲ್ಲಿಸಿ, ನೂತನ ಅಧ್ಯಕ್ಷರ ತಂಡಕ್ಕೆ ಶುಭಾಶಯ ಸಲ್ಲಿಸಿದರು.

ಸಭಾಧ್ಯಕ್ಷರಾದ ಗಣೇಶ್ ಸುವರ್ಣ ಮಾತನಾಡಿ ಯುವವಾಹಿನಿಯ ಮೇಲೆ ಇರುವ ಅಪಾರ ಅಭಿಮಾನವನ್ನು ತಿಳಿಸುತ್ತಾ ಈ ಒಂದು ವರ್ಷ ಯುವಾಹಿನಿಯ ಸಾರಥ್ಯವನ್ನು ಯಶಸ್ವಿಯಾಗಿ ನಡೆಸಲು ಸಹಕರಿಸಿದ ಎಲ್ಲರಿಗೂ ಸ್ಮರಣಿಕೆಯನ್ನು ನೀಡಿ ಗೌರವಿಸಿದರು.

ಯುವವಾಹಿನಿ ಮಂಗಳೂರು ಘಟಕವನ್ನು ಕಳೆದ ಒಂದು ವರ್ಷದಲ್ಲಿ ಯಶಸ್ವಿಯಾಗಿ ಮುನ್ನಡೆಸಿದ ಗಣೇಶ್ ಸುವರ್ಣ ಇವರ ಕುಟುಂಬಿಕರೊಂದಿಗೆ ಅಭಿನಂದಿಸಲಾಯಿತು.

ಭಜನೆ ಹಾಗೂ ಗುರು ಪೂಜೆಯೊಂದಿಗೆ ಸತೀಶ್ ಕೆ ಇವರ ಸಾರಥ್ಯದಲ್ಲಿ ಭಕ್ತಿಗೀತೆ ಭಾವಗೀತೆ ಹಾಗು ಇತರ ವೈವಿಧ್ಯಮಯ ಹಾಡುಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಮಂಗಳೂರು ಘಟಕದ ಕಾರ್ಯದರ್ಶಿ ಭವಿಷ್ 2023- 24ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು. ಮಾಜಿ ಅಧ್ಯಕ್ಷರಾದ ರಾಕೇಶ್ ಕುಮಾರ್ ಪ್ರಸ್ತಾವನೆ ಮಾಡಿದರು, ಕುಮಾರಿ ಚಿನ್ಮಯಿ ಪ್ರಾರ್ಥಿಸಿದರು, ಸದಸ್ಯರಾದ ಸತೀಶ್ ಕೆ, ಕುಮಾರಿ ಶ್ವೇತ ಕಾರ್ಯಕ್ರಮ ನಿರೂಪಿಸಿದರು. ನಿಯೋಜಿತ ಕಾರ್ಯದರ್ಶಿಯದ ಶ್ರವಣ್ ಕೂಳೂರು ಧನ್ಯವಾದ ಸಮರ್ಪಣೆ ಮಾಡಿದರು.

ಸತೀಶ್ ಕುಮಾರ್ ಎ, ಸಂತೋಷ್, ತಿಲಕ್ ರಾಜ್ ಶ್ರೀಕಾಂತ್, ಕಾವ್ಯಶ್ ರೆಡ್ಡಿ, ಕುಮಾರಿ ಕಾವ್ಯಶ್ರೀ ಟಿ, ಕುಮಾರಿ ತೀಕ್ಷಾ ಕಾರ್ಯಕ್ರಮದ ಸಂಯೋಜನೆಗೆ ಸಹಕರಿಸಿದರು.

ಗುರು ಸ್ತುತಿಯೊಂದಿಗೆ ಪ್ರಾರಂಭವಾದ ಸಮಾರಂಭವನ್ನು ಲೋಕ ಕಲ್ಯಾಣ ಮಂತ್ರದೊಂದಿಗೆ ಮುಕ್ತಾಯಗೊಳಿಸಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!