ಯಡ್ತಾಡಿ

ಸಾಧನೆಗೆ ಕಲಿಕೆಯ ಅಂಕವೊಂದೇ ಮಾನದಂಡವಲ್ಲ

ಯಡ್ತಾಡಿ : ಯುವವಾಹಿನಿ(ರಿ) ಯಡ್ತಾಡಿ ಘಟಕದ ಆಶ್ರಯದಲ್ಲಿ ಐದು ದಿನಗಳ ಕಾಲ ನಡೆಸಿದ ಬೇಸಿಗೆ ಶಿಬಿರ, ವಿಕಸನ 2019 (ಅರಿವಿನ ತಂಗಾಳಿ) ರ ಅಂಗವಾಗಿ, ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಮಾಡಿಸಿ ಸನ್ಮಾನಿಸುವ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಸಫಲತೆಯೊಂದೇ ಸಾಧನೆಯ ಮಾನದಂಡವಾಗಿ ರೂಪುಗೊಳ್ಳುತ್ತಿದ್ದು, ಇದು ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವುದು ಕಳವಳಕಾರಿಯಾದ ಅಂಶವಾಗಿದೆ. ಶೈಕ್ಷಣಿಕ ಸಾಧನೆಗೆ ಹೊರತಾಗಿಯೂ ಶ್ರಮವಹಿಸಿ ದುಡಿದರೆ ಸಮಾಜದಲ್ಲಿ ಶ್ರೇಷ್ಠ ಸಾಧನೆ ಮಾಡಬಹುದೆಂಬ ವಿಷಯ ಮನವರಿಕೆ ಮಾಡಲು ಪ್ರತಿ […]

Read More

ಪಠ್ಯದೊಂದಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಮಕ್ಕಳಿಗೆ ಸಹಕಾರಿ : ಜಯಂತ್ ನಡುಬೈಲು

ಯಡ್ತಾಡಿ : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಇತರ ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಾಗ ಮಾತ್ರ ಅವರ ಜೀವನಕ್ಕೆ ನಿಜವಾದ ಅಡಿಪಾಯ ಸಿಗುತ್ತದೆ. ಯುವವಾಹಿನಿ (ರಿ) ಯಡ್ತಾಡಿ ಘಟಕ ಸಾಮಾಜಿಕ ಚಟುವಟಿಕೆಗಳ ಜೊತೆಗೆ ಮಕ್ಕಳ ಬೌದ್ಧಿಕ ಚಿಂತನೆ ಹೆಚ್ಚಿಸುವ ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಯೋಜಿಸಿರುವುದು ಶ್ಲಾಘನೀಯ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಜಯಂತ್ ನಡುಬೈಲು ತಿಳಿಸಿದರು. ಅವರು 25.04.2019 ರಂದು ಸಂಜೆ ೬:೦೦ ಘಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಡ್ತಾಡಿಯಲ್ಲಿ ಜರುಗಿದ […]

Read More

ವಿಕಸನ 2019 – ಅರಿವಿನ ತಂಗಾಳಿ

  ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ ಸಾರಥ್ಯದಲ್ಲಿ ವಿದ್ಯಾರ್ಥಿಗಳಿಗಾಗಿ ಸತತವಾಗಿ 7ನೇ ವರ್ಷದ ಐದು ದಿನಗಳ ಮಕ್ಕಳ ಉಚಿತ ಬೇಸಿಗೆ ಶಿಬಿರ, ವಿಕಸನ – 2019, ಅರಿವಿನ ತಂಗಾಳಿ ಕಾರ್ಯಕ್ರಮ ದಿನಾಂಕ 21-04-2019 ರಿಂದ 25-04-2019 ರವರೆಗೆ ಅತ್ಯಂತ ಯಶಸ್ವಿಯಾಗಿ ಜರಗಿತು. ನರೇಂದ್ರ ಕುಮಾರ್ ಕೋಟಾ ನಿರ್ದೇಶನದಲ್ಲಿ ನಡೆದ ಈ ಶಿಬಿರದಲ್ಲಿ ಏಳು ಜನ ಸಂಪನ್ಮೂಲ ವ್ಯಕ್ತಿಗಳು 83 ಜನ ವಿದ್ಯಾರ್ಥಿಗಳನ್ನು ವಿವಿಧ ರೀತಿಯ ಚಟುವಟಿಕೆಗಳಿಂದ ರಂಜಿಸುವ ಜೊತೆ ಅವರ ವ್ಯಕ್ತಿತ್ವ ವಿಕಸನದಲ್ಲಿ ಪರಿಣಾಮಕಾರಿಯಾದ […]

Read More

ಒಂದಿಷ್ಟು ಸಂಘಟನೆಗಾಗಿ, ಒಂದಿಷ್ಟು ವಿಶುಕುಮಾರ್ ನೆನಪಿಗಾಗಿ

ಯಡ್ತಾಡಿ : ಸಂಘಟನೆಯನ್ನು ಬಲಪಡಿಸುವ ಸಲುವಾಗಿ ಆರಂಭಿಸಿದ ‘ನಮ್ಮ ನಡೆ’ಯ ಮೂರನೇ ಕಾರ್ಯಕ್ರಮವನ್ನು, ‘ವಿಶುಕುಮಾರ್ ನೆನಪಿಗಾಗಿ’ ಸೈಬ್ರಕಟ್ಟೆ ದಾಳಾಡಿಮನೆ ನರಸಿಂಹ ಪೂಜಾರಿಯವರ ಮನೆಯಲ್ಲಿ 20-1-2019 ರಂದು ನಡೆಸಲಾಯಿತು. ನರಸಿಂಹ ಪೂಜಾರಿಯವರು ನಾರಾಯಣ ಗುರುಗಳಿಗೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ರಾಜ್ಯ ವಿಪಕ್ಷ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿಯವರು ನೆರೆದ ಜನರಿಗೆ ಅರ್ಥವಾಗುವ ರೀತಿಯಲ್ಲಿ ಫೆಬ್ರುವರಿ ೩ನೇ ತಾರೀಕಿನಂದು ನಡೆಯಲಿರುವ ಬಿಲ್ಲವ ಸಮಾವೇಶದ ಅಗತ್ಯ ಹಾಗೂ ಔಚಿತ್ಯದ ಬಗ್ಗೆ ವಿವರವಾಗಿ ಮನವರಿಕೆ ಮಾಡಿದರು. ಅವರನ್ನು ಯುವವಾಹಿನಿ(ರಿ) […]

Read More

ಯುವವಾಹಿನಿ(ರಿ) ಯಡ್ತಾಡಿ ಘಟಕದಿಂದ ವೈದ್ಯಕೀಯ ನೆರವು

ಯಡ್ತಾಡಿ : ಬದುಕು ಒಂದೊಮ್ಮೆ ತೀರಾ ಸಂಕಷ್ಟಕ್ಕೆ ತುತ್ತಾಗುತ್ತದೆ. ಕಷ್ಟ ಬಂದವರಿಗೆ ಮರಳಿ ಮರಳಿ ನೋವು ಬರುತ್ತೆ. ಯಡ್ತಾಡಿ ಗ್ರಾಮದಲ್ಲಿ ವಾಸವಾಗಿರುವ ಸ.ಹಿ.ಪ್ರಾ. ಶಾಲೆ ಯಡ್ತಾಡಿಯ 7ನೇ ತರಗತಿ ವಿದ್ಯಾರ್ಥಿ ರಾಜೇಂದ್ರ ಎಂಬ ಹುಡುಗನ ಕರುಣಾಜನಕ ಕಥೆ ಇದು. ಕಡು ಬಡತನದಲ್ಲಿ ಹುಟ್ಟಿದ ಈ ಹುಡುಗನಿಗೆ ಹುಟ್ಟಿನಿಂದಲೇ ಒಂದು ಕಿಡ್ನಿಯಲ್ಲಿ ಸಮಸ್ಯೆ ಇತ್ತು. ಆದರೂ ಚಿಕಿತ್ಸೆಯ ಮೂಲಕ ಒಂದೇ ಕಿಡ್ನಿಯಲ್ಲಿ ಲವ ಲವಿಕೆಯ ಜೀವನ ಸಾಗಿಸುತ್ತಿದ್ದ. ಆದರೆ ಇತ್ತೀಚಿಗೆ ಇನ್ನೊಂದು ಕಿಡ್ನಿಯಲ್ಲೂ ಸಮಸ್ಯೆ ಕಾಣಿಸಿ ಹಲವಾರು ದಿನಗಳಿಂದ […]

Read More

ಪಾಠ ಹೇಳುವ ಆಟಗಳ ನಡುವೆ ಪ್ರಥಮ ಚಿಕಿತ್ಸೆಯ ಪ್ರಾಯೋಗಿಕ ಮಾಹಿತಿ : ನಮ್ಮ ನಡೆ ಕಂಬಳಕಟ್ಟು ಕಡೆ

ಯಡ್ತಾಡಿ : ಸಂಘಟನೆಯನ್ನು ಬಲಪಡಿಸುವ ಸಲುವಾಗಿ ಒಂದಿಷ್ಟು ಮನರಂಜನೆಗೆ, ಒಂದಿಷ್ಟು ಸಂಘಟನೆಗೆ ಎಂಬ ಉದ್ದೇಶವನ್ನು ಮುಂದಿರಿಸಿಕೊಂಡು ಯುವವಾಹಿನಿ (ರಿ) ಯಡ್ತಾಡಿ ಘಟಕ ಆರಂಭಿಸಿದ ನಮ್ಮ ನಡೆಯ ಎರಡನೇ ಕಾರ್ಯಕ್ರಮ ನಮ್ಮ ನಡೆ, ಕಂಬಳಕಟ್ಟು ಕಡೆ, ಅಧ್ಯಕ್ಷರಾದ ಸತೀಶ ಪೂಜಾರಿಯವರ ಮನೆಯಲ್ಲಿ ದಿನಾಂಕ 21-10-2018 ರಂದು ನಡೆಸಲಾಯಿತು. ಸ್ವಯಂ ಪ್ರೇರಣೆಯಿಂದ ಸದಸ್ಯರು ಭಾಗವಹಿಸದೇ ಇದ್ದರೆ ಯಾವುದೇ ಸಂಘಟನೆಯನ್ನು ಮುನ್ನಡೆಸುವುದು ಕಷ್ಟ ಸಾಧ್ಯ. ಅದೂ ಅಲ್ಲದೆ ಅದು ವ್ಯರ್ಥ ಕೂಡ. ಈ ನಿಟ್ಟಿನಲ್ಲಿ ಹೊಸ ಚಿಂತನೆಯೊಂದಿಗೆ ಯುವವಾಹಿನಿ ಪ್ರಾರಂಭಿಸಿದ ಕಾರ್ಯಕ್ರಮ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ನಮ್ಮ ನಡೆ, ಸ್ವಚ್ಛತೆ ಕಡೆ : ಯಡ್ತಾಡಿ ಘಟಕ

ಯಡ್ತಾಡಿ : ಸ್ವಾತಂತ್ರ್ಯ ದಿನದಂದು ಕೇವಲ ಧ್ವಜ ಹಾರಿಸಿ ಸಿಹಿ ತಿಂಡಿ ತಿಂದು ಮನೆಗೆ ಮರಳುವ ಬದಲು, ನಾಲ್ಕು ಜನರಿಗೆ ಉಪಯೋಗವಾಗುವ ಅರ್ಥಪೂರ್ಣ ಕಾರ್ಯಕ್ರಮವನ್ನು ಮಾಡುವುದು, ಯುವವಾಹಿನಿ (ರಿ) ಯಡ್ತಾಡಿ ಘಟಕದ ಪ್ರತಿ ವರುಷದ ಕಾರ್ಯಕ್ರಮ. ಈ ಬಾರಿ ಮಾಡಲೇ ಬೇಕಾದ ಕೆಲಸ ಎಲ್ಲರ ಕಣ್ಣೆದುರೇ ಇದ್ದರೂ, ಯಾರಿಗೂ ಈ ಮೊದಲು ಅನುಕೂಲಕರ ಸಮಯ ಒದಗಿ ಬಂದಿರಲಿಲ್ಲ. ಯಡ್ತಾಡಿಯಿಂದ ಕಂಬಳಗದ್ದೆಗೆ ಹೋಗುವ ಕಾಂಕ್ರೀಟ್ ರೋಡಿನ ಎರಡು ಬದಿಗಳಲ್ಲಿ ಹಬ್ಬಿದ ಗಿಡ ಮರ ಹಾಗು ಕಸ ಕಡ್ಡಿಗಳು, ಅದಾಗಲೇ […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

ಯುವವಾಹಿನಿ (ರಿ) ಯಡ್ತಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಸಾಪ್ಟ್ ವೇರ್ ಇಂಜಿನಿಯರ್ ಸತೀಸ್ ಪೂಜಾರಿ ಆಯ್ಕೆಯಾಗಿದ್ದಾರೆ ಅಧ್ಯಕ್ಷರು ; ಸತೀಶ್ ಪೂಜಾರಿ ಉಪಾಧ್ಯಕ್ಷರು : ಶರತ್ ಪೂಜಾರಿ : ರಾಘವೇಂದ್ರ ಪೂಜಾರಿ ಕಾರ್ಯದರ್ಶಿ   : ಚಂದ್ರ. ಪಿ ಜತೆ ಕಾರ್ಯದರ್ಶಿ : ನಿತೇಶ್ ಪೂಜಾರಿ ಕೋಶಾಧಿಕಾರಿ : ದೀಕ್ಷಿತ ನಿರ್ದೇಶಕರು : ಕ್ರೀಡೆ : ಆರತಿ ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ : ಪ್ರಕಾಶ್ ಪೂಜಾರಿ ವ್ಯಕ್ತಿತ್ವ ವಿಕಸನ : ಗಣೇಶ್ ಪೂಜಾರಿ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!