ಯುವವಾಹಿನಿ(ರಿ.) ಹಳೆಯಂಗಡಿ ಘಟಕ

ಪದಗ್ರಹಣ ಸಮಾರಂಭ

ಹಳೆಯಂಗಡಿ: ಯುವವಾಹಿನಿ(ರಿ.) ಹಳೆಯಂಗಡಿ ಘಟಕದ ವತಿಯಿಂದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 03-03-2024 ರಂದು ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಬಿಲ್ಲವ ಭವನದಲ್ಲಿ ನಡೆಯಿತು.

ಪದಗ್ರಹಣ ಯುವವಾಹಿನಿ ಸಮಾರಂಭದಲ್ಲಿ ಹಳೆಯಂಗಡಿ ಘಟಕದ ಅಧ್ಯಕ್ಷರು ಕಿರಣ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಮಾರಂಭದ ಉದ್ಘಾಟನೆಯನ್ನು ಬಿಲ್ಲವ ಸಮಾಜ ಸೇವಾ ಸಂಘ(ರಿ.) ಹಳೆಯಂಗಡಿ ಅಧ್ಯಕ್ಷರು ಚಂದ್ರಶೇಖರ್ ನಾನಿಲ್ ದೀಪವನ್ನು ಬೆಳಗಿಸುವುದರ ಮೂಲಕ ನೆರವೇರಿಸಿದರು.

2024- 25 ನೇ ಸಾಲಿನ ಅಧ್ಯಕ್ಷರಾಗಿ ಹಿತಾಕ್ಷಿ ನಾರಾಯಣ್, ಕಾರ್ಯದರ್ಶಿ ಪೂರ್ಣಿಮಾ ಹಾಗೂ ನಮಿತಾ ಬೆಳ್ಳಾಯರು ಕೋಶಾಧಿಕಾರಿಯಾಗಿ ಆಯ್ಕೆಯಾಗಿರುವರು.

ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಅಧ್ಯಕ್ಷರು ಹರೀಶ್ .ಕೆ. ಪೂಜಾರಿ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಿಲ್ಲವ ಸಮಾಜ ಸೇವಾ ಸಂಘದ ಗೌರವ ಅಧ್ಯಕ್ಷರು ಗಣೇಶ್ ಜಿ ಬಂಗೇರ, ಬಿಲ್ಲವ ಸಮಾಜ ಸೇವಾ ಸಂಘ ಕಟ್ಟೋಣ ಸಮಿತಿ ಅಧ್ಯಕ್ಷರು ಮೋಹನ್ ಎಸ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಸಾಲ್ಯಾನ್, ಪೂಜಾ ಎರೇಂಜರ್ಸ್ & ಕೇಟರರ್ಸ್ ಮಾಲಕರು ಜೈ ಕೃಷ್ಣ ಬಿ ಕೋಟ್ಯಾನ್ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಸಂಘಟನಾ ಕಾರ್ಯದರ್ಶಿ ರಂಜನ್ ಕುಳಾಯಿ ಉಪಸ್ಥಿತರಿದ್ದರು.

ಸಾಧನಾ ಪ್ರಶಸ್ತಿ

ಸಮಾರಂಭದಲ್ಲಿ ಲಕ್ಷ್ಯ ಇವರ ಕ್ರೀಡಾ ಲೋಕದ ಸಾಧನೆಗಾಗಿ ಹಾಗೂ ಪ್ರಣವಿ ಎನ್.ಸಿ.ಸಿ ಏರ್ ವಿಂಗ್ ಕೆಡೆಟ್ ಆಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಿರುವ ಹೆಮ್ಮೆಗಾಗಿ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ ಉಪಸ್ಥಿತರಿದ್ದರು.

ಯುವವಾಹಿನಿ ಹಳೆಯಂಗಡಿ ಘಟಕವು ಇದುವರೆಗೂ ಬಿಲ್ಲವ ಸಂಘದ ನೂತನ ಬಿಲ್ಲವ ಭವನಕ್ಕೆ ಸುಮಾರು 7,50,000/- ಕ್ಕೂ ಮಿಕ್ಕಿ ಧನ ಸಹಕಾರವನ್ನು ನೀಡಿರುವುದಲ್ಲದೆ ಸುಮಾರು 7,50,000/- ವೆಚ್ಚದಲ್ಲಿ ಗುರು ಮಂದಿರಕ್ಕೆ ಪ್ರಸಾದಾಲಯವನ್ನು ನಿರ್ಮಾಣ ಮಾಡಿ ನೀಡಿರುವುದರ ಬಗ್ಗೆ ಪ್ರಸ್ತಾಪಿಸಿದರು. ಯುವವಾಹಿನಿ ಉತ್ತಮ ಕೆಲಸಕಾರ್ಯಗಳನ್ನು ನಿರ್ವಹಿಸುತ್ತಾ, ಮಾತೃ ಸಂಸ್ಥೆಯಾದ ಬಿಲ್ಲವ ಸಂಘದೊಂದಿಗೆ ನಿಕಟ ಸಂಪರ್ಕವನ್ನು ಹೊಂದಿರುವುದು ನಿಜಕ್ಕೂ ಘಟಕಕ್ಕೆ ಹಿರಿಮೆ ಮುಖ್ಯ ಅತಿಥಿಗಳು ಬಾಸ್ಕರ್ ಸಾಲ್ಯಾನ್ ಶ್ಲಾಘಿಸಿದರು.

ಹಳೆಯಂಗಡಿ ಘಟಕವು ಉತ್ತಮ ಸಮಾಜ ಸೇವಾ ಕಾರ್ಯಗಳನ್ನು ಮಾಡುತ್ತಿದ್ದು, ಕೇಂದ್ರ ಸಮಿತಿಯ ಪ್ರತಿಯೊಂದು ಕಾರ್ಯಕ್ರಮಗಳಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡು ಉತ್ತಮವಾಗಿ ಸಹಕಾರವನ್ನು ನೀಡುತ್ತಿದೆ ಎಂದು ಕೇಂದ್ರ ಸಮಿತಿಯ ಅಧ್ಯಕ್ಷರು ಹರೀಶ್ ಕೆ. ಪೂಜಾರಿ ನುಡಿದರು.

ಉದ್ಘಾಟನೆಯನ್ನು ನೆರವೇರಿಸಿ ಯುವವಾಹಿನಿ ಹಳೆಯಂಗಡಿ ಘಟಕವು ಮಾತೃ ಸಂಸ್ಥೆಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಸಂಸ್ಥೆ ಪ್ರತಿಯೊಂದು ಹೆಜ್ಜೆಯಲ್ಲಿಯೂ ಸಂಘದ ಹಿರಿಯರ ಮಾರ್ಗದರ್ಶನದಲ್ಲಿ ನಡೆಯುತ್ತಿರುವುದರಿಂದ ಘಟಕವು ಉತ್ತಮವಾಗಿ ಕಾರ್ಯನಿರ್ವಹಿಸಲು ಅನುಕೂಲವಾಗಿದೆ ಎಂದು ಬಿಲ್ಲವ ಸಂಘ ಅಧ್ಯಕ್ಷರು ಚಂದ್ರಶೇಖರ್ ನಾನಿಲ್ ಶುಭ ಹಾರೈಸಿದರು.

ಬಿಲ್ಲವ ಸಂಘದ ಎಲ್ಲಾ ಪದಾಧಿಕಾರಿಗಳ ಸಹಕಾರದೊಂದಿಗೆ ಮಾರ್ಗದರ್ಶನದಲ್ಲಿ ಯುವವಾಹಿನಿ ಘಟಕವನ್ನು ಮುನ್ನಡೆಸುವುದಾಗಿ ನೂತನ ಅಧ್ಯಕ್ಷರು ಹಿತಾಕ್ಷಿ ನಾರಾಯಣ್ ಹೇಳಿದರು.

ಸಮಾರಂಭದ ಅಧ್ಯಕ್ಷರು ಯುವವಾಹಿನಿ ಘಟಕದ ನಿಕಟಪೂರ್ವ ಅಧ್ಯಕ್ಷರು ಕಿರಣ್ ಕುಮಾರ್ ಅಧ್ಯಕ್ಷಾವಧಿಯಲ್ಲಿ ಸಹಕರಿಸಿದ ಸರ್ವರಿಗೂ ಅಭಿನಂದನೆ ಸಲ್ಲಿಸಿದರು.

ಸಂಘದ ಕೋಶಾಧಿಕಾರಿ ರಮೇಶ್ ಬಂಗೇರ ಸ್ವಾಗತಿಸಿದರು. ನೂತನ ಕಾರ್ಯದರ್ಶಿ ಪೂರ್ಣಿಮಾ ಅಭಿನಂದನೆಗೈದರು. ಗೌರವ ಪ್ರಧಾನ ಕಾರ್ಯದರ್ಶಿ ಹಿಮಕರ್ ಟಿ ಸುವರ್ಣ ಕಲ್ಲಾಡಿ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!