ಯುವವಾಹಿನಿ(ರಿ) ಕಂಕನಾಡಿ ಘಟಕ

ಕಂಕನಾಡಿ ಯುವವಾಹಿನಿಯ 2017-18ನೇ ಸಾಲಿನ ಪದಗ್ರಹಣ

ಯುವವಾಹಿನಿ(ರಿ) ಕಂಕನಾಡಿ ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 26.03.2017 ನೇ ಆದಿತ್ಯವಾರ ಉಜ್ಜೋಡಿ ಶ್ರೀ ಮಹಾಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಜರುಗಿತು.

ಗೋಪಾಲ ಪೂಜಾರಿ ನೇತೃತ್ವದ 21 ಸದಸ್ಯರ ತಂಡವು ಸಂಘಟನೆಯನ್ನು ಸಮರ್ಥವಾಗಿ ಮುನ್ನಡೆಸುವ ಬಗ್ಗೆ ಪ್ರಮಾಣ ವಚನ ಸ್ವೀಕರಿಸಿದರು.

2017-18 ನೇ ಸಾಲಿನ ಕಾರ್ಯಕಾರಿ ಸಮಿತಿ :

ಅಧ್ಯಕ್ಷರು : ಗೋಪಾಲ ಪೂಜಾರಿ
ಉಪಾಧ್ಯಕ್ಷರು : ಭವಿತ್ ರಾಜ್
ಕಾರ್ಯದರ್ಶಿ : ಮೋಹನ್ ಜಿ.ಅಮೀನ್
ಜತೆ ಕಾರ್ಯದರ್ಶಿ : ಶ್ರೀಮತಿ ನಯನಾ
ಕೋಶಾಧಿಕಾರಿ : ಶ್ರೀಮತಿ ಸುಮಾ ವಸಂತ್

ನಿರ್ದೇಶಕರು :
ಕ್ರೀಡೆ ಮತ್ತು ಆರೋಗ್ಯ : ರಾಹುಲ್ ಮತ್ತು ಜಯರಾಜ್ ಕೋಟ್ಯಾನ್
ವಿದ್ಯಾರ್ಥಿ ಸಂಘಟನೆ : ಸುವಾನ್
ಕಲೆ ಮತ್ತು ಸಾಹಿತ್ಯ : ಪ್ರಥ್ವೀರಾಜ್ ಮತ್ತು ಜೇಷ್ಮಾ
ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಸುರೇಶ್ ಎಮ್.ಎಸ್
ವ್ಯಕ್ತಿತ್ವ ವಿಕಸನ : ರೋಹಿತ್‌ ಕುಮಾರ್
ಸಮಾಜ ಸೇವೆ : ಸುರೇಖಾ ಮೋಹನ್
ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ : ಜನಾರ್ಧನ
ಪ್ರಚಾರ ಸಮಿತಿ : ಗೌತಮ್ ಜಪ್ಪಿನಮೊಗರು
ಶೈಕ್ಷಣಿಕ ದತ್ತು ನಿಧಿ : ದಿವ್ಯ ಪ್ರಸಾದ್
ಪ್ರವಾಸ ಸಮಿತಿ : ಅರುಣ್ ಕುಮಾರ್ ಮತ್ತು ಕೃಪಾ ಹರೀಶ್
ಸಂಘಟನಾ ಕಾರ್ಯದರ್ಶಿಗಳು : ಪ್ರೀತಮ್ ಕುಂದರ್, ಲೋಕೇಶ್ ಅಮೀನ್, ಪ್ರಶಾಂತ್

ಈ ಸಂದರ್ಭದಲ್ಲಿ ಬೆಂಗಳೂರಿನ ಖ್ಯಾತ ವಕೀಲರಾದ ನವನೀತ ಡಿ.ಹಿಂಗಾಣಿ, ಉಜ್ಜೋಡಿ ಶ್ರೀ ಮಹಾಕಾಳಿ ಸೇವಾ ಸಮಿತಿಯ ಅದ್ಯಕ್ಷರಾದ ಶ್ರೀ ಕೆ.ಶ್ರೀನಿವಾಸ ಬಂಗೇರ, ಮಂಗಳೂರು ಫಾದರ್ ಮಲ್ಲರ್ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಡಾ.ರೋಶನ್ ಎಂ.ನೆಕ್ಕೆರೆಮಾರ್, ಉದ್ಯಮಿ ನಾಗೇಶ್ ಕೋಟ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಭವಿತ್ ರಾಜ್ 2016-17 ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ ಪದಪ್ರದಾನ ಮಾಡಿದರು.

ಸಮಾರಂಭದ ಅದ್ಯಕ್ಷತೆ ವಹಿಸಿದ್ದ ಕಂಕನಾಡಿ ಯುವವಾಹಿನಿಯ 2016-17 ನೇ ಸಾಲಿನ ಅದ್ಯಕ್ಷರಾದ ಶ್ರೀ ಹರೀಶ್ ಕೆ.ಸನಿಲ್ ಸ್ವಾಗತಿಸಿದರು ಮತ್ತು ಕಳೆದ ಒಂದು ವರ್ಷದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ತಿಳಿಸಿದರು.

ರಾಕೇಶ್ ಕುಮಾರ್ ಪ್ರಸ್ತಾವನೆ ಮಾಡಿದರು. ನೂತನ ಕಾರ್ಯದರ್ಶಿ ಮೋಹನ್ ಜಿ.ಅಮೀನ್ ಧನ್ಯವಾದ ನೀಡಿದರು. ಸಭಾ ಕಾರ್ಯಕ್ರಮದ ಮೊದಲು ಘಟಕದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ಉಪನ್ಯಾಸಕ ರಾಕೇಶ್ ಕುಮಾರ್, ಕಂಕನಾಡಿ ಯುವವಾಹಿನಿಯ ಸುವಾನ್ ಮತ್ತು ಜೇಷ್ಮಾ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!