24-12-2023, 9:00 AM
ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಯುವವಾಹಿನಿಯಿಂದ ಆಗುತ್ತಿದೆ ನಾವೆಲ್ಲರೂ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಹಾದಿಯಲ್ಲಿ ಮುನ್ನಡೆಯಬೇಕಾಗಿದೆ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿಯ […]
Read More
25-12-2022, 5:06 AM
ಮಂಗಳೂರು :- ರಾಜ್ಯಾದ್ಯಂತ 33 ಘಟಕಗಳು ಹಾಗೂ ಮೂರು ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿಯ 2022-23ನೇ ಸಾಲಿನ ಅಧ್ಯಕ್ಷರಾಗಿ ರಾಜೇಶ್ ಬಿ.ಸಿ.ರೋಡ್ ಆಯ್ಕೆಯಾಗಿದ್ದಾರೆ. ಅವರು ಡಿ.25 ರಂದು ಮುಲ್ಕಿ ಯಲ್ಲಿ ನಡೆದ ಯುವವಾಹಿನಿಯ 35 ನೇ ವಾರ್ಷಿಕ ಸಮಾವೇಶದಲ್ಲಿ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಹರೀಶ್ ಕೆ. ಪೂಜಾರಿ ಮಂಗಳೂರು, ಲೋಕೇಶ್ ಕೋಟ್ಯಾನ್ ಕೂಳೂರು , ಪ್ರಧಾನ ಕಾರ್ಯದರ್ಶಿಯಾಗಿ ಕುಸುಮಾಕರ ಕುಂಪಲ , ಕೋಶಾಧಿಕಾರಿಯಾಗಿ ಎಂ […]
Read More
01-11-2022, 2:50 PM
ಬಂಟ್ವಾಳ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷರು, ಸಮಾಜ ಸೇವಕರಾದ ಪಚ್ಚಿನಡ್ಕ ಸೇಸಪ್ಪ ಕೊಟ್ಯಾನ್ ಇವರನ್ನು ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರರುಗಳು, ಘಟಕದ ಮಾಜಿ ಅಧ್ಯಕ್ಷರುಗಳು ಹಾಗೂ ಘಟಕದ ಸದಸ್ಯರು ಉಪಸ್ಥಿತರಿದ್ದರು.
Read More
30-10-2022, 2:52 PM
ಬಂಟ್ವಾಳ :- ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಹಾಗೂ ಬಂಟ್ವಾಳ ತಾಲ್ಲೂಕು ಬಿಲ್ಲವ ಸಂಘದ ನೇತ್ರತ್ವದಲ್ಲಿ ದಿನಾಂಕ 30 ಅಕ್ಟೋಬರ್ 2022 ರಂದು ಲೋಕಕಲ್ಯಾಣಾರ್ಥವಾಗಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಬಿ.ಸಿ ರೋಡ್ ನಿಂದ ಪೋಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರಕ್ಕೆ ಪಾದಯಾತ್ರೆ ನಡೆಯಿತು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಹಾಗೂ ಘಟಕದ ಮಾಜಿ ಅಧ್ಯಕ್ಷರು, ಘಟಕದ ಅಧ್ಯಕ್ಷರು ,ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 200 ಮಂದಿ ಭಕ್ತಾದಿಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
Read More
10-09-2022, 5:26 PM
ನಾರಾಯಣಗುರುಗಳು ಸಾರಿದ ಸಾರ್ವಕಾಲಿಕ ಮೌಲ್ಯಗಳು ನಿಜ ಅರ್ಥದಲ್ಲಿ ಅನುಷ್ಟಾನಕ್ಕೆ ಬರಲೇಬೇಕಾದ ತುರ್ತು ಇಂದಿನ ಸಮಾಜಕ್ಕಿದೆ. ಓರ್ವ ಸಾಧಕನ ನೆಲೆ ಮತ್ತು ಬೆಲೆಗಳೆರಡೂ ಮಹತ್ವ ಪಡೆದುಕೊಳ್ಳುವುದು ಆತನಿದ್ದ ಕಾಲಕ್ಕಿಂತಲೂ ಆತನಿಲ್ಲದ ಕಾಲದಲ್ಲಿ ಅದು ಕಾರ್ಯೋನ್ಮುಖ ಗೊಳ್ಳುವುದರಲ್ಲಿ. ತಾನಿಲ್ಲದ ಕಾಲದಲ್ಲಿ ತನ್ನಿರುವನ್ನು ಉಳಿಸಬೇಕಾದರೆ ಅವನ ಜೀವನ ಕ್ರಮ ಮತ್ತು ಸಾಧನೆಗಳು ಕಾಲಾತೀತವಾಗಿರಬೇಕು. ಈ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳು ವರ್ತಮಾನಕ್ಕೂ ಭವಿಷ್ಯದ ಎಲ್ಲಾ ತಲೆಮಾರುಗಳಿಗೂ ಪ್ರಸ್ತುತವೆನಿಸುವ ಸಾರ್ವಕಾಲಿಕ ದಾರ್ಶನಿಕರು. ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ […]
Read More
15-08-2022, 2:57 PM
ಬಂಟ್ವಾಳ : ವಿದೇಶಿ ಸಂಸ್ಕೃತಿ ಬಗ್ಗೆ ಆಕರ್ಷಣೆಗೆ ಒಳಗಾಗುವ ಯುವ ಜನತೆಗೆ ವೈಜ್ಞಾನಿಕ ಕಾರಣಗಳನ್ನು ನೀಡಿ ನಮ್ಮ ಸಂಸ್ಕೃತಿ ಸಂಸ್ಕಾರಗಳ ಬಗ್ಗೆ ಮನವರಿಕೆ ಮಾಡಿದಾಗ ಯುವ ಪೀಳಿಗೆ ನಮ್ಮ ಸಂಸ್ಕೃತಿ ಸಂಸ್ಕಾರವನ್ನು ಉಳಿಸಿ ಬೆಳೆಸುವ ಹಾದಿ ಸುಗಮವಾಗಲಿದೆ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ಸಂಶೋಧಕ, ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 15.08.2022 ರಂದು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನಲ್ಲಿ ಜರುಗಿದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ […]
Read More
15-08-2022, 2:51 PM
ಬಂಟ್ಬಾಳ : ಸ್ವಾತಂತ್ರ್ಯ ಹೋರಾಟಗಾರರ ಜತೆಗೆ ಸ್ವಾತಂತ್ರ್ಯ ನಂತರ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸೋಣ ಹಾಗೂ ಅಜಾದಿ ಕಾ ಅಮೃತ್ ಮಹೋತ್ಸವದ ಪ್ರಯುಕ್ತ ಹರ್ ಘರ್ ತಿರಂಗಾ ಎಂಬ ಘೋಷ ವಾಕ್ಯದ ಮೂಲಕ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳ ಮಂದಿರದ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದ ಯುವವಾಹಿನಿ ಸಂಘಟನೆ ಕಾರ್ಯ ಶ್ಲಾಘನೀಯ ಎಂದು ಬಂಟ್ವಾಳ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯ […]
Read More
10-08-2022, 1:50 PM
ಬಂಟ್ವಾಳ : ಆರೋಗ್ಯ ಮಾನವನ ಅತ್ಯಂತ ಶ್ರೇಷ್ಠ ಸಂಪತ್ತು, ಆಯುರ್ವೇದ ಔಷಧಿಗಳು ನಿಧಾನವಾದ ಪರಿಣಾಮ ಎಂಬುದು ಸತ್ಯಕ್ಕೆ ದೂರವಾದ ಮಾತು, ಋಷಿಮನಿಗಳ ಕಾಲದಿಂದಲೂ ನಾವು ಕೇಳಿ ತಿಳಿದುಕೊಂಡ ಹಾಗೂ ಯಾವುದೇ ಅಡ್ಡ ಪರಿಣಾಮಗಳು ಇಲ್ಲದ, ಆಯುರ್ವೇದ ಚಿಕಿತ್ಸೆ ಅತ್ಯಂತ ಪ್ರಯೋಜನಕಾರಿಯಾಗಿದೆ ಎಂದು ರೊಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಇದರ ಅಧ್ಯಕ್ಷೆ ಪಲ್ಲವಿ ಕಾರಂತ್ ತಿಳಿಸಿದರು. ಅವರು ದಿನಾಂಕ 10 ಆಗಸ್ಟ್ 2022 ರಂದು ಬಂಟ್ವಾಳ ತಾಲೂಕಿನ ಪಚ್ಚಿನಡ್ಕದಲ್ಲಿ ಯುವವಾಹಿನಿ ಬಂಟ್ವಾಳ ಘಟಕ, ಓಂ ಫ್ರೇಂಡ್ಸ್ ಪಚ್ಚಿನಡ್ಕ ಹಾಗೂ ರೋಟರಿ […]
Read More
10-07-2022, 3:17 PM
ಬಂಟ್ವಾಳ : ದಿನಾಂಕ 10.07.2022 ರಂದು ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ ಸಮಾರಂಭದಲ್ಲಿ ಕೆ.ಸೇಸಪ್ಪ ಕೋಟ್ಯಾನ್ ದಂಪತಿಗಳನ್ನು ಅಭಿನಂದಿಸಲಾಯಿತು. ಸಾರ್ಥಕ ಐವತ್ತು ವರುಷಗಳ ಶುಭಯಾನದ ಸವಿನೆನಪಿನ ಸಲುವಾಗಿ ಕೆ.ಸೇಸಪ್ಪ ಕೋಟ್ಯಾನ್, ಚಂದ್ರಾವತಿ ದಂಪತಿಗಳಿಗೆ ಯುವವಾಹಿನಿ ಬಂಟ್ವಾಳ ಘಟಕದ ಪರವಾಗಿ ಅಭಿಮಾನದ ಸಿಂಚನ ಸಮರ್ಪಿಸಲಾಯಿತು. ದಿನಾಂಕ 10.07.2022 ರಂದು ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ ಸಮಾರಂಭದಲ್ಲಿ ಅಭಿನಂದಿಸಲಾಯಿತು. ಸೂರ್ಯನಂತೆ ಜಗವ ಬೆಳಗದಿದ್ದರೂ ಹಣತೆಯಾಗಿ ಅಲ್ಪ ಕತ್ತಲೆ ಕಳೆದರೂ […]
Read More