ಯುವವಾಹಿನಿ(ರಿ.) ಕೊಲ್ಯ ಘಟಕ

ಸಂಭ್ರಮದ ಮಹಿಳಾ ದಿನಾಚರಣೆ

ಕೊಲ್ಯ: ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ದಿನಾಂಕ 13-03-2024 ರಂದು ಯುವವಾಹಿನಿ(ರಿ.) ಕೊಲ್ಯ ಘಟಕದ ಸಾಪ್ತಾಹಿಕ ಸಭೆಯಂದು ಘಟಕದ ಮಹಿಳಾ ಸದಸ್ಯರಿಗೆ ಹಾಗೂ ನಾರಾಯಣ ಗುರು ಮಹಿಳಾ ಮಂಡಳಿ ಸದಸ್ಯರಿಗೆ ವಿವಿಧ ಸ್ಪರ್ಧೆ ನಡೆಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಮಹಿಳಾ ಸದಸ್ಯರಿಗೆ ಅಂತರ್ಜಾಲದಲ್ಲಿ ನಾರಿಯರಿಗೊಂದು ಸವಾಲು ರಸ ಪ್ರಶ್ನೆ ಸ್ಪರ್ಧೆ ನಡೆಸಲಾಗಿತ್ತು. ಕೊಲ್ಯ ಘಟಕದ ಕಾರ್ಯದರ್ಶಿ ಜೀವನ್ ಕೊಲ್ಯ ಮಹಿಳೆಯರಿಗೆ ಅಂತರ್ಜಾಲ ಸ್ಪರ್ಧೆ ನಡೆಸಿಕೊಟ್ಟರು. ಮಹಿಳಾ ಸಾಧಕರ ಕುರಿತಾಗಿ ಗಂಟೆಗೊಂದು ಪ್ರಶ್ನೆಗಳನ್ನು ಗುಂಪಿನಲ್ಲಿ ಹಾಕಿ ವೇಗವಾಗಿ ಸರಿಯಾದ ಉತ್ತರ ನೀಡಿದ ಮಹಿಳಾ ಸದಸ್ಯರಿಗೆ ಅಂಕಗಳನ್ನು ನೀಡಿ ಅತೀ ಹೆಚ್ಚು ಅಂಕ ಪಡೆದ ಮಹಿಳಾ ಸದಸ್ಯರಿಗೆ ಬಹುಮಾನ ನೀಡಲಾಯಿತು.

ಸ್ಪರ್ಧೆಯಲ್ಲಿ ಪೂರ್ಣಿಮಾ ಕುಂಪಲ ಪ್ರಥಮ, ಅನ್ವಿತಾ ಎ. ದ್ವಿತೀಯ, ಸೌಮ್ಯ ಕುಸುಮಾಕರ್ ಹಾಗೂ ಶಮ ಕೊಲ್ಯ ತೃತೀಯ, ಆಶಾ ಆರ್. ಕೋಟೆಕಾರ್ ಚತುರ್ಥ,  ವಿಜೀತ ಪಂಚಮ ಬಹುಮಾನ ಪಡೆದರು. ಮಹಿಳಾ ಸದಸ್ಯರು ಬಹಳ ಆಸಕ್ತಿಯಿಂದ ಸ್ಪರ್ಧೆಯಲ್ಲಿ ಭಾಗವಹಿಸಿದರು.

ಸಮಾಜದಲ್ಲಿ ಯಾವುದಕ್ಕೂ ಹೆದರದೆ ಮುನ್ನುಗ್ಗಿ ಯಶಸ್ಸು ಸಾಧಿಸಿ ಎಂದು ಕೊಲ್ಯ ಘಟಕದ ಅಧ್ಯಕ್ಷರು ಲತೀಶ್ ಸಂಕೋಳಿಗೆ ಸ್ಪರ್ಧೆಯ ಬಹುಮಾನ ವಿತರಣಾ ಸಂದರ್ಭದಲ್ಲಿ ನುಡಿದು ಅಭಿನಂದನೆ ಸಲ್ಲಿಸಿದರು.

ಸುಸಂದರ್ಭದಲ್ಲಿ ಕೇಂದ್ರ ಸಮಿತಿಯ ಸಂಘಟನಾ ನಿರ್ದೇಶಕರು, ಕೊಲ್ಯ ಘಟಕದ ನಿಕಟ ಪೂರ್ವ ಅಧ್ಯಕ್ಷರು ಸುಂದರ್ ಸುವರ್ಣ, ನಾರಾಯಣ ಗುರು ಮಹಿಳಾ ಮಂಡಳಿ ಅಧ್ಯಕ್ಷರು ರೇವತಿ ವಿಶ್ವನಾಥ್ ಕುಂಪಲ, ಘಟಕದ ಪ್ರಥಮ ಉಪಾಧ್ಯಕ್ಷರು ಸುಧಾ ಸುರೇಶ್, ದ್ವಿತೀಯ ಉಪಾಧ್ಯಕ್ಷರು ನಿತಿನ್ ಕರ್ಕೇರ, ಕೋಶಾಧಿಕಾರಿ ವಿನುತ ಬಾಲಕೃಷ್ಣ ವಿಜೇತರಿಗೆ ಬಹುಮಾನ ವಿತರಿಸಿದರು.

ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರು ರಶ್ಮಿ ಸನಿಲ್ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ ಅನುಭವ ಹಂಚಿಕೊಂಡರು. ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಹಾಗೂ ಕೇಂದ್ರ ಸಮಿತಿಯ ಜಾಲತಾಣ ಸದಸ್ಯೆ ಅರ್ಚನಾ ಎಂ ಬಂಗೇರ ಮಹಿಳಾ ದಿನಾಚರಣೆಯ ಖುಷಿಯ ಕ್ಷಣಗಳನ್ನು ಮೆಲುಕು ಹಾಕಿದರು.

ಕೊಲ್ಯ ಘಟಕದ ಕಾರ್ಯದರ್ಶಿ ಜೀವನ್ ಕೊಲ್ಯ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿಕೊಟ್ಟರು. ಅರ್ಚನಾ ಎಂ. ಬಂಗೇರ ಧನ್ಯವಾದ ಸರ್ಮಪಣೆಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!