Yuvavahini

JUL 31, 2024 12.26 PM IST

ದೇಶ ಸೇವೆ ನಮ್ಮ ಉಸಿರಾಗಿರಲಿ. ದೇಶ ಸೇವೆ ಮಾಡಲು ಇಚ್ಛಿಸುವ ಯುವಕರು ತಮ್ಮ ಕೈಗಳಿಗೆ ಹಚ್ಚೆ ಹಾಕದಿರಿ. - ದಯಾನಂದ ಕೆ. ಮಾಜಿ ಸೈನಿಕರು, ಜೂನಿಯರ್ ಕಮಿಷನ್ಡ್ ಆಫೀಸರ್, ಫೈಟಿಂಗ್ ಫೋರ್ಸ್ ಆರ್ಮ್ಡ್ ಕೋರ್ ಟ್ಯಾಂಕ್ ಸೆಕ್ಷನ್

ಯುವವಾಹಿನಿ ಕೂಳೂರು ಘಟಕ – ಕಾರ್ಗಿಲ್ ವಿಜಯ್ ದಿವಸ್ , ಪ್ರತಿಭಾ ಪುರಸ್ಕಾರ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 31-07-2024 ರಂದು ಜರುಗಿದ ಕಾರ್ಗಿಲ್ ವಿಜಯ್ ದಿವಸ್ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು .

ತಮ್ಮ ಸೈನ್ಯ ಜೀವನದ ಅನುಭವಗಳನ್ನು ಹಾಗೇ ಕೆಲವೊಂದು ಕಷ್ಟದ ಸಮಯದ ಸನ್ನಿವೇಶಗಳನ್ನು ಭಾವುಕರಾಗಿ ಹಂಚಿಕೊಂಡರು. ಯುವಕರು ಸೇನೆಗೆ ಸೇರಲು ಇಚ್ಛಿಸಿದರೆ ದಯವಿಟ್ಟು ಕೈಗಳಿಗೆ ಹಚ್ಚೆ ಹಾಕಬೇಡಿ , ಹಲ್ಲು ಕೀಳಬೇಡಿ, ಸೇನೆಗೆ ಸೇರಲು ದೈಹಿಕ ಸಾಮರ್ಥ್ಯ ಅಗತ್ಯವಾಗಿರುತ್ತದೆ ಎಂದು ಕಿವಿ ಮಾತು ಹೇಳಿದರು.
ಸೇನೆಯಲ್ಲಿ ಸೇವೆ ಸಲ್ಲಿಸಿದ ದಯಾನಂದರವರನ್ನು ಘಟಕದಿಂದ ಗೌರವಿಸಲಾಯಿತು.

ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರು ಇಂದಿರಾ ಸುರೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ನಾರಾಯಣ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಭಾರತಾಂಬೆಗೆ ಪುಷ್ಪಾರ್ಚನೆಗೈದು, ಸಮಾರಂಭದ ಉದ್ಘಾಟನೆ ನೆರವೇರಿಸಿದರು.

ಕಾರ್ಗಿಲ್ ಯುದ್ಧದಲ್ಲಿ ವೀರ ಮರಣವನ್ನಪ್ಪಿ ಭಾರತ ಮಾತೆಯ ಮಡಿಲು ಸೇರಿದ ವೀರ ಯೋಧರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದೀಪ ಬೆಳಗಿಸುವ ಮೂಲಕ ನುಡಿ ನಮನ ಸಲ್ಲಿಸಲಾಯಿತು.

ಸನ್ಮಾನ

ಕಾರ್ಯಕ್ರಮದಲ್ಲಿ ದಿನಾಂಕ 30/07/2024 ರಂದು ಸಂಜೆ 13F ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸಿನಲ್ಲಿ ಪ್ರಯಾಣಿಸುತಿದ್ದ ವಿದ್ಯಾರ್ಥಿನಿಯೊಬ್ಬಳು ತಟ್ಟನೆ ಎದೆ ನೋವಿನಿಂದ ಹಾರ್ಟ್ ಅಟ್ಯಾಕ್ ನ ಸೂಚನೆ ನೀಡಿದಾಗ ಎಚ್ಚೆತ್ತುಗೊಂಡು ಹುಡುಗಿಯ ಪ್ರಾಣ ಉಳಿಸಲು ಸಹಾಯ ಮಾಡಿದ ಬಸ್ಸಿನ ಚಾಲಕ ನಿರ್ವಾಹಕರಾದ ಗಜೇಂದ್ರ ಕುಂದರ್ ಹಾಗು ಮಹೇಶ್ ಪೂಜಾರಿ ಇವರನ್ನು ಸನ್ಮಾನಿಸಿದರು.

ಪ್ರತಿಭಾ ಪುರಸ್ಕಾರ

2023-24 ಸಾಲಿನ SSLC ಮತ್ತು PUC ಪರೀಕ್ಷೆಯಲ್ಲಿ ತೇರ್ಗಡೆಯಾದ ಘಟಕದ ವಿದ್ಯಾರ್ಥಿಗಳಿಗೆ ಹಾಗೂ ಉನ್ನತ ದರ್ಜೆಯಲ್ಲಿ ಉತ್ತೀರ್ಣರಾದ ಸುಮಾರು 22 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಘಟಕದ ವಿದ್ಯಾರ್ಥಿ ಸಂಘಟನಾ ನಿರ್ದೇಶಕರು ಮಧುಶ್ರೀ ಪ್ರಶಾಂತ್ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಾಮಾಜಿಕ ಜಾಲತಾಣ ಸಂಪಾದಕರು, ಮಾಜಿ ಸೈನಿಕರು ನವಾನಂದ ಇವರನ್ನು ಘಟಕದ ವತಿಯಿಂದ ಗೌರವಿಸಿದರು.

ಗೌರವ ಸ್ವೀಕಾರ ಮಾಡಿದ ಇವರು ದೇಶಸೇವೆ ಎಂದರೆ ಕೇವಲ ಸೈನ್ಯಕ್ಕೆ ಸೇರಿ ಮಾತ್ರ ಸೇವೆ ಮಾಡುವುದಲ್ಲ. ನಾವಿರುವ ಸಮಾಜಕ್ಕೆ ನಮ್ಮ ಕೈಲಾದ ಚಿಕ್ಕ ಸೇವೆಯನ್ನು ಮಾಡುವುದು ಕೂಡ ದೇಶ ಸೇವೆ ಎಂದರು. ಕಾರ್ಗಿಲ್ ವಿಜಯ್ ಒಂದು ಯುದ್ದ ಅಲ್ಲ. ಅದೊಂದು ಭಾರತ ಸೇನೆಯು ಮಾಡಿರುವ ಒಂದು ಆಪರೇಷನ್ ಅಷ್ಟೇ. ಇಂದು ಮಾಡಿದ ಸನ್ಮಾನ.. ಅಂದು ಕಾರ್ಗಿಲ್ ಅಪರೇಷನ್ ನಲ್ಲಿ ಭಾರತಮಾತೆಯ ಮಡಿಲು ಸೇರಿದ ವೀರ ಯೋಧರಿಗೆ ಸಲ್ಲುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿ ಯುವವಾಹಿನಿ (ರಿ) ಕೇಂದ್ರ ಸಮಿತಿ ಅಧ್ಯಕ್ಷರು ಹರೀಶ್ ಕೆ.ಪೂಜಾರಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ) ಕೂಳೂರು ಘಟಕದ ಮಾಜಿ ಅಧ್ಯಕ್ಷರು ಪುಷ್ಪರಾಜ್ ಕೂಳೂರು, ಮಾಜಿ ಸೈನಿಕರು, ಆರ್ಮಿ ಮೆಡಿಕಲ್ ಕೋರ್ಪ್ ಇವರನ್ನು ಅಭಿನಂದಿಸಲಾಯಿತು.

ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷರು ಇಂದಿರಾ ಸುರೇಶ್ ಇಂದು ಅಭಿನಂದನೆ ಸ್ವೀಕರಿಸಿದ ಮಕ್ಕಳು ಸೈನ್ಯಕ್ಕೆ ಸೇರಿ ದೇಶ ಸೇವೆ ಮಾಡಲು ಆಸಕ್ತಿ ಇದ್ದರೆ ಹೆತ್ತವರು ಪ್ರೋತ್ಸಾಹಿಸಿ ಎಂದು ಮಾರ್ಗದರ್ಶನವಿತ್ತರು.

ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ನಯನ ಕೋಟ್ಯಾನ್ ಮತ್ತು ಕಾರ್ಯಕ್ರಮದ ಸಂಚಾಲಕರು ವ್ಯಕ್ತಿತ್ವ ವಿಕಸನ ನಿರ್ದೇಶಕರು ಶೋಭಾ, ಘಟಕದ ನಿಕಟಪೂರ್ವ ಅಧ್ಯಕ್ಷರು ಯಶವಂತ್ ಪೂಜಾರಿ , ಪ್ರಥಮ ಉಪಾಧ್ಯಕ್ಷರು ಲತೀಶ್ ಪೂಜಾರಿ, ದ್ವಿತೀಯ ಉಪಾಧ್ಯಕ್ಷರು ಗೀತಾ ವಸಂತ್ , ಮಾಜಿ ಅಧ್ಯಕ್ಷರು ಲೋಕೇಶ್ ಕೋಟ್ಯಾನ್, ನಯನ ರಮೇಶ್ ದೀಕ್ಷಿತ್ ಸಿ ಎಸ್, ಮಾರ್ಗದರ್ಶಕರಾದ ಜಯಾನಂದ ಅಮೀನ್, ಚಂದಪ್ಪ ಸನಿಲ್, ಕೇಂದ್ರ ಸಮಿತಿಯ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರು ಮೋಹನ್ ಮಾಡೂರು ಉಪಸ್ಥಿತರಿದ್ದರು.

ಮೋಕ್ಷ ಪ್ರಾರ್ಥನೆಗೈದರು. ಅಧ್ಯಕ್ಷರು ಸ್ವಾಗತಿಸಿದರು. ಶೈಲೇಶ್ ಬೈಕಂಪಾಡಿ ಕಾರ್ಯಕ್ರಮ ನಿರ್ವಹಿಸಿದರು. ಶೋಭಾ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!