Yuvavahini

AUG 20, 2024 6.23 AM IST

ಯುವವಾಹಿನಿ (ರಿ) ಕೂಳೂರು ಘಟಕ

ಗುರು ಜಯಂತಿ

ಕೂಳೂರು : ಬ್ರಹ್ಮಶ್ರೀ ನಾರಾಯಣ ಗುರು ವರ್ಯರ 170 ನೇ ಜನುಮ ದಿನದ ಪ್ರಯುಕ್ತ ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಸಮಾಜ ಸೇವಾ ನಿರ್ದೇಶಕರು ಜಯಲಕ್ಷ್ಮಿ ಇವರ ಸಂಚಾಲಕತ್ವದಲ್ಲಿ ದಿನಾಂಕ 20-08-2024 ರಂದು ಸಂಜೆ ಚಿರಂತನ ಚಾರಿಟೇಬಲ್ ಟ್ರಸ್ಟ್ ಇಡ್ಯಾ ಸುರತ್ಕಲ್ ಇಲ್ಲಿಗೆ ಭೇಟಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು ಇಂದಿರಾ ಸುರೇಶ್ ವಹಿಸಿದ್ದರು. ನಾರಾಯಣ ಗುರುಗಳ ಭಾವಚಿತ್ರಕ್ಕೆ ಆಶ್ರಮದ ಹಿರಿಯರು ದಯಾನಂದ ಮೆಂಡನ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಘಟಕದ ಮಾಜಿ ಅಧ್ಯಕ್ಷರು ಭಾಸ್ಕರ್ ಕೋಟ್ಯಾನ್ ರವರು ಬ್ರಹ್ಮ ಶ್ರೀ ನಾರಾಯಣ ಗುರುಗಳ ಸಂದೇಶ ಹಾಗೂ ತತ್ವಗಳ ಬಗ್ಗೆ ಮಾಹಿತಿ ನೀಡಿ ಘಟಕದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಚಿರಂತನ ಚಾರಿಟೇಬಲ್ ಟ್ರಸ್ಟ್ ಇದರ ಮ್ಯಾನೇಜಿಂಗ್ ಟ್ರಸ್ಟಿ ಭಾರವಿ ದೇರಾಜೆ ಮಾತನಾಡಿ ಗುರುಗಳ ಜನುಮ ದಿನವನ್ನು ತಮ್ಮ ಸಂಸ್ಥೆಯಲ್ಲಿ ಆಚರಿಸಿದಕ್ಕಾಗಿ ಸಂತಸ ವ್ಯಕ್ತಪಡಿಸಿದರು. ಯುವವಾಹಿನಿ ಕೂಳೂರು ಘಟಕ ಹೆಚ್ಚಿನ ಸಮಾಜಮುಖಿ ಕೆಲಸಗಳನ್ನು ಮಾಡಲಿ ಎಂದು ಶುಭ ಕೋರಿದರು.

ಅಧ್ಯಕ್ಷರು ಇಂದಿರಾ ಸುರೇಶ್ ಮಾತನಾಡಿ ಗುರುಗಳ ಜನುಮ ದಿನವನ್ನು ಪ್ರತೀ ವರ್ಷ ಇದೇ ರೀತಿ ಬೇರೆ ಬೇರೆ ಆಶ್ರಮದಲ್ಲಿ ಆಚರಿಸಿಕೊಂಡು ಬಂದಿರುತ್ತೇವೆ ಎಂದು ಹೇಳಿ ಇಂದು ಈ ಕಾರ್ಯಕ್ರಮ ಇಲ್ಲಿ ನಡೆಸಿಕೊಡಲು ಅನುವು ಮಾಡಿಕೊಟ್ಟ ಟ್ರಸ್ಟ್ ನ ಎಲ್ಲರಿಗೂ ವಂದನೆ ಸಲ್ಲಿಸಿದರು.

ವೇದಿಕೆಯಲ್ಲಿ ಯುವವಾಹಿನಿ (ರಿ.) ಕೂಳೂರು ಘಟಕದ ಕಾರ್ಯದರ್ಶಿ ನಯನ ಕೋಟ್ಯಾನ್, ಕಾರ್ಯಕ್ರಮದ ಸಂಚಾಲಕರು ಸಮಾಜ ಸೇವಾ ನಿರ್ದೇಶಕರು ಜಯಲಕ್ಷ್ಮಿ, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ವಿಮಲಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಘಟಕದ ನಿಕಟಪೂರ್ವ ಅಧ್ಯಕ್ಷರು ಯಶವಂತ್ ಪೂಜಾರಿ, ಮಾಜಿ ಅಧ್ಯಕ್ಷರು ಲೋಕೇಶ್ ಕೋಟ್ಯಾನ್, ನಯನ ರಮೇಶ್, ದೀಕ್ಷಿತ್ ಸಿ ಎಸ್, ಘಟಕದ ಮಾರ್ಗದರ್ಶಕರು ಚಂದಪ್ಪ ಸನಿಲ್, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ ಹಿರಿಯರಿಗೆ ಆಟಗಳನ್ನು ಆಡಿಸಿ ಮನೋರಂಜಿಸಿದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಆಶ್ರಮದ ಹಿರಿಯರಿಗೆ ಒಂದು ಹೊತ್ತಿನ ಊಟದ ವ್ಯವಸ್ಥೆಗಾಗಿ ರೂ. 5000/- ಚೆಕ್ ಅನ್ನು ನೀಡಲಾಯಿತು. ಎಲ್ಲರಿಗೂ ಫಲವಸ್ತು ವಿತರಿಸಲಾಯಿತು.

ವಿದ್ಯಾರ್ಥಿ ಸಂಘಟನಾ ನಿರ್ದೇಶಕರು ಮಧುಶ್ರೀ ಪ್ರಶಾಂತ್ ಪ್ರಾರ್ಥಿಸಿದರು. ಅಧ್ಯಕ್ಷರು ಸ್ವಾಗತಿಸಿದರು. ಮಾಜಿ ಅಧ್ಯಕ್ಷರು ಭಾಸ್ಕರ್ ಕೋಟ್ಯಾನ್ ನಿರೂಪಿಸಿದರು. ಕಾರ್ಯದರ್ಶಿ ನಯನ ಕೋಟ್ಯಾನ್ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!