30-01-2022, 2:00 PM
ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶದಲ್ಲಿ 2021ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಷೇಶಾಂಕವನ್ನು ಹೈಕೋರ್ಟ್ನ ಪದಮಿತ್ತ ಹಿರಿಯ ವಕೀಲರಾದ ಐ. ತಾರನಾಥ ಪೂಜಾರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್ ಎಸ್ […]
Read More
30-01-2022, 10:00 AM
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭವು ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್ ಎಸ್ ಸಾಯಿರಾಂ ವಾರ್ಷಿಕ ಸಮಾವೇಶ ಉದ್ಘಾಟಿಸಿದರು. “ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದೇ “ಯುವ” : ವಿಖ್ಯಾತಾನಂದ ಸ್ವಾಮೀಜಿ ‘ಯುವ’ ಎಂದರೆ ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದಾಗಿದೆ. ನೀವು ಯಾರ […]
Read More
11-01-2022, 1:41 PM
ಮಂಗಳೂರು: ಯುವವಾಹಿನಿ(ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ವತಿಯಿಂದ “ಆರೋಗ್ಯ ಮಂತ್ರ ಸೇವಾ ಯೋಜನೆ” ಅಂಗವಾಗಿ ನಗರದ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಿನಾಂಕ 11.01.2022 ರಂದು ₹ 6.50 ಲಕ್ಷ ವೆಚ್ಚದ ಅತ್ಯಾಧುನಿಕ ಡಯಾಲಿಸಿಸ್ ಯಂತ್ರ ಹಸ್ತಾಂತರ ಮಾಡಲಾಯಿತು. ಗರಿಷ್ಟ ಡಯಾಲಿಸಿಸ್ ಯಂತ್ರ ಹೊಂದಿರುವ ರಾಜ್ಯದ ಏಕೈಕ ಆಸ್ಪತ್ರೆ : ಶಾಸಕ ವೇದವ್ಯಾಸ ಕಾಮತ್ ಅಸತ್ರೆಯ ಸೆಮಿನಾರ್ ಹಾಲ್ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಭಾಗವಹಿಸಿದ್ದ ಶಾಸಕ ಡಿ. ವೇದವ್ಯಾಸ್ ಕಾಮತ್ ಮಾತನಾಡಿ, ವೆನ್ಲಾಕ್ ಆಸ್ಪತ್ರೆಗೆ […]
Read More
29-10-2019, 2:05 AM
ಯುವವಾಹಿನಿ ಉಪ್ಪಿನಂಗಡಿ ಘಟಕ ಮತ್ತು ಮುಗ್ಗಗುತ್ತು ಕಟುಂಬಸ್ಥರ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ತುಳುನಾಡ ತುಡರ್ ಪರ್ಬ ಮುಗ್ಗಗುತ್ತು ತರವಾಡು ಮನೆಯಲ್ಲಿ ನಡೆಯಿತು. ಬಲೀಂದ್ರ ಪೂಜೆಯನ್ನು ನೆರವೇರಿಸಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಬಲೀಂದ್ರ ಪೂಜೆಯ ಹಿನ್ನಲೆ ಮತ್ತು ಮಹತ್ವವನ್ನು ಶೇಖರ್ ಪೂಜಾರಿ ಶಿಬಾರ್ಲ ತಿಳಿಸಿಕೊಟ್ಟರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಶ್ರೀ ಕೆ. ಜಿ ಬಂಗೇರ ನೆರವೇರಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಆಶಿತ್ ಎಂ. ವಿ ವಹಿಸಿದ್ದರು.. […]
Read More
28-07-2019, 1:47 PM
ಉಪ್ಪಿನಂಗಡಿ : ಜನಸೇವೆಯೇ ಭಗವಂತನ ಸೇವೆ ಎಂಬುದನ್ನು ಮನಗಂಡು ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ನರ ದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕಿನ ಮುಗೇರಡ್ಕ ನಿವಾಸಿ, ಘಟಕದ ವತಿಯಿಂದ ಕುದ್ರೋಳಿ ದಸರಾ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸುತ್ತಿದ್ದ ಉಮೇಶ್ ಪೂಜಾರಿಯವರಿಗೆ ರೂ. 10,000 ವನ್ನು ದಿನಾಂಕ 28.07.19 ರ ಅವರ ಮನೆಗೆ ತೆರಳಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಗೌರವ ಸಲಹೆಗಾರರಾದ ವರದರಾಜ್.ಎಂ, ಡಾ.ಸದಾನಂದ ಕುಂದರ್, ಅಧ್ಯಕ್ಷರಾದ […]
Read More
29-06-2019, 2:19 PM
ಉಪ್ಪಿನಂಗಡಿ : ಬೃಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶದಂತೆ ವಿದ್ಯೆಯಿಂದ ಸ್ವತಂತ್ರರಾಗಿ ಸಂಘಟನೆಯಿಂದ ಬಲಯುತರಾಗಿ ಎಂಬ ಸಂದೇಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳುದರ ಜೊತೆಗೆ ಬಿಲ್ಲವ ಯುವಕರು ಸಮಾಜಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ ಎಂದು ಮೂಲ್ಕಿ- ಮೂಡಬಿದಿರೆಯ ಶಾಸಕರಾದ ಉಮನಾಥ ಕೋಟ್ಯಾನ್ ಇವರು ತಿಳಿಸಿದರು. ಅವರು ದಿನಾಂಕ 29.06.2019 ರಂದು ಉಪ್ಪಿನಂಗಡಿಯ ಸಂಘಮ ಕೃಪಾದಲ್ಲಿ ನಡೆದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಉಪ್ಪಿನಂಗಡಿ ಘಟಕದ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ […]
Read More
07-06-2019, 1:20 PM
ಉಪ್ಪಿನಂಗಡಿ : ಕೇರಳ ಶಿವಗಿರಿ ಮಠದ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರು ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶವನ್ನು ಎಲ್ಲಾ ಬಿಲ್ಲವ ಸಮಾಜದ ಬಂಧುಗಳು ತಿಳಿದುಕೊಂಡು ಅದನ್ನು ಅನುಸರಿಸಬೇಕಾಗಿ ಹೇಳಿದರು ಅವರು ಯುವವಾಹಿನಿ ಉಪ್ಪಿನಂಗಡಿ ಘಟಕ ದಿನಾಂಕ 07.06.2019 ರಂದು ಇಳಂತಿಲದಲ್ಲಿ ಆಯೋಜಿಸಿದ ಗುರುಸಂದೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ, ಸಲಹೆಗಾರರಾದ ಡಾ. ಸದಾನಂದ ಕುಂದರ್, ನಿಕಟಪೂರ್ವ ಅಧ್ಯಕ್ಷರಾದ ಅಶೋಕ್ ಪಡ್ಪು,ಕಾರ್ಯದರ್ಶಿ ಅನಿಲ್ ದಡ್ದು ಸೇರಿದಂತೆ ಮಾಜಿ ಅಧ್ಯಕ್ಷರುಗಳು, ಎಲ್ಲಾ […]
Read More
16-04-2019, 2:46 PM
ಉಪ್ಪಿನಂಗಡಿ : ಉಪ್ಪಿನಂಗಡಿ ಯುವವಾಹಿನಿ ಘಟಕ ಆರಂಭವಾದ ದಿನಗಳಲ್ಲಿ ಘಟಕದ ಬೆಳವಣಿಗೆಗೆ ಶ್ರಮಿಸಿದ ನೆಲ್ಯಾಡಿಯ ರಾಘವ ಪೂಜಾರಿ ಇವರ ಆರೋಗ್ಯ ಚಿಂತಾಜನಕವಾಗಿದ್ದು ತಿಂಗಳಿಗೆ ಸುಮಾರು 75000 ಗಳಷ್ಟು ಖರ್ಚು ಆಗುವುದರಿಂದ ಆರ್ಥಿಕವಾಗಿ ನಿಭಾಯಿಸುವುದು ಕಷ್ಟಕರವಾಗಿರುತ್ತದೆ.ಆದುದರಿಂದ ದಿನಾಂಕ ೧೬. ೦೪. ೨೦೧೯ ರಂದು ಯುವವಾಹಿನಿ ಉಪ್ಪಿನಂಗಡಿ ಘಟಕದಿಂದ 12000 ರೂಪಾಯಿ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು. .ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಡಾ.ರಾಜಾರಾಮ ಕೆ.ಬಿ, ಸಲಹೆಗಾರರಾದ ಡಾ.ಸದಾನಂದ ಕುಂದರ್,ಮಾಜಿ ಅಧ್ಯಕ್ಷರಾದ ಶೇಖರ ಗೌಂಡತ್ತಿಗೆ , ಅಧ್ಯಕ್ಷರಾದ ಅಜಿತ್ […]
Read More
24-03-2019, 2:36 PM
ಉಪ್ಪಿನಂಗಡಿ : ತಾ.24-3-2019 ನೇ ಆದಿತ್ಯವಾರದಂದು ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಯುವವಾಹಿನಿ ವಿದ್ಯಾರ್ಥಿ ಸಂಘ ಉದ್ಘಾಟನೆಗೊಂಡಿತು, ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಟಿ. ಶಂಕರ ಸುವರ್ಣರವರು ದೀಪ ಬೆಳಗುವುದರ ಮೂಲಕ ನೂತನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಶುಭ ಹಾರೈಸಿದರು. ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದಅಧ್ಯಕ್ಷರಾದ ಅಜಿತ್ ಕುಮಾರ್ ಪಲೇರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರ್ಥಿ ಸಂಘ ಉದ್ಘಾಟನೆಯ ಬಳಿಕ ಯುವವಾಹಿನಿ ವಿದ್ಯಾರ್ಥಿ ಸಂಘಕ್ಕೆ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಉಪ್ಪಿನಂಗಡಿ ಯುವವಾಹಿನಿ ಘಟಕದ […]
Read More
30-12-2018, 2:48 PM
ಉಪ್ಪಿನಂಗಡಿ : ಕನ್ನಡ ನಾಡು ನುಡಿಗೆ ವಿಶು ಕುಮಾರ್ ಅವರ ಕೊಡುಗೆ ಅನನ್ಯಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ ತಿಳಿಸಿದರು. ಅವರು ದಿನಾಂಕ 30.12.2018 ರಂದು ಕುಕ್ಕುಜೆ ವಿಜಯ ಶಿಲ್ಪಿ ಇವರ ಮನೆಯಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ವಿಶುಕುಮಾರ್ ಪರಿಚಯ ಸರಣಿ ಮಾಲಿಕೆ-16 ರಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸಾಹಿತಿಯಾಗಿ, ನಟರಾಗಿ, ನಾಟಕಕಾರರಾಗಿ, ನಿರ್ದೇಶಕರಾಗಿ, ಕವನ ,ಕಥೆ ,ಲೇಖನ […]
Read More