ಯುವವಾಹಿನಿ (ರಿ) ಕೊಲ್ಯ ಘಟಕ

ಶಿಕ್ಷಣ-ಶಿಕ್ಷಕ ಅಂದು ಇಂದು ವಿಶೇಷ ಸಂವಾದ….

ಕೊಲ್ಯ: ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ನಿವೃತ್ತ ಹಿರಿಯ ಶಿಕ್ಷಕಿ ಶ್ರೀಮತಿ ವೇದಾವತಿ ಕೆ ಅವರೊಂದಿಗೆ ಶಿಕ್ಷಕರ ದಿನಾಚರಣೆ ವಿಶೇಷ ಸಂವಾದ ದಿ : 11-09-2024 ರಂದು ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನ ಕೊಲ್ಯದಲ್ಲಿ ನಡೆಯಿತು.

ಅಧ್ಯಕ್ಷರಾದ ಶ್ರೀಮತಿ ಸುಧಾ ಸುರೇಶ್ ಸರ್ವರನ್ನು ಸ್ವಾಗತಿಸಿ, ಶಿಕ್ಷಕರ ದಿನಾಚರಣೆ ಕುರಿತು ಪ್ರಸ್ತಾವಣೆಗೈದರು. ಮುಖ್ಯ ಅತಿಥಿಯಾದ ನಿವೃತ್ತ ಹಿರಿಯ ಶಿಕ್ಷಕಿ ಶ್ರೀಮತಿ ವೇದಾವತಿ ಕೆ ಅವರನ್ನು ಘಟಕದ ವತಿಯಿಂದ ಗೌರವಿಸಲಾಯಿತು.

ಗೌರವ ಸ್ವೀಕರಿಸಿದ ಶಿಕ್ಷಕಿಯವರು ತಮ್ಮ ಶಿಕ್ಷಕ ವೃತ್ತಿಯ 42 ವರ್ಷಗಳ ತಮ್ಮ ಸೇವೆಯ ಸಾರ್ಥಕತೆ ಕುರಿತು ನಮ್ಮೊಂದಿಗೆ ಹಂಚಿಕೊಂಡರು ಹಾಗೂ ಅಂದಿನ ಶಿಕ್ಷಣಕ್ಕೂ,ಇಂದಿನ ಶಿಕ್ಷಣಕ್ಕೂ ಇರುವ ವ್ಯತ್ಯಾಸ ಮತ್ತು ಅಂದಿನ ಶಿಕ್ಷಕರು-ವಿದ್ಯಾರ್ಥಿಗಳ ನಡುವಿನ ಒಡನಾಟ, ಇಂದಿನ ಶಿಕ್ಷಕರು-ವಿದ್ಯಾರ್ಥಿಗಳ ನಡುವಿನ ಒಡನಾಟದ ಕುರಿತು ಸಂವಾದ ನಡೆಸಿದರು.

ಮಾತ್ರವಲ್ಲದೆ ಶಿಕ್ಷಕ ವೃತ್ತಿಗಿರುವ ಗೌರವ, ಘನತೆ ಪೋಷಕರಿಗೆ ತಮ್ಮ ಮಕ್ಕಳನ್ನು ಶಿಕ್ಷಕ‌ ವೃತ್ತಿ ಆಯ್ಕೆಗೆ ಪ್ರೇರೇಪಣೆ ನೀಡಿ, ಅರ್ಥಪೂರ್ಣ ಕಾರ್ಯಕ್ರಮ ಆಯೋಜನೆ ಮಾಡಿದಕ್ಕೆ ಧನ್ಯವಾದ ಸಮರ್ಪಿಸಿ, ಎಲ್ಲರಿಗೂ ಶುಭ ಹಾರೈಸಿದರು.

ಕಾರ್ಯದರ್ಶಿ ಜಗಜೀವನ್ ಕೊಲ್ಯ ಧನ್ಯವಾದ ಸಮರ್ಪಿಸಿದರು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಶ್ರೀ ಸುಂದರ್ ಸುವರ್ಣರವರು ಕಾರ್ಯಕ್ರಮದ ಕೊನೆಯಲ್ಲಿ ಸಿಹಿತಿಂಡಿ ನೀಡಿ ಸಹಕರಿಸಿದರು.

Leave a Reply

Your email address will not be published. Required fields are marked *

error: Content is protected !!