ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಸಮಾಜ ಕಟ್ಟುವಲ್ಲಿ ಯುವವಾಹಿನಿಯ ಪಾತ್ರ ಮಹತ್ತರ : ಡಾ|ಯೋಗೀಶ್ ಕೈರೊಡಿ

ಮಂಗಳೂರು: ಸಮಾಜಮುಖಿ ಚಿಂತನೆಗಳೊಂದಿಗೆ ಸಮಾಜದ ಕಟ್ಟಕಡೆಯ ಕುಟುಂಬಗಳ ನಿರಂತರ ಭೇಟಿ, ಭವಿಷ್ಯದ ಸವಾಲುಗಳು ಹಾಗೂ ಅವರ ಮೂಲಭೂತ ಸಮಸ್ಯೆಗಳನ್ನು ಅರ್ಥೈಸಿಕೊಂಡು ಅವರಿಗೆ ಸ್ಪೂರ್ತಿಯಾಗಿ ಆರೋಗ್ಯ ಪೂರ್ಣ ಸಮಾಜ ಕಟ್ಟುವಲ್ಲಿ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳಿಂದ ಅವಿರತವಾಗಿ ಶ್ರಮಿಸುತ್ತಿದ್ದು ಈ ನಿಟ್ಟಿನಲ್ಲಿ ಯುವವಾಹಿನಿಯ ಪಾತ್ರ ಮಹತ್ತರವಾದುದು ಎಂದು ಅಳ್ವಾಸ್ ಪದವಿ ಕಾಲೇಜಿನ ಉಪನ್ಯಾಸಕರಾದ ಡಾ|ಯೋಗೀಶ್ ಕೈರೊಡಿ ತಿಳಿಸಿದರು.

ಅವರು ದಿನಾಂಕ 24 ಮಾರ್ಚ್ 2024ರ ಭಾನುವಾರ ಯುವವಾಹಿನಿ ಸಭಾಂಗಣ ಉರ್ವಾಸ್ಟೋರ್ ಇಲ್ಲಿ ಜರಗಿದ ವಿವಿಧ ಘಟಕಗಳ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಗಾರ ಯಾನ-2024ರ ಸಮನ್ವಯಕಾರರಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಗಾರದ ಉದ್ಘಾಟನೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರರಾದ ಡಾ.ಎನ್. ಟಿ. ಆಂಚನ್ ನೆರವೇರಿಸಿ ಮಾತನಾಡಿ ಯುವ ಸಮುದಾಯ ಯುವವಾಹಿನಿಯ ಧೇಯೋದ್ದೇಶಗಳನ್ನು ಅರಿತುಕೊಂಡು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿದಾಗ ಸಂಘಟನೆ ಬಲಿಷ್ಠವಾಗಿ ರೂಪುಗೊಳ್ಳುತ್ತದೆ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ವಹಿಸಿದ್ದರು. ಕಾರ್ಯಗಾರದಲ್ಲಿ ಸಾಮಾಜಿಕ ರಂಗದಲ್ಲಿ ಯುವವಾಹಿನಿಯ ಪಾತ್ತದ ಬಗ್ಗೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿ ಇದರ ಅಧ್ಯಕ್ಷರಾದ ಸಂಪತ್ ಬಿ. ಸುವರ್ಣ ಹಾಗೂ ಕಾರ್ಪೊರೇಟ್ ವಕೀಲರಾದ ನವನೀತ್ ಡಿ. ಹಿಂಗಾಣಿ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟರು.

ಯುವವಾಹಿನಿ ಅಂದು..ಇಂದು..ಮುಂದು ಎಂಬ ವಿಚಾರದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರುಗಳ ಜೊತೆಗೆ ಸಂವಾದ ಕಾರ್ಯಾಗಾರ ನಡೆಯಿತು.

ಸಂಸ್ಥೆಯ ಲೆಕ್ಕಪತ್ರ ನಿರ್ವಹಣೆಯ ಕುರಿತು ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ ಮಾಹಿತಿ ನೀಡಿದರು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಯುವವಾಹಿನಿ ಮಾರ್ಗದರ್ಶಿ ಕುರಿತು ಹಾಗೂ ಬೈಲಾ ಮತ್ತು ಘಟಕಗಳು ಎದುರಿಸುತ್ತಿರುವ ಸವಾಲುಗಳು ಹಾಗೂ ಪರಿಹಾರಗಳ ಬಗ್ಗೆ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ ಮಾಹಿತಿ ನೀಡಿದರು.
ಯುವವಾಹಿನಿ ಕೇಂದ್ರ ಸಮಿತಿಯ ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಅಜೀತ್ ಕುಮಾರ್ ಪಾಲೇರಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ ವಂದಿಸಿದರು. ಕೇಂದ್ರ ಸಮಿತಿಯ ದ್ವೀತಿಯ ಉಪಾಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಕಾರ್ಯಕ್ರಮ ನಿರ್ವಹಿಸಿದರು. ಕೇಂದ್ರ ಸಮಿತಿಯ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಸಂಘಟನಾ ಕಾರ್ಯದರ್ಶಿಗಳು ಉಪಸ್ಥಿತರಿದ್ದು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!