ಯುವವಾಹಿನಿ(ರಿ.)ಕೊಲ್ಯ ಘಟಕದ ವತಿಯಿಂದ

ಹಣಕಾಸು ನಿರ್ವಹಣೆ ಕಾರ್ಯಗಾರ

ಕೊಲ್ಯ : “ಮೇಲಕ್ಕೆ ಎಸೆಯಲ್ಪಟ್ಟ ಮಗುವಿಗೆ ಅಮ್ಮ ಹಿಡಿಯುತ್ತಾಳೆಂಬ ಬಲವಾದ ನಂಬಿಕೆ ಇರುವಂತೆ ಮ್ಯೂಚುವಲ್ ಫಂಡ್ ಹಣ ಹೂಡಿಕೆಯಲ್ಲಿ ನಂಬಿಕೆಯೇ ಬಹು ದೊಡ್ಡ ಭದ್ರತೆ” ನಮಗೆ ಬರುವ ಆದಾಯದಲ್ಲಿ ಮೊದಲು ಒಂದಿಷ್ಟು ಉಳಿತಾಯ ಮಾಡಿ ನಂತರ ನಮ್ಮ ಖರ್ಚು ವೆಚ್ಚಗಳನ್ನು ಸರಿದೂಗಿಸಿದರೆ ಮುಂದೆ ಹಣಕಾಸು ನಿರ್ವಹಣೆ ಕ್ಷೇತ್ರದಲ್ಲಿ ಉತ್ತಮ ಹೂಡಿಕೆದಾರರಾಗಲು ಸಾಧ್ಯ ಎಂದು ಬೆಂಗಳೂರು ಮೂಲದ ಖ್ಯಾತ ಸಂಪನ್ಮೂಲ ವ್ಯಕ್ತಿ ಡಾ. ಬಾಲಾಜಿ ರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.

ಹೂಡಿಕೆ ಕ್ಷೇತ್ರದಲ್ಲಿ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಕಾಲದಲ್ಲಿ ಯಾವ ರೀತಿ ನಮ್ಮಲ್ಲಿರುವ ಬಂಡವಾಳವನ್ನು ಯಶಸ್ವಿಯಾಗಿ ಹೂಡಿಕೆ ಮಾಡಿ ಉತ್ತಮ ಇಳುವರಿಯನ್ನು ಪಡೆಯಬಹುದು ಎಂದು ಈ ಸಂದರ್ಭದಲ್ಲಿ ಸರಿಸುಮಾರು ಎರಡು ಗಂಟೆಗಳ ಕಾಲ ಮಹತ್ವಪೂರ್ಣವಾದ, ಪರಿಣಾಮಕಾರಿಯಾದ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಯವರಿಂದ ಪಡೆಯಲಾಯಿತು.

ಯುವವಾಹಿನಿ (ರಿ.) ಕೊಲ್ಯ ಘಟಕ ಹಾಗೂ ರೋಟರಿ ಸಮುದಾಯದಳ ಕೊಲ್ಯ ಸೋಮೇಶ್ವರ ಸಹಯೋಗದಲ್ಲಿ ಎಚ್.ಡಿ.ಎಫ್.ಸಿ ಮ್ಯೂಚುವಲ್ ಫಂಡ್ ನ ಸಹಯೋಗದಲ್ಲಿ ಹಣಕಾಸು ನಿರ್ವಹಣೆ ಕಾರ್ಯಾಗಾರವು ನುರಿತ ಸಂಪನ್ಮೂಲ ವ್ಯಕ್ತಿ ಡಾ. ಬಾಲಾಜಿ ರಾವ್ ರವರ ಮಾರ್ಗದರ್ಶನದಲ್ಲಿ ಪರಿವಾರ್ ರೆಸಿಡೆನ್ಸಿ ಬೀರಿ ಸಂಕೋಳಿಗೆಯಲ್ಲಿ ದಿನಾಂಕ 10-03-2024 ರಂದು ಆದಿತ್ಯವಾರ ಜರಗಿತು.

ಯುವವಾಹಿನಿ ಕೊಲ್ಯ ಘಟಕದ ಅಧ್ಯಕ್ಷರು ಲತೀಶ್ ಎಂ. ಸಂಕೋಳಿಗೆ ಪ್ರಸ್ತುತ ವಿದ್ಯಮಾನಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಹಣಕಾಸಿನ ವಿನಿಯೋಗವನ್ನು ಯಶಸ್ವಿಯಾಗಿ ಹೂಡಿಕೆ ಮಾಡಿ ಉತ್ತಮ ಭವಿಷ್ಯವನ್ನು ನಿರ್ಮಾಣ ಮಾಡಲು ಈ ರೀತಿಯ ಕಾರ್ಯಕ್ರಮಗಳು ಬಹಳ ಅರ್ಥಪೂರ್ಣ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಕ್ತ ಸಂವಾದ

ಕಾರ್ಯಾಗಾರದ ನಂತರ ಮ್ಯೂಚುವಲ್ ಫಂಡ್ ನ ಹೂಡಿಕೆ ಮತ್ತು ಮಾರುಕಟ್ಟೆ ಏರಿಳಿತಗಳ ಕುರಿತು ಮುಕ್ತ ಸಂವಾದ ನಡೆಯಿತು. ರೋಟರಿ ಕ್ಲಬ್ ಮಂಗಳೂರು ಪೂರ್ವದ ಅಧ್ಯಕ್ಷರು ರೊ. ಜಯರಾಂ ಶೆಟ್ಟಿ, ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರದ ಅಧ್ಯಕ್ಷರಾದ ಆನಂದ ಮಲಯಾಳಕೋಡಿ, ಲೈಫ್ ಟೈಮ್ ಅಸೆಟ್ ಸ್ಟ್ರಾಟೆಜೀಸ್ ಪ್ರೈ. ಲಿ. ನಿರ್ದೇಶಕರಾದ ಚಂದ್ರಶೇಖರ ಅಮೀನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೊಲ್ಯ ಘಟಕದ ಸಾಂಸ್ಕೃತಿಕ ನಿರ್ದೇಶಕರಾದ ಸೌಮ್ಯ ಯೋಗೀಶ್ ಪ್ರಾರ್ಥನೆ ನೆರವೇರಿಸಿದರು.ಯುವವಾಹಿನಿ ಅಧ್ಯಕ್ಷರು ಲತೀಶ್.ಎಂ ಸಂಕೋಳಿಗೆ ಪ್ರಸಾವನೆಗೈದು ಸ್ವಾಗಿತಿಸಿದರು.ಕಾರ್ಯದರ್ಶಿ ಜೀವನ್ ಕೊಲ್ಯ ಸಂಪನ್ಮೂಲ ವ್ಯಕ್ತಿಯ ವ್ಯಕ್ತಿ ಪರಿಚಯ ಮಾಡಿದರು. ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರದ ಅಧ್ಯಕ್ಷರು ಆನಂದ್ ಮಲಯಾಳ ಕೋಡಿ ಧನ್ಯವಾದ ಸಮರ್ಪಣೆಗೈದರು. ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದರಶ್ಮಿ ಸನಿಲ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!