Yuvavahini

JUL 14, 2024 9.18 AM IST

ಸಂಘಟನೆಯ ಸಮಾಜಮುಖಿ ಚಟುವಟಿಕೆ, ಸಮಾಜವನ್ನು ಬಲಿಷ್ಠಗೊಳಿಸುವುದು ಹಾಗೂ ಸಮಾಜ ಬಾಂಧವರಿಗೆ ಸ್ಪಂದಿಸು ವುದರಿಂದ ಪ್ರತಿಭೆಗಳು ಬೆಳೆಯುತ್ತದೆ ಎನ್ನುವುದಕ್ಕೆ ಯುವವಾಹಿನಿ ಕಾರ್ಯ ವೈಖರಿ ಶ್ಲಾಘನೀಯ - ಸಂಪತ್ ಸುವರ್ಣ

ಯುವವಾಹಿನಿಯ 34ನೇ ನೂತನ ಘಟಕ “ಗ್ರಾಮ ಚಾವಡಿ – ಕೊಣಾಜೆ” – ಉದ್ಘಾಟನೆ – ಪದಗ್ರಹಣ

ಗ್ರಾಮಚಾವಡಿ : ಬ್ರಹಶ್ರೀ ನಾರಾಯಣ ಗುರು ಸೇವಾ ಸಂಘ ಗ್ರಾಮಚಾವಡಿ ಸಭಾಂಗಣದಲ್ಲಿ ದಿನಾಂಕ : 14-07-2024 ರವಿವಾರ ನಡೆದ ಯುವವಾಹಿನಿ 34 ನೇ ನೂತನ ಘಟಕ ಉದ್ಘಾಟನೆಗೊಂಡಿತು.

ನೂತನ ಘಟಕದ ಉದ್ಘಾಟನೆ ಸಮಾರಂಭದಲ್ಲಿ ನಾಯಕನಾದವನು ತಮ್ಮೊಂದಿಗೆ ಇರುವವರನ್ನು ಬಳಸಿಕೊಳ್ಳುವುದಲ್ಲ, ಬೆಳೆಸುವುದು ನಿಜವಾದ ಗುಣ. ಯುವವಾಹಿನಿ ಯಲ್ಲಿ ಅಧ್ಯಕ್ಷ ಪದವಿ ಕೇವಲ ಒಂದು ವರ್ಷ ಅವಧಿಗೆ ಸೀಮಿತವಾಗಿದ್ದು, ವರ್ಷದಲ್ಲಿ ಅಧ್ಯಕ್ಷ ತನ್ನ ತಂಡದೊಂದಿಗೆ ಎಷ್ಟು ಸಾಧನೆ ಮಾಡಲು ಸಾಧ್ಯವೋ ಅಷ್ಟು ಸಾಧನೆ ಮಾಡಲು ಅವಕಾಶ ಕೊಡುತ್ತದೆ. ಹೊರತು ಇನ್ನಷ್ಟು ವರ್ಷ ಪದವಿಯಲ್ಲಿ ಇರಬೇಕು ಎಂದು ಅಧಿಕಾರದಲ್ಲಿ ಜೋತು ಬೀಳಲು ಅವಕಾಶ ನೀಡಲಾರದು ಎಂದು ದಿಕ್ಸೂಚಿ ಭಾಷಣಕಾರರಾಗಿ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾಪನ ಅಧ್ಯಕ್ಷರು ಸಂಪತ್ ಸುವರ್ಣ ನುಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ನಿರ್ದೇಶಕರು ಕೆ. ಟಿ. ಸುವರ್ಣ ಯುವಸಿಂಚನ ಸಂಚಿಕೆ ಬಿಡುಗಡೆಗೊಳಿಸಿದರು. ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಅಧ್ಯಕ್ಷರು ಹರೀಶ್ ಕೆ. ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ (ರಿ) ಗ್ರಾಮ ಚಾವಡಿ ನೂತನ ತಂಡದ ಪರಿಚಯವನ್ನು ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಂದರ್ ಸುವರ್ಣ ಕೊಲ್ಯ ನಡೆಸಿಕೊಟ್ಟರು.

ಕೇಂದ್ರ ಸಮಿತಿ ಅಧ್ಯಕ್ಷರು ಘಟಕದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ವಿಧಿ ಬೋಧಿಸುತ್ತಾ ಪದಗ್ರಹಣಗೈದರು.

ನೂತನ ಘಟಕಕ್ಕೆ ಕಾರಣಿಕರ್ತರಾದ ಯುವವಾಹಿನಿ (ರಿ) ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಸುಂದರ್ ಸುವರ್ಣ ಅವರನ್ನು ಸನ್ಮಾನಿಸಲಾಯಿತು. ಖ್ಯಾತ ಕ್ರೀಡಾಪಟು , ಪ್ರತಿಭಾವಂತ ವಿದ್ಯಾರ್ಥಿನಿ ರೀಕ್ರಾ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.

ಮಂಗಳೂರು ವಿ.ವಿ. ಉಪನ್ಯಾಸಕ ಡಾ। ಭೋಜ ಪೂಜಾರಿ, ಬೆಂಗಳೂರಿನ ಉಪನ್ಯಾಸಕಿ
ಡಾ। ವಿನುತಾ ಸಾಲ್ಯಾನ್, ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ
ಜಗದೀಶಚಂದ್ರ ಡಿ.ಕೆ ಹಾಗೂ ಕೊಲ್ಯ
ಘಟಕಾಧ್ಯಕ್ಷ లತೀಶ್ ಸಂಕೋಳಿಗೆ ಉಪಸ್ಥಿತರಿದ್ದರು.

ಯುವವಾಹಿನಿಯ ನೂತನ 34ನೇ ಗ್ರಾಮಚಾವಡಿ ಘಟಕ ಅಧ್ಯಕ್ಷರು ಹರೀಶ್ ಪೂಜಾರಿ ಕೊಣಾಜೆ ನೂತನ ಘಟಕದ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಸುರೇಖಾ ಎಚ್.ಪೂಜಾರಿ ಸಮ್ಮಾನಿತರನ್ನು ಪರಿಚಯಿಸಿದರು. ಗ್ರಾಮ ಚಾವಡಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ರವೀಂದ್ರ ಬಂಗೇರ ಘಟಕಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ ಸ್ವಾಗತಗೈದರು ಹಾಗೂ ಪ್ರಥಮ ಉಪಾಧ್ಯಕ್ಷರು ಶ್ರೀ ಲೋಕೇಶ್ ಆಮೀನ್ ಪ್ರಸ್ತಾವನೆಗೈದರು .
ದಯಾನಂದ್ ಉಪ್ಪಾರ್ ಹಾಗೂ ರಶ್ಮಿ ಸನಿಲ್ ನಿರೂಪಿಸಿದರು. ನೂತನ ಕಾರ್ಯದರ್ಶಿ ಅಜಿತ್ ಪೂಜಾರಿ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!