Yuvavahini

MAR 03, 2024 5.52 PM IST

ಯುವವಾಹಿನಿ(ರಿ.) ಹಳೆಯಂಗಡಿ ಘಟಕ

ಪದಗ್ರಹಣ ಸಮಾರಂಭ

ಹಳೆಯಂಗಡಿ: ಯುವವಾಹಿನಿ(ರಿ.) ಹಳೆಯಂಗಡಿ ಘಟಕದ ವತಿಯಿಂದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 03-03-2024 ರಂದು ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಬಿಲ್ಲವ ಭವನದಲ್ಲಿ ನಡೆಯಿತು.

ಪದಗ್ರಹಣ ಯುವವಾಹಿನಿ ಸಮಾರಂಭದಲ್ಲಿ ಹಳೆಯಂಗಡಿ ಘಟಕದ ಅಧ್ಯಕ್ಷರು ಕಿರಣ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಮಾರಂಭದ ಉದ್ಘಾಟನೆಯನ್ನು ಬಿಲ್ಲವ ಸಮಾಜ ಸೇವಾ ಸಂಘ(ರಿ.) ಹಳೆಯಂಗಡಿ ಅಧ್ಯಕ್ಷರು ಚಂದ್ರಶೇಖರ್ ನಾನಿಲ್ ದೀಪವನ್ನು ಬೆಳಗಿಸುವುದರ ಮೂಲಕ ನೆರವೇರಿಸಿದರು.

2024- 25 ನೇ ಸಾಲಿನ ಅಧ್ಯಕ್ಷರಾಗಿ ಹಿತಾಕ್ಷಿ ನಾರಾಯಣ್, ಕಾರ್ಯದರ್ಶಿ ಪೂರ್ಣಿಮಾ ಹಾಗೂ ನಮಿತಾ ಬೆಳ್ಳಾಯರು ಕೋಶಾಧಿಕಾರಿಯಾಗಿ ಆಯ್ಕೆಯಾಗಿರುವರು.

ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಅಧ್ಯಕ್ಷರು ಹರೀಶ್ .ಕೆ. ಪೂಜಾರಿ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಿಲ್ಲವ ಸಮಾಜ ಸೇವಾ ಸಂಘದ ಗೌರವ ಅಧ್ಯಕ್ಷರು ಗಣೇಶ್ ಜಿ ಬಂಗೇರ, ಬಿಲ್ಲವ ಸಮಾಜ ಸೇವಾ ಸಂಘ ಕಟ್ಟೋಣ ಸಮಿತಿ ಅಧ್ಯಕ್ಷರು ಮೋಹನ್ ಎಸ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಸಾಲ್ಯಾನ್, ಪೂಜಾ ಎರೇಂಜರ್ಸ್ & ಕೇಟರರ್ಸ್ ಮಾಲಕರು ಜೈ ಕೃಷ್ಣ ಬಿ ಕೋಟ್ಯಾನ್ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಸಂಘಟನಾ ಕಾರ್ಯದರ್ಶಿ ರಂಜನ್ ಕುಳಾಯಿ ಉಪಸ್ಥಿತರಿದ್ದರು.

ಸಾಧನಾ ಪ್ರಶಸ್ತಿ

ಸಮಾರಂಭದಲ್ಲಿ ಲಕ್ಷ್ಯ ಇವರ ಕ್ರೀಡಾ ಲೋಕದ ಸಾಧನೆಗಾಗಿ ಹಾಗೂ ಪ್ರಣವಿ ಎನ್.ಸಿ.ಸಿ ಏರ್ ವಿಂಗ್ ಕೆಡೆಟ್ ಆಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಿರುವ ಹೆಮ್ಮೆಗಾಗಿ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ ಉಪಸ್ಥಿತರಿದ್ದರು.

ಯುವವಾಹಿನಿ ಹಳೆಯಂಗಡಿ ಘಟಕವು ಇದುವರೆಗೂ ಬಿಲ್ಲವ ಸಂಘದ ನೂತನ ಬಿಲ್ಲವ ಭವನಕ್ಕೆ ಸುಮಾರು 7,50,000/- ಕ್ಕೂ ಮಿಕ್ಕಿ ಧನ ಸಹಕಾರವನ್ನು ನೀಡಿರುವುದಲ್ಲದೆ ಸುಮಾರು 7,50,000/- ವೆಚ್ಚದಲ್ಲಿ ಗುರು ಮಂದಿರಕ್ಕೆ ಪ್ರಸಾದಾಲಯವನ್ನು ನಿರ್ಮಾಣ ಮಾಡಿ ನೀಡಿರುವುದರ ಬಗ್ಗೆ ಪ್ರಸ್ತಾಪಿಸಿದರು. ಯುವವಾಹಿನಿ ಉತ್ತಮ ಕೆಲಸಕಾರ್ಯಗಳನ್ನು ನಿರ್ವಹಿಸುತ್ತಾ, ಮಾತೃ ಸಂಸ್ಥೆಯಾದ ಬಿಲ್ಲವ ಸಂಘದೊಂದಿಗೆ ನಿಕಟ ಸಂಪರ್ಕವನ್ನು ಹೊಂದಿರುವುದು ನಿಜಕ್ಕೂ ಘಟಕಕ್ಕೆ ಹಿರಿಮೆ ಮುಖ್ಯ ಅತಿಥಿಗಳು ಬಾಸ್ಕರ್ ಸಾಲ್ಯಾನ್ ಶ್ಲಾಘಿಸಿದರು.

ಹಳೆಯಂಗಡಿ ಘಟಕವು ಉತ್ತಮ ಸಮಾಜ ಸೇವಾ ಕಾರ್ಯಗಳನ್ನು ಮಾಡುತ್ತಿದ್ದು, ಕೇಂದ್ರ ಸಮಿತಿಯ ಪ್ರತಿಯೊಂದು ಕಾರ್ಯಕ್ರಮಗಳಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡು ಉತ್ತಮವಾಗಿ ಸಹಕಾರವನ್ನು ನೀಡುತ್ತಿದೆ ಎಂದು ಕೇಂದ್ರ ಸಮಿತಿಯ ಅಧ್ಯಕ್ಷರು ಹರೀಶ್ ಕೆ. ಪೂಜಾರಿ ನುಡಿದರು.

ಉದ್ಘಾಟನೆಯನ್ನು ನೆರವೇರಿಸಿ ಯುವವಾಹಿನಿ ಹಳೆಯಂಗಡಿ ಘಟಕವು ಮಾತೃ ಸಂಸ್ಥೆಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಸಂಸ್ಥೆ ಪ್ರತಿಯೊಂದು ಹೆಜ್ಜೆಯಲ್ಲಿಯೂ ಸಂಘದ ಹಿರಿಯರ ಮಾರ್ಗದರ್ಶನದಲ್ಲಿ ನಡೆಯುತ್ತಿರುವುದರಿಂದ ಘಟಕವು ಉತ್ತಮವಾಗಿ ಕಾರ್ಯನಿರ್ವಹಿಸಲು ಅನುಕೂಲವಾಗಿದೆ ಎಂದು ಬಿಲ್ಲವ ಸಂಘ ಅಧ್ಯಕ್ಷರು ಚಂದ್ರಶೇಖರ್ ನಾನಿಲ್ ಶುಭ ಹಾರೈಸಿದರು.

ಬಿಲ್ಲವ ಸಂಘದ ಎಲ್ಲಾ ಪದಾಧಿಕಾರಿಗಳ ಸಹಕಾರದೊಂದಿಗೆ ಮಾರ್ಗದರ್ಶನದಲ್ಲಿ ಯುವವಾಹಿನಿ ಘಟಕವನ್ನು ಮುನ್ನಡೆಸುವುದಾಗಿ ನೂತನ ಅಧ್ಯಕ್ಷರು ಹಿತಾಕ್ಷಿ ನಾರಾಯಣ್ ಹೇಳಿದರು.

ಸಮಾರಂಭದ ಅಧ್ಯಕ್ಷರು ಯುವವಾಹಿನಿ ಘಟಕದ ನಿಕಟಪೂರ್ವ ಅಧ್ಯಕ್ಷರು ಕಿರಣ್ ಕುಮಾರ್ ಅಧ್ಯಕ್ಷಾವಧಿಯಲ್ಲಿ ಸಹಕರಿಸಿದ ಸರ್ವರಿಗೂ ಅಭಿನಂದನೆ ಸಲ್ಲಿಸಿದರು.

ಸಂಘದ ಕೋಶಾಧಿಕಾರಿ ರಮೇಶ್ ಬಂಗೇರ ಸ್ವಾಗತಿಸಿದರು. ನೂತನ ಕಾರ್ಯದರ್ಶಿ ಪೂರ್ಣಿಮಾ ಅಭಿನಂದನೆಗೈದರು. ಗೌರವ ಪ್ರಧಾನ ಕಾರ್ಯದರ್ಶಿ ಹಿಮಕರ್ ಟಿ ಸುವರ್ಣ ಕಲ್ಲಾಡಿ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!