ಉಡುಪಿ

ಸಾಂಸ್ಕೃತಿಕ ಚಟುವಟಿಕೆಗಳು ಸಂಘಟನೆಗೆ ಪೂರಕ : ವಿನಯ ಕುಮಾರ್ ಸೊರಕೆ

ಸಾಂಸ್ಕೃತಿಕ ಚಟುವಟಿಕೆಗಳು ಸಂಘಟನೆಗೆ ಪೂರಕ ವಾತಾವರಣ ನಿರ್ಮಾಣ ಮಾಡಲಿದೆ, ಈ ನಿಟ್ಟಿನಲ್ಲಿ ಯುವವಾಹಿನಿಯ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸೌರಭದ ಯಶಸ್ಸು ಸಂಘಟನೆಯ ಯಶಸ್ಸು ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ತಿಳಿಸಿದರು. ಅವರು 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಗಿರಿ ಸಭಾಂಗಣದಲ್ಲಿ ರಾಜ್ಯಾದ್ಯಂತ 33 ಘಟಕಗಳನ್ನು ಹೊಂದಿರುವ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯ ಸದಸ್ಯರ ಪ್ರತಿಭೆ ಅನಾವರಣಗೊಳಿಸುವ ನಿಟ್ಟಿನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಯುವವಾಹಿನಿ ಘಟಕದ ಆತಿಥ್ಯದಲ್ಲಿ ಅಂತ‌ರ್ ಘಟಕ ಸಾಂಸ್ಕೃತಿಕ […]

Read More

ಡೆನ್ನಾನ ಡೆನ್ನನ – 2022 ಚಾಂಪಿಯನ್ ಮುಡಿಗೇರಿಸಿದ ಯುವವಾಹಿನಿ ಬೆಳ್ತಂಗಡಿ ಘಟಕ

ಕಟಕಟಪಾಡಿ:- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ಚಾಂಪಿಯನ್ ಪಟ್ಟವನ್ನು ಯುವವಾಹಿನಿ ಬೆಳ್ತಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ ಪೈಪೋಟಿಯ […]

Read More

ಯುವಾಹಿನಿಯಿಂದ ಕಾಮನ್‌ವೆಲ್ತ್ ಪದಕ ವೀರ ಗುರುರಾಜ್ ಪೂಜಾರಿಗೆ ಗೌರವ ಅಭಿನಂದನೆ

ಕಟಪಾಡಿ :- ಯುನೈಟೆಡ್ ಕಿಂಗ್ಡಮ್ ನ ಬರ್ಮಿಂಗ್ಹ್ಯಾಮ್‌ ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ವೇಯ್ಟ್ ಲಿಪ್ಟ್ ವಿಭಾಗದಲ್ಲಿ ದೇಶಕ್ಕೆ ಚೊಚ್ಚಲ ಪದಕ ಪಡೆದು ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ ಗುರುರಾಜ್ ಪೂಜಾರಿ ಇವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗ್ರಹದಲ್ಲಿ ಜರಗಿದ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಇಂಧನ ಮತ್ತು ಕನ್ನಡ […]

Read More

ಉತ್ತಮ ನಡವಳಿಕೆ ಸಾಂಸ್ಕೃತಿಕ ಚಟುವಟಿಕೆಗೆ ಸಹಕಾರಿ :- ಸುನೀಲ್ ಕುಮಾರ್

ಕಟಪಾಡಿ :- ನಮ್ಮ ನಡವಳಿಕೆಯನ್ನು ರೂಪಿಸಲು ಸಾಂಸ್ಕೃತಿಕ ಚಟುವಟಿಕೆಗಳು ಪರೋಕ್ಷವಾಗಿ ಸಹಾಯ ಮಾಡುತ್ತಿದೆ. ಭಾಷೆ , ಸಂಸ್ಕೃತಿಯ ಒಡನಾಟದಿಂದ ಉತ್ತಮ ನಡವಳಿಕೆ ಮೂಡಲು ಸಾಧ್ಯ. ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಮಾಜವನ್ನು ತಿದ್ದಿ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವುದು ಸಾಧ್ಯ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದರು. ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ […]

Read More

ಯುವ ಸಮ್ಮಿಲನ ಕಾರ್ಯಕ್ರಮ

ಕಾರ್ಕಳ:- ದಿನಾಂಕ 17 ಜುಲೈ 2022ನೇ ಆದಿತ್ಯವಾರ ಯುವವಾಹಿನಿ(ರಿ.) ಕಾರ್ಕಳ, ಮೂಡಬಿದ್ರಿ, ಉಡುಪಿ ಘಟಕಗಳ ಜಂಟಿ ಆಶ್ರಯದಲ್ಲಿ “ಯುವ ಸಮ್ಮಿಲನ ಕಾರ್ಯಕ್ರಮ ” ಆನೆಕೆರೆ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಉದ್ಯಮಿಗಳಾಗಿರುವ ಡಿ. ಆರ್. ರಾಜು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಕಳ ಘಟಕದ ಅಧ್ಯಕ್ಷರಾದ ತಾರಾನಾಥ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು , […]

Read More

ತಲೆಗೊಂದು ಸೂರು ನೆರವಿನ ಸಹಾಯ ಹಸ್ತ

ಉಡುಪಿ :- ದಿನಾಂಕ 14 ಜೂನ್ 2022 ರಂದು ಉಡುಪಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಒಂದಾದ ತಲೆಗೊಂದು ಸೂರು ಕಾರ್ಯಕ್ರಮದಡಿಯಲ್ಲಿ ಈ ಬಾರಿ ತೀರ ಅವಶ್ಯಕತೆ ಇರುವ ಒಂದು ಬಡ ಕುಟುಂಬದ ಮನೆಯ ಮೇಲ್ಚಾವಣಿಯ ದುರಸ್ತಿ ಕಾರ್ಯ ಹಾಗೂ ವಿದ್ಯುತ್ ಪುನರ್ ನವೀಕರಣ ಹಾಗೂ ಪೇಂಟಿಂಗ್ ಕಾರ್ಯಕ್ರಮವು ಪೂರ್ಣಗೊಂಡಿದ್ದು ದಿನಾಂಕ 14 ಜುನ್ 2022 ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರು ,ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Read More

ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಉಡುಪಿ ಘಟಕದ ಆಶ್ರಯದಲ್ಲಿ “ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರಧಾನ ಸಮಾರಂಭ” ಯುವವಾಹಿನಿಯ ಸಭಾಂಗಣದಲ್ಲಿ ದಿನಾಂಕ 13/10/2019 ರಂದು ಜರಗಿತು. ಜಾನಪದ ವಿದ್ವಾಂಸ ಪ್ರಶಸ್ತಿಯನ್ನು ಖ್ಯಾತ ಹಿರಿಯ ಲೇಖಕಿ ಯಶವಂತಿ ಎಸ್ ಸುವರ್ಣ, ನಕ್ರೆ ಹಾಗೂ ಜಾನಪದ ಕಲಾವಿದ ಪ್ರಶಸ್ತಿಯನ್ನು ಅಂತಾರಾಷ್ಟ್ರೀಯ ಖ್ಯಾತಿಯ ಚಿತ್ರ ಕಲಾವಿದ ಪಿ ಎನ್ ಅಚಾರ್ಯ ಕೊಡಂಕೂರು ಇವರಿಗೆ ಉಡುಪಿ ತುಳುಕೂಟದ ಗೌರವಾಧ್ಯಕ್ಷ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಇವರು ಪ್ರಧಾನ ಮಾಡಿದರು. […]

Read More

ಉಡುಪಿ : ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜನ್ಮದಿನದ ಆಚರಣೆ

ಯುವವಾಹಿನಿ ಉಡುಪಿ ಘಟಕದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 165 ನೇ  ಜನ್ಮದಿನದ ಆಚರಣೆಯನ್ನು ಘಟಕದ ಸಭಾಂಗಣದಲ್ಲಿ ನಡೆಸಲಾಯಿತು. ಅಲೆವೂರು ಭಾಸ್ಕರ ಪೂಜಾರಿ ಇವರು ವಿಧಿವತ್ತಾಗಿ ಗುರುಪೂಜೆಯನ್ನು ನೆರವೇರಿಸಿದರು. ಅಧ್ಯಕ್ಷರಾದ ನಾರಾಯಣ ಬಿ. ಎಸ್ ರವರು ನಾರಾಯಣ ಗುರುಗಳು ಒಂದೇ ಜಾತಿ  ಒಂದೇ ಮತ, ನಾವೆಲ್ಲರೂ ಒಂದೇ  ಎಂಬ ಸಂದೇಶ ನೀಡಿದ್ದಾರೆ,ಅವರ ಆದರ್ಶಗಳನ್ನು ಪಾಲಿಸಿದರೆ ಜೀವನದಲ್ಲಿ ಒಳಿತಾಗುತ್ತದೆ ಎಂದರು.ಘಟಕದ ಸಲಹೆಗಾರರಾದ ಸಂತೋಷ್ ಕುಮಾರ್ ಮಾತನಾಡಿ ಯುವವಾಹಿನಿಯ ಆಸ್ತಿಯಾಗಿದ್ದು, ದೇವರ ಪಾದ ಸೇರಿದ ತಮ್ಮಯ ಸರ್ ಗೆ ನಾರಾಯಣ […]

Read More

ಜಿಲ್ಲಾ ಮಟ್ಟದ ಸಂಗೀತ ಮತ್ತು ಚಿತ್ರ ಕಲೆ ಸ್ವರ್ಧೆ

ಸಾರ್ವಜನಿಕ ಗಣೇಶೋತ್ಸವ ಸಮಿತಿ, ಅಲೆವೂರ್ ಇದರ ಜಿಲ್ಲಾ ಮಟ್ಟದ ಸಂಗೀತ ಮತ್ತು ಚಿತ್ರ ಕಲೆ ಸ್ವರ್ಧೆ ಯುವವಾಹಿನಿ ಉಡುಪಿ ಘಟಕ ಸಹಭಾಗಿತ್ವದಲ್ಲಿ ದಿನಾಂಕ 25/08/2019 ರಂದು ನಡೆಯಿತು. ನಮ್ಮ ಘಟಕದ ಉಪಾಧ್ಯಕ್ಷರಾದ ಜಗದೀಶ್ ಕುಮಾರ್,ನಿಕಟಪೂರ್ವ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್,ಕಾರ್ಯದರ್ಶಿ ಮಹಾಬಲ ಅಮೀನ್ ಕಾರ್ಯಕ್ರಮವನ್ನು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರೊಂದಿಗೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಬಹಳ ಉತ್ಸಹ ದಿಂದ ಈ ಸ್ವರ್ಧೆಯಲ್ಲಿ ಬಗವಹಿಸಿದರು.ಯುವವಾಹಿನಿ ಉಡುಪಿ ಘಟಕದ ನಿಕಟಪೂರ್ವ ಅಧ್ಯಕ್ಷ ರಾದ ಅಶೋಕ್ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!