Yuvavahini

MAY 17, 2024 4.51 PM IST

ಯುವವಾಹಿನಿ(ರಿ.) ಕೂಳೂರು ಘಟಕ

ಈಶ ಫೌಂಡೇಶನ್ ಕೊಯಂಬತ್ತೂರು ಪ್ರವಾಸ

ಮಂಗಳೂರು: ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ಈಶ ಫೌಂಡೇಶನ್ ಕೊಯಂಬತ್ತೂರು ಪ್ರವಾಸವನ್ನು ದಿನಾಂಕ 17-05-2024 ರಿಂದ 19-05-2024 ರವರೆಗೆ ಜೊತೆ ಕಾರ್ಯದರ್ಶಿ ಕೀರ್ತನಾ ಇವರ ಸಂಚಾಲಕತ್ವದಲ್ಲಿ ಹಾಗೂ ಸದಸ್ಯರಾದ ತುಳಸಿ ಸುಜೀರ್ ಇವರ ಸಹ ಸಂಚಾಲಕತ್ವದಲ್ಲಿ ಆಯೋಜಿಸಲಾಗಿತ್ತು.
ದಿನಾಂಕ 17-05-2024 ರಂದು ರಾತ್ರಿ 10.30 ರ ಸಮಯಕ್ಕೆ ಎಲ್ಲರೂ ಸೆಂಟ್ರಲ್ ರೈಲು ನಿಲ್ದಾಣದ ಬಳಿ ಬಂದು ಸೇರಿ ಅಲ್ಲಿಂದ 11.55 ರ ವೆಸ್ಟ್ ಕೋಸ್ಟ್ ರೈಲಿನಲ್ಲಿ 95 ಜನರ ತಂಡ ಈಶ ಫೌಂಡೇಶನ್ ಪ್ರವಾಸ ಹೊರಟರು. ರಾತ್ರಿ ಪ್ರಯಾಣದ ನಂತರ ಬೆಳಗ್ಗಿನ ಜಾವ 6.00 ಗಂಟೆಗೆ ಎಲ್ಲರೂ ಪಾಲಕ್ಕಾಡ್ ರೈಲ್ವೆ ಸ್ಟೇಶನ್ ನಲ್ಲಿ ಇಳಿದು ಅಲ್ಲಿಂದ ಪ್ರವಾಸದ ಮಾರ್ಗದರ್ಶಕರ ಸೂಚನೆಯ ಮೇರೆಗೆ ಬಸ್ಸಿನತ್ತ ಹೆಜ್ಜೆ ಹಾಕಿದೆವು. ಅಲ್ಲಿಂದ ಮೊದಲೇ ಯೋಜನೆ ಹಾಕಿದ ಹಾಗೆ ಪ್ರಯಾಣಿಕರನ್ನು ಎರಡು ತಂಡವಾಗಿ ಮಾಡಿ ಎರಡು ಬಸ್ಸಿನಲ್ಲಿ ಫ್ರೆಶ್ ಅಪ್ ಆಗಲು ರೂಮ್ ಕಡೆ ಪಯಣ ಮಾಡಿ ಅಲ್ಲಿ ಮೊದಲೇ ನಿಗದಿ ಮಾಡಿದ ರೂಮ್ ನಲ್ಲಿ ಫ್ರೆಶ್ ಅಪ್ ಆಗಿ ಬೆಳಗ್ಗಿನ ರುಚಿಯಾದ ಉಪಾಹಾರವನ್ನು ಮುಗಿಸಿ, ಮತ್ತೆ ಪಯಣವನ್ನು ಮುಂದುವರಿಸಲಾಯಿತು.

ಮೊದಲಿಗೆ ಪಾಲಕ್ಕಾಡ್ ಹನುಮಾನ್ ದೇವರ ದರ್ಶನ ಮುಗಿಸಿ, ಮಲ್ಲಾಪುರಾಮ್ ಡ್ಯಾಂ ವೀಕ್ಷಣೆ, ಪಾಕ್೯, ರೋಪ್ ಕಾರ್ ನಲ್ಲಿ ಕುಳಿತುಕೊಂಡು ರಮಣೇಯ ದೃಶ್ಯವನ್ನು ಕಣ್ತುಂಬಿಕೊಂಡು, ಸುಮಾರು ಒಂದು ಗಂಟೆಗಳ ಕಾಲ ಸುಂದರ ಪ್ರಕೃತಿಯ ಸೌಂದರ್ಯವನ್ನು ಆಸ್ವಾದಿಸಿ ಅಲ್ಲಿಂದ ಮಧ್ಯಾಹ್ನದ ಊಟ ಮುಗಿಸಿ ಸಂಜೆ 4.00 ಗಂಟೆಗೆ ಈಶ ಫೌಂಡೇಶನ್ ತಲುಪಿದರು. ಆದಿಯೋಗಿ ದರ್ಶನ ಪಡೆದು ಅಲ್ಲಿನ ಪ್ರಶಾಂತ ವಾತಾವರಣದ ಮಧ್ಯೆ ಧ್ಯಾನ ಮಂದಿರದಲ್ಲಿ ಮನಸ್ಸನ್ನು ಪರಿಶುದ್ಧಗೊಳಿಸಿ ನಂತರ ಸಂಜೆ 7.20 ರ ಲೇಸರ್ ಶೋ ವೀಕ್ಷಣೆ ಮಾಡಿ, ಬಸ್ಸಿನಲ್ಲಿ ರೈಲ್ವೆ ಸ್ಟೇಶನ್ ಪಯಣ ಮಾಡಿ ಅಲ್ಲಿ ಊಟದ ವ್ಯವಸ್ಥೆ. ರಾತ್ರಿ 11.00 ಗಂಟೆಗೆ ಪಾಲಕ್ಕಾಡ್ ನಿಂದ ವೆಸ್ಟ್ ಕೋಸ್ಟ್ ರೈಲಿನಲ್ಲಿ ಮಂಗಳೂರು ಕಡೆಗೆ ಹೊರಟು ಬೆಳಗ್ಗಿನ ಜಾವ 9.00 ಗಂಟೆಗೆ ಮಂಗಳೂರು ರೈಲ್ವೆ ನಿಲ್ದಾಣ ತಲುಪಿ ಪ್ರವಾಸದ ಸುಂದರ ಕ್ಷಣಗಳನ್ನು ಮನಸ್ಸಿನಲ್ಲಿ ತುಂಬಿಕೊಂಡು ಎಲ್ಲರೂ ತಮ್ಮ ತಮ್ಮ ಮನೆ ಕಡೆ ಹೆಜ್ಜೆ ಹಾಕಿದೆವು. ಪ್ರವಾಸದಲ್ಲಿ ಘಟಕದ ಅಧ್ಯಕ್ಷರಾದ ಇಂದಿರಾ ಸುರೇಶ್, ನಿಕಟ ಪೂರ್ವ ಅಧ್ಯಕ್ಷರಾದ ಯಶವಂತ್ ಪೂಜಾರಿ, ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ನಯನ ರಮೇಶ್, ದೀಕ್ಷಿತ್ ಸಿ ಎಸ್, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಕಾರ್ಯದರ್ಶಿ ನಯನ ಕೋಟ್ಯಾನ್, ಕೋಶಾಧಿಕಾರಿ ವಿಘ್ನೇಶ್, ಪದಾಧಿಕಾರಿಗಳು, ಸದಸ್ಯರು ಮತ್ತು ಕುಟುಂಬದವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!