ಯುವವಾಹಿನಿ (ರಿ) ಉಡುಪಿ ಘಟಕದ ಆಶ್ರಯದಲ್ಲಿ

ಬನ್ನಂಜೆ ಬಾಬು ಅಮೀನ್ ಪ್ರಶಸ್ತಿ ಪ್ರದಾನ

ಉಡುಪಿ: ಮಾರ್ಚ್ 4 ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಚಿಟ್ಟಾಡಿಯ ಲಕ್ಷ್ಮೀ ಟ್ರೇಡ್ ಸೆಂಟರ್‌ನ ಲಕ್ಷ್ಮೀ ಸಭಾಭವನದಲ್ಲಿ ರವಿವಾರ ಜರಗಿತು. ಜಾನಪದ ವಿದ್ವಾಂಸ ಪ್ರಶಸ್ತಿಯನ್ನು ನಿವೃತ್ತ ಪ್ರಾಂಶುಪಾಲ ಕನರಾಡಿ ವಾದಿರಾಜ ಭಟ್ ಅವರಿಗೆ ಹಾಗೂ ಜಾನಪದ ಕಲಾವಿದ ಪ್ರಶಸ್ತಿಯನ್ನು ಹಿರಿಯ ಬೈದೇರುಗಳ ದರ್ಶನ ಪಾತ್ರಿ ಕೋಟಿ ಪೂಜಾರಿ ಸೂಡ ಅವರಿಗೆ ಪ್ರದಾನಿಸಲಾಯಿತು.

ಸಮಾಜಸೇವಕ ಈಶ್ವರ ಮಲ್ಪೆ ಅವರ ಪರವಾಗಿ ಅವರ ಪತ್ನಿ ಗೀತಾ ಅವರಿಗೆ ಸಮ್ಮಾನಿಸಲಾಯಿತು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷೆ ಅಮಿತಾಂಜಲಿ ಕಿರಣ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಮಹಾಪುರುಷರ ವ್ಯಕ್ತಿತ್ವ ಮಾದರಿ: ಬನ್ನಂಜೆ ಬಾಬು ಅಮೀನ್ ಜಾನಪದ ವಿದ್ವಾಂಸ ಪ್ರಶಸ್ತಿ ಪುರಸ್ಕೃತ ಕನರಾಡಿ

ಪ್ರಶಸ್ತಿ ಸ್ವೀಕರಿಸಿದ ಕನರಾಡಿ ವಾದಿರಾಜ ಭಟ್ ಮಾತನಾಡಿ, ನಾರಾಯಣಗುರುಗಳು ಜ್ಞಾನಜ್ಯೋತಿ ಬೆಳಗಿದವರು. ಕೋಟಿ ಚೆನ್ನಯರು ಸತ್ಯ, ಧರ್ಮ, ನ್ಯಾಯದ ಮೂಲಕ ವೀರ ಪುರುಷರಾಗಿದ್ದರು. ಎಲ್ಲಾ ದೇಶದ ಮಹಾಕಾವ್ಯಗಳಲ್ಲಿ ಇಂತಹ ವೀರ ನಾಯಕರು ಕಾಣಸಿಗುತ್ತಾರೆ. ತುಳುನಾಡಿನ ಅಂತಹ ನಾಯಕರು ಕೋಟಿ ಚೆನ್ನಯರು. ಸತ್ಯ, ಧರ್ಮ, ನ್ಯಾಯಕ್ಕಾಗಿ ಹುಟ್ಟಿ ತಮ್ಮನ್ನು ತಾವು ತ್ಯಾಗ ಮಾಡಿದವರು. ಅವರ ವ್ಯಕ್ತಿತ್ವ ನಮಗೆಲ್ಲ ಮಾದರಿಯಾಗಿದೆ. ಇವತ್ತಿನ ಕಾಲಘಟ್ಟದಲ್ಲಿ ಯುವಕರ ಸಂಘಟನೆ, ಪ್ರಚಾರಕಾರ್ಯಗಳು ಸಮಾಜಕ್ಕೆ ಮಾದರಿಯಾಗಬೇಕು. ಹಿರಿಯರ ಜತೆ ಯುವಸಮುದಾಯ, ಯುವ ಸಮುದಾಯದೊಂದಿಗೆ ಮಕ್ಕಳು ಇಂತಹ ಕಾರ್ಯಕ್ರಮಕ್ಕೆ ಬಂದರೆ ಸಮಾಜ ಮತ್ತಷ್ಟು ಎತ್ತರಕ್ಕೆ ಬೆಳೆಯಲು ಸಾಧ್ಯವಿದೆ ಎಂದರು. ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಮುಕ್ಕ ಶ್ರೀನಿವಾಸ ಕಾಲೇಜಿನ ಪ್ರೊ| ಎಂ.ಎಸ್.ಕೋಟ್ಯಾನ್ ಪ್ರಶಸ್ತಿ ಪ್ರದಾನಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಒಂದನೆ ಉಪಾಧ್ಯಕ್ಷ ಲೋಕೇಶ್ ಕೋಟ್ಯಾನ್ ಕುಳೂರು, ನಿವೃತ್ತ ಪ್ರಾಂಶುಪಾಲ ಡಾ| ಗಣನಾಥ ಎಕ್ಕಾರು ಉಪಸ್ಥಿತರಿದ್ದರು.

ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಮುದ್ದು ಮೂಡುಬೆಳ್ಳೆ ಪ್ರಸ್ತಾವನೆಗೈದರು. ಸಂಚಾಲಕ ಭಾಸ್ಕರ ಸುವರ್ಣ ಸ್ವಾಗತಿಸಿದರು. ಅಶೋಕ್ ಕೋಟ್ಯಾನ್, ಸುಜಾತ ಪ್ರವೀಣ್, ಮಹೇಶ್ ಮಲ್ಪೆ ಸನ್ಮಾನ ಪತ್ರ ವಾಚಿಸಿದರು.
ಯುವವಾಹಿನಿಯ ಸಂಘಟನಾ ಕಾರ್ಯದರ್ಶಿ ವಿನೋದ್ ಕುಮಾರ್ ಹಾಗೂ ಮಹಿಳಾ ಸಂಚಾಲಕಿ ಶ್ರೀಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು. ಜೊತೆ ಕಾರ್ಯದರ್ಶಿ ಸಂಧ್ಯಾ ಅಶೋಕ್ ಕೋಟ್ಯಾನ್ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!