ಯುವವಾಹಿನಿ(ರಿ.) ಮಂಗಳೂರು ಘಟಕ

ಭಜನಾ ಸಂಕೀರ್ತನೆ

ಮಂಗಳೂರು: ಯುವವಾಹಿನಿ(ರಿ.) ಮಂಗಳೂರು ಘಟಕದ ವತಿಯಿಂದ ಪ್ರತಿ ಸೋಮವಾರ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಕುದ್ರೋಳಿಯಲ್ಲಿ ನಡೆಸಿಕೊಂಡು ಬರುತ್ತಿರುವ ಭಜನಾ ಸಂಕೀರ್ತನೆಯ ಅಂಗವಾಗಿ ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 18-03-2024 ಸೋಮವಾರದಂದು ಯುವವಾಹಿನಿ(ರಿ.) ಕೂಳೂರು ಘಟಕದ ಸದಸ್ಯರು ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಇಂದಿರಾ ಸುರೇಶ್, ಒಂದನೇ ಉಪಾಧ್ಯಕ್ಷರಾದ ಲತೀಶ್ ಪೂಜಾರಿ, ಎರಡನೇ ಉಪಾಧ್ಯಕ್ಷರಾದ ಗೀತಾ, ಮಾಜಿ ಅಧ್ಯಕ್ಷರಾದ ದೀಕ್ಷಿತ್ ಸಿ. ಎಸ್., ಮಾರ್ಗದರ್ಶಕರಾದ ಜಯಾನಂದ ಅಮೀನ್, ಚಂದಪ್ಪ ಸನಿಲ್, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ವಿಮಲಾ, ಜೊತೆ ಕಾರ್ಯದರ್ಶಿ ಕೀರ್ತನ, ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಸುಮಾರು 30 ಸದಸ್ಯರು ಸಂಜೆ 5:30 ರಿಂದ 7:00 ಗಂಟೆಯವರೆಗೆ ನಡೆದ ಭಜನಾ ಸಂಕೀರ್ತನೆಯಲ್ಲಿ ಪಾಲ್ಗೊಂಡರು. 7:00 ಗಂಟೆಗೆ ಮಂಗಳ ಹಾಡುವ ಮೂಲಕ ಭಜನಾ ಸೇವೆಯನ್ನು ಮುಕ್ತಾಯಗೊಳಿಸಲಾಯಿತು. ನಾರಾಯಣ ಗುರು ಸ್ವಾಮಿಗಳಿಗೆ ಆರತಿ ಬೆಳಗಿದ ನಂತರ ಮಂಗಳೂರು ಘಟಕದ ವತಿಯಿಂದ ಅಧ್ಯಕ್ಷರಿಗೆ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಿದರು. ಮಂಗಳೂರು ಘಟಕದ ಅಧ್ಯಕ್ಷರಾದ ನಾಗೇಶ್ ಅಮೀನ್, ಮಾಜಿ ಅಧ್ಯಕ್ಷರಾದ ಸಾಧು ಪೂಜಾರಿ, ಭಜನಾ ಸಂಚಾಲಕರು ಪೂವಪ್ಪ ಕುಕ್ಯಾನ್, ಪದಾಧಿಕಾರಿಗಳು ಮತ್ತು ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮುಕ್ತಾಯದ ಹಂತದಲ್ಲಿ ಅವಲಕ್ಕಿ ಪಾನಕದ ವ್ಯವಸ್ಥೆ ಮಾಡಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!