ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು * ಯುವವಾಹಿನಿ(ರಿ) ಉಡುಪಿ ಘಟಕ

ವೈವಿಧ್ಯಮಯ ಪ್ರತಿಭೆಯ ಕು| ನಿಧಿಶಾ

ಕು| ನಿಧಿಶಾ-ಕರ್ನಾಟಕದ ಪ್ರೌಢ ಶಿಕ್ಷಣ ಮಂಡಳಿ ಕಳೆದ 2016 ಮಾರ್ಚ್‌ನಲ್ಲಿ ನಡೆಸಿದ SSLC  ಪರೀಕ್ಷೆಯಲ್ಲಿ 625 ಕ್ಕೆ ನಂಬಲಸಾಧ್ಯವಾದ 620 ಅಂಕಗಳಿಂದ ಕಲಿತ ಶಾಲೆಯ ಅಧ್ಯಾಪಕರು, ಪೋಷಕರು ಮತ್ತು ಬಿಲ್ಲವ ಸಮುದಾಯವೇ ಹೆಮ್ಮೆ ಪಡುವ ಸಾಧನೆ ಮಾಡಿರುತ್ತಾರೆ.

ಈ ಬೆಲೆ ಕಟ್ಟಲಾಗದ ನಿಧಿ ಬರೀ ಕಲಿಕೆಗೇ ಸೀಮಿತಗೊಂಡಿಲ್ಲ. ಸಾಮಾನ್ಯವಾಗಿ ಕಲಿಕೆಯಲ್ಲಿ ಮುಂಚೂಣಿಯಲ್ಲಿರಬೇಕಾದಲ್ಲಿ ಬರೀ, ಪುಸ್ತಕ-ಓದು ಇಷ್ಟಕ್ಕೆ ಸೀಮಿತವಿರಬೇಕೆಂಬ ತಪ್ಪು ಕಲ್ಪನೆ ಹೆಚ್ಚಿನವರಲ್ಲಿದೆ. ಆದರೆ ನಿಧಿಶಾಳ ಪೋಷಕ ಲೋಕನಾಥ್-ಚಿತ್ರಕಲಾ ದಂಪತಿಗಳು ತಮ್ಮ ಮಗಳು ಇತರ ಸಾಧನೆಯನ್ನು ಮಾಡಲೂ ಪ್ರೋತ್ಸಾಹಿಸಿರುವುದು ಸಂತಸದ ವಿಚಾರ.

ಪ್ರಬಂಧ ಸ್ಪರ್ಧೆಯಲ್ಲಿ ತನ್ನ ಅಸಾಧಾರಣ ಪ್ರತಿಭೆಯಿಂದ ಈಕೆ ಜ್ಯೋತಿ ಸೈಕಲ್ಸ್ ಮಂಗಳೂರು ಇವರು ನಡೆಸಿದ ಸ್ಪರ್ಧೆಯಲ್ಲಿ ಭಾಗವಹಿಸಿ ರೂ.10,000/- ಮೌಲ್ಯದ Firefox Bicycle ನ್ನೂ ತನ್ನದಾಗಿಸಿಕೊಂಡ ಕೀರ್ತಿವಂತೆ. ಜಿಲ್ಲಾ ಮಟ್ಟದಲ್ಲಿ ಪರಿಸರ ದಿನ 2014 ರಲ್ಲಿ ನಡೆದ ಪ್ರಬಂಧ ಸ್ಫರ್ಧೆಯಲ್ಲಿ 3 ನೆಯ ಬಹುಮಾನ ಗಳಿಸಿದ್ದು ಈಕೆಯಲ್ಲಿ ಹೆಚ್ಚಿನ ಪ್ರತಿಭೆ ಇದೆ ಎಂದು ಸಾಬೀತುಗೊಂಡಿದೆ.

ಶಾಲಾ ದಿನಗಳಲ್ಲಿ ವಿದ್ಯಾರ್ಥಿ ನಾಯಕಿಯಾದ ಈಕೆ ಮುಂದೊಂದು ದಿನ ಸಮಾಜದ ಶ್ರೇಷ್ಠ ನಾಯಕಿಯಾಗುವ ಎಲ್ಲ ಲಕ್ಷಣಗಳನ್ನು ಹೊಂದಿದ್ದಾಳೆ.

ಯುವವಾಹಿನಿಯಿಂದ ಅತ್ಯಂತ ಗೌರವಕ್ಕೆ ಪಾತ್ರಳಾದ ಈಕೆಯನ್ನೂ ’ಅಕ್ಷರ ಪುರಸ್ಕಾರ’ ನೀಡಿ ನಾವೆಲ್ಲ ಅಭಿನಂದಿಸೋಣ.

One thought on “ವೈವಿಧ್ಯಮಯ ಪ್ರತಿಭೆಯ ಕು| ನಿಧಿಶಾ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!