ಯುವವಾಹಿನಿ ಕೊಲ್ಯ ಘಟಕಕ್ಕೆ ಕೇಂದ್ರ ಸಮಿತಿ ಅಧ್ಯಕ್ಷರ ಭೇಟಿ

ಸಂಘಟನಾತ್ಮಕವಾಗಿ ದಿನೇ ದಿನೇ ಬಲಿಷ್ಠವಾಗುತ್ತಿರುವ ಕೊಲ್ಯ ಘಟಕ : ಹರೀಶ್ ಕೆ. ಪೂಜಾರಿ

ಕೊಲ್ಯ: ಶಿಸ್ತಿಗೆ ಹೆಸರಾದ ಕೊಲ್ಯ ಘಟಕವು ಹೊಸ ಸದಸ್ಯರ ಸೇರ್ಪಡೆಯೊಂದಿಗೆ ಇನ್ನಷ್ಟು ಬಲಿಷ್ಠವಾಗುತ್ತಿದೆ. ಕೊಲ್ಯ ಘಟಕವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿ ಕೊಂಡು ವಿದ್ಯೆ, ಉದ್ಯೋಗ, ಸಂಪರ್ಕ ನಿಟ್ಟಿನಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳು ಜನರಿಗೆ ತಲುಪುತ್ತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ‌. ಪೂಜಾರಿ ತಿಳಿಸಿದರು. ಫೆಬ್ರವರಿ 25 ರಂದು ನಡೆಯುವ ಉಳ್ಳಾಲ ವಲಯದ ಬಿಲ್ಲವ ಸಮಾವೇಶದ ಸಿದ್ಧತೆಯಲ್ಲಿ ಕೊಲ್ಯ ಯುವವಾಹಿನಿ ಸದಸ್ಯರು ತಮ್ಮನ್ನು ತೊಡಗಿಸಿದುರ ಬಗ್ಗೆ ಮಾಹಿತಿ ಪಡೆದು ಸಮ್ಮೇಳನದ ಯಶಸ್ವಿಗೆ ಶುಭ ಹಾರೈಸಿದರು.

ಅವರು ಯುವವಾಹಿನಿ (ರಿ.) ಕೊಲ್ಯ ಘಟಕದ ಪೆಬ್ರವರಿ 14 ರಂದು ನಡೆದ ಸಾಪ್ತಾಹಿಕ ಸಭೆಗೆ ಕೇಂದ್ರ ಸಮಿತಿಯ ಅಧ್ಯಕ್ಷರು ಹರೀಶ್ ಪೂಜಾರಿ ಭೇಟಿ ನೀಡಿ ಈ ಕುರಿತು ಮಾತನಾಡಿದರು.

ಕೊಲ್ಯ ಘಟಕದ ಅಧ್ಯಕ್ಷರಾದ ಲತೀಶ್ ಸಂಕೋಳಿಗೆಯವರು ಕೊಲ್ಯ ಘಟಕ ಸ್ಥಾಪನೆಯಾದಂತಹ ಸಂದರ್ಭದಲ್ಲಿ ಅಧ್ಯಕ್ಷರಾದ ಹರೀಶ್ ಪೂಜಾರಿಯವರ ಶ್ರಮ ಶ್ಲಾಘನೀಯ ಎಂದು ಸಭೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಘಟಕದ ಅಧ್ಯಕ್ಷರು ನೆನಪಿನ ಕಾಣಿಕೆಯಾಗಿ ಭಗವದ್ಗೀತೆ ಪ್ರತಿಯನ್ನು ನೀಡಿದರು. ಕೊಲ್ಯ ಘಟಕದಲ್ಲಿ ಪ್ರತಿ ವಾರ ನಡೆಸುವ ತುಳುವೆರೆ ಚಿಯನ ಸ್ಪರ್ಧೆ ವಾರದ ವಿಜೇತರಾದ ಕೇಂದ್ರ ಸಮಿತಿ ನಾರಾಯಣ ಗುರುತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರು ಮೋಹನ್ ಮಾಡೂರ್ ಇವರಿಗೆ ಕೇಂದ್ರ ಸಮಿತಿ ಅಧ್ಯಕ್ಷರು ಬಹುಮಾನ ನೀಡಿದರು.

ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಸಂಘಟನಾ ನಿರ್ದೇಶಕರು ಹಾಗೂ ಕೊಲ್ಯ ಘಟಕದ ನಿಕಟಪೂರ್ವ ಅಧ್ಯಕ್ಷರು ಸುಂದರ್ ಸುವರ್ಣ, ಘಟಕದ ಪ್ರಥಮ ಉಪಾಧ್ಯಕ್ಷರು ಸುಧಾ ಸುವರ್ಣ, ದ್ವಿತೀಯ ಉಪಾಧ್ಯಕ್ಷರು ನಿತಿನ್ ಕರ್ಕೇರ, ಕಾರ್ಯದರ್ಶಿ ಜೀವನ್ ಕೊಲ್ಯ ಹಾಗೂ ಘಟಕದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಅಧ್ಯಕ್ಷರು ಲತೀಶ್ ಎಂ. ಸಂಕೋಳಿಗೆ ಸ್ವಾಗತಗೈದರು. ಕಾರ್ಯದರ್ಶಿ ಜೀವನ್ ಕೊಲ್ಯ ಧನ್ಯವಾದಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!