ಯುವವಾಹಿನಿ (ರಿ.) ಕೆಂಜಾರು ಕರಂಬಾರು ಘಟಕದ ಪದಪ್ರದಾನ ಸಮಾರಂಭ

ವೈವಿಧ್ಯತೆಗೆ ಯುವವಾಹಿನಿ ಮಾದರಿ : ಯೋಗೀಶ್ ಕೈರೋಡಿ

ಕೆಂಜಾರು-ಕರಂಬಾರು: ಧಾರ್ಮಿಕತೆ ಎಂಬುವುದು ಜನಜೀವನದ ಭಾಗ. ವಸ್ತುವಿನಲ್ಲಿ ವಿವಿಧ ನೆಲೆಯ ಗುಣಮಟ್ಟ ಇರುವಂತೆ ಧಾರ್ಮಿಕತೆಯಲ್ಲಿಯೂ ಉತ್ತಮ,ಉನ್ನತ ಹಾಗೂ ದುರ್ಬಲ ಎಂಬ ಮೂರು ಗುಣಮಟ್ಟವಿದೆ. ಉತ್ತಮ ಹಾಗೂ ಉನ್ನತ ಧಾರ್ಮಿಕತೆಯ ಪಾಲಕರು ಫಲಾನುಭವಿಗಳಾಗಬೇಕು. ದುರ್ಬಲ ಧಾರ್ಮಿಕತೆಯಿಂದ ಯುವಜನತೆಯನ್ನು ಪಾರುಗೊಳಿಸುವ ಹೊಣೆ ಯುವವಾಹಿನಿಗಿರಲಿ. ಒಂದು ವರ್ಷದ ಅವಧಿಯಲ್ಲಿ ಅಲ್ಪಾವಧಿ ಯೋಜನೆಗಳನ್ನು ಕಾರ್ಯಗತಗೊಳಿಸುವ ಚಿಂತನೆ ಸಹಜವಾಗಿ ನೂತನ ಪದಾಧಿಕಾರಿಗಳಿಗಿರುತ್ತದೆ. ಅಲ್ಪಾವಧಿಯೊಂದಿಗೆ ದೂರದೃಷ್ಟಿಯ ಕಾರ್ಯಕ್ರಮಗಳಿಗೂ ಆದ್ಯತೆ ಇರಲಿ. ಸಂಘಟನೆ ಸ್ವರೂಪ ಮತ್ತು ಕಾರ್ಯಕ್ರಮದ ವೈವಿಧ್ಯಕ್ಕೆ ಯುವವಾಹಿನಿ ನಾಡಿಗೆ ಮಾದರಿ ಎಂದು ಮೂಡುಬಿದಿರೆ ಆಳ್ವಾಸ್ ಕಾಲೇಜು ಉಪನ್ಯಾಸಕ ಯೋಗೀಶ್ ಕೈರೋಡಿರವರು ತಿಳಿಸಿದರು.

ಅವರು ದಿನಾಂಕ 18.02.2024 ರಂದು ಕೆಂಜಾರು ಕರಂಬಾರು ಶ್ರೀ ದೇವಿ ಭಜನಾ ಮಂದಿರದಲ್ಲಿ ಯುವವಾಹಿನಿ ಕೆಂಜಾರು ಕರಂಬಾರು ಘಟಕದ 2024-25ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಕೆಂಜಾರು ಕರಂಬಾರು ಘಟಕದ ಅಧ್ಯಕ್ಷರಾದ ಭರತೇಶ್ ಪೂಜಾರಿಯವರು ವಹಿಸಿದ್ದರು.

ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ಬಿಲ್ಲವ ಸಂಘ ಬಜಪೆ-ಕರಂಬಾರು ಅಧ್ಯಕ್ಷರು ಶಿವರಾಮ್ ಪೂಜಾರಿಯವರು ನೆರವೇರಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್.ಕೆ .ಪೂಜಾರಿ ನೂತನ ಕಾರ್ಯಕಾರಿ ಸಮಿತಿಗೆ ಪದಪ್ರದಾನ ಮಾಡಿದರು.

ಬಿಲ್ಲವ ಸಂಘ ತೋಕೂರು-ಕೆಂಜಾರು ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ, ಶೇಖರ್ ಬಂಗೇರ ಅಧ್ಯಕ್ಷರು ಶ್ರೀ ದೇವಿ ಭಜನಾ ಮಂದಿರ ಕೆಂಜಾರು ಕರಂಬಾರು, ನೂತನ ಅಧ್ಯಕ್ಷರಾದ ವಿನೋದ್ ಅರ್ಬಿ ಹಾಗೂ ಪ್ರಧಾನ ಕಾರ್ಯದರ್ಶಿ ರೂಪೇಶ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸನ್ಮಾನ,ವಿದ್ಯಾನಿಧಿ ವಿತರಣೆ
ರಾಷ್ಟ್ರಪತಿ ಸೇವಾ ಪದಕ ಪಡೆದ ಬಜಪೆ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ರಾಮ ಪೂಜಾರಿ ಮೇರಮಜಲು ಹಾಗೂ ಉದ್ಯಮಿ ನಾರಾಯಣ ಪೂಜಾರಿ ಬೊಗೋರಿದಡಿ ಅವರನ್ನು ಸನ್ಮಾನಿಸಲಾಯಿತು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಿಸಲಾಯಿತು.

ಘಟಕದ ಮಾಜಿ ಅಧ್ಯಕ್ಷರಾದ ಜಿತೇಶ್ ಸಾಲ್ಯಾನ್ ಪ್ರಾಸ್ತವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ರೂಪೇಶ್ ಪೂಜಾರಿ ವಾರ್ಷಿಕ ವರದಿ ಮಂಡಿಸಿದರು. ಶ್ರೀ ದೇವಿ ಭಜನಾ ಮಂದಿರದ ಅರ್ಚಕರು ಲೋಕೇಶ್ ಪೂಜಾರಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದರು

ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿದರು. ಸ್ಥಾಪಕ ಅಧ್ಯಕ್ಷರು ನಿರೂಪಿಸಿದರು. ನೂತನ ಕಾರ್ಯದರ್ಶಿ ಧನ್ಯವಾದಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!