ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು * ಯುವವಾಹಿನಿ(ರಿ) ಉಡುಪಿ ಘಟಕ

ಶ್ರೇಷ್ಠ ನಾಯಕತ್ವದ ಹಾದಿಯಲ್ಲಿ ರಜತ್ ಕುಮಾರ್ ಎನ್.ಎಸ್.

ಬದುಕಿನಲ್ಲಿ ಸುನಿಶ್ಚಿತ ಗುರಿಯುಳ್ಳ ಇತ್ಯಾತ್ಮಕ ಸಾಧನೆಯ ಮುಂಚೂಣಿ ಮತ್ತು ಮುನ್ನಗ್ಗುವ ಎದೆಗಾರಿಕೆಯುಳ್ಳ ಯುವಜನರಲ್ಲಿ ಕೆಲವೇ ಕೆಲವರು ವಿದ್ಯಾರ್ಥಿ ಜೀವನದಲ್ಲಿ ಸ್ವಯಂಪ್ರೇರಿತವಾಗಿ ಉತ್ತಮ ನಾಯಕತ್ವದ ಲಕ್ಷಣಗಳನ್ನು ಮೈಗೂಡಿಸಿಕೊಂಡು ಯಶಸ್ವೀ ನಾಯಕರಾಗುತ್ತಾರೆ. ಇಂತಹದ್ದೇ ಒಂದು ಮನೋಧರ್ಮದವರಾಗಿದ್ದು ರಾಷ್ಟ್ರ ಚಿಂತನೆಯ ಹಾದಿಯಲ್ಲಿ ಸಾಗುತ್ತಾ ಕರ್ನಾಟಕ ರಾಜ್ಯಪಾಲರಿಂದ ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಸ್ವಯಂ ಸೇವಕ ರಾಜ್ಯ ಪ್ರಶಸ್ತಿ (2014-15 ರಲ್ಲಿ) ಬಾಚಿಕೊಂಡ ಓರ್ವ ವಿದ್ಯಾರ್ಥಿಯ ಯಶೋಗಾಥೆ ಇದು.

ಆತ ಬೇರಾರೂ ಅಲ್ಲ; ಪುತ್ತೂರಿನ ಶ್ರೀ N. ಶೀನಪ್ಪ ಪೂಜಾರಿ- ರೇಖಾ ದಂಪತಿಗಳ ಹೆಮ್ಮೆಯ ಪುತ್ರ ಶ್ರೀ ರಜತ್ ಕುಮಾರ್ N.S. ಕಲಿಕೆಯಲ್ಲಿ SSLC ಯಲ್ಲಿ 73%, ಪಿಯುಸಿಯಲ್ಲಿ 90.17% ಹಾಗೂ B.Comನಲ್ಲಿ 75% ಅಂಕಗಳಿಸಿ ಕಲಿಕೆಯಲ್ಲಿ ತನ್ನ ಶ್ರೇಷ್ಠತೆಯನ್ನು ಸಾಬೀತು ಪಿಡಿಸಿ NCCಯಲ್ಲಿ ರಾಷ್ಟಪ್ರೇಮದ ಪಾಠ ಕಲಿತು A,B ಹಾಗೂ C ಸರ್ಟಿಫಿಕೇಟ್ ಗಳಿಸಿರುವುದು ಒಂದು ಅಸಾಧಾರಣ ಸಾಧನೆಯೇ ಸರಿ.

ಇದರೊಂದಿಗೆ ಸಮಾಜ ಸೇವೆಯ ಮೂಲಭೂತ ತತ್ವ ಮೈಗೂಡಿಸಿಕೊಳ್ಳಲು ಪೂರಕವಾದ ವಿದ್ಯಾರ್ಥಿಗಳ ರಾಷ್ಟ್ರೀಯ ಸೇವಾ ಯೋಜನೆಯಲ್ಲೂ ತನ್ನನ್ನು ಪರಿಪೂರ್ಣವಾಗಿ ತೊಡಗಿಸಿಕೊಂಡು 2015 ರ ಮಂಗಳೂರು ವಿಶ್ವವಿದ್ಯಾಲಯದ ಸರ್ವಶ್ರೇಷ್ಠ NSS ಸ್ವಯಂಸೇವಕ ಪ್ರಶಸ್ತಿ; ಕರ್ನಾಟಕ ರಾಜ್ಯದಲ್ಲೇ ’ಸರ್ವಶ್ರೇಷ್ಠ NSS ಸ್ವಯಂಸೇವಕ’ ಪ್ರಶಸ್ತಿಯನ್ನು ರಾಜ್ಯಪಾಲ ಗೌ| ವಜೂಭಾಯಿವಾಲರಿಂದ ಪಡೆದು ಜಿಲ್ಲೆಗೇ ಹೆಸರು ತರುವ ಮಹೋನ್ನತ ಸಾಧನೆ ಮಾಡಿರುತ್ತಾರೆ. ಇದು ರಜತ್ ಕುಮಾರ್ ಸೇವಾ ಮನೋಭಾವಕ್ಕೆ ಸಂದ ಗೌರವ.

ಶ್ರೇಷ್ಠ ನಾಯಕತ್ವ ಗುಣಗಳಿಂದ ಕೂಡಿದ ಈ ಯುವಕ ಓರ್ವ ಸರ್ವಶ್ರೇಷ್ಠ ವಿದ್ಯಾರ್ಥಿ ಹಾಗೂ ಸೇವಾ ಮನೋಭಾವ ಶ್ರೇಷ್ಠ ಎಂದು St. ಅಲೋಶಿಯಸ್ ಕಾಲೇಜಿನಲ್ಲಿ ಸಾದರ ಪಡಿಸಿ ರಾಷ್ಟ್ರ ಮಟ್ಟದ ಗಣರಾಜ್ಯ ಪೆರೇಡ್‌ಗೆ ಕರ್ನಾಟಕದಿಂದ ಆಯ್ಕೆಯಾದ ಬೆರಳೆಣಿಕೆಯ ವಿದ್ಯಾರ್ಥಿಗಳಲ್ಲಿ ಒಬ್ಬ.

ಪ್ರತಿಭೆ ಎಂಬುವುದು ಸರ್ವತೋಮುಖವಾಗಿದ್ದರೆ ಅದು ಸಮರ್ಥ ನಾಯಕತ್ವಕ್ಕೆ ಬುನಾದಿ ಇಂಥ ಸಾಧನೆಯ ಪ್ರತಿಭೆ ಶ್ರೀ ರಜತ್ ಕುಮಾರ್ N.S ಇವರನ್ನು ಯುವವಾಹಿನಿ ಅಭಿನಂದಿಸುತ್ತಾ ಯುವವಾಹಿನಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುತ್ತಿದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!