ಹಳೆಯಂಗಡಿ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]

Read More

ಆರೋಗ್ಯದ ಕಾಳಜಿ ವಹಿಸಿ: ರಮೇಶ್ ಬಂಗೇರ

ಆರೋಗ್ಯದ ಬಗ್ಗೆ ಕಾಳಜಿ ವಹಿಸಿದಲ್ಲಿ ದೇಹದ ಸಮತೋಲನದಿಂದ ದಿನಪೂರ್ತಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯ. ಕಾಲ ಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಸೂಕ್ತ ವೈದ್ಯರಲ್ಲಿ ನಡೆಸಿಕೊಂಡು ರೋಗ ಬರುವ ಮೊದಲೇ ಆರೋಗ್ಯದ ಬಗ್ಗೆ ತಿಳಿದುಕೊಳ್ಳಿರಿ ಎಂದು ಲಯನ್ಸ್ ಕ್ಲಬ್‌ನ ಜಿಲ್ಲಾ ಸಮಿತಿಯ ಅಧಿಕಾರಿ ರಮೇಶ್ ಬಂಗೇರ ಹೇಳಿದರು. ಅವರು ದಿನಾಂಕ 24.09.2017 ರಂದು ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಯುವವಾಹಿನಿ ಹಳೆಯಂಗಡಿ ಘಟಕದ ಆಶ್ರಯದಲ್ಲಿ ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘ,ಲಯನ್ಸ್, ಲಿಯೋ ಮತ್ತು ಪೂಜಾ ಫ಼್ರೆಂಡ್ಸ್‌ನ ಹಾಗೂ ಮುಕ್ಕದ […]

Read More

ನಾಳಿನ ಸದೃಢ ಸಮಾಜಕ್ಕೆ, ಇಂದು ಸನ್ನದ್ಧರಾಗೋಣ : ಕವಿತಾ ಸನಿಲ್

ನಾಳಿನ ಸದೃಢ ಸಮಾಜಕ್ಕೆ ಇಂದು ಸನ್ನದ್ಧರಾದಲ್ಲಿ ಮಾತ್ರ ಯುವ ಸಮುದಾಯವನ್ನು ಸಂಸ್ಕøತಿ ಸಂಸ್ಕಾರಗಳ ಮೂಲಕ ಅದರ ಬಗ್ಗೆ ತಿಳುವಳಿಕೆ ನೀಡುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಮಂಗಳೂರು ಮೇಯರ್ ಕವಿತಾ ಸನಿಲ್ ಹೇಳಿದರು. ಹಳೆಯಂಗಡಿಯ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಯುವವಾಹಿನಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆದ ಆಟಿ ಆನಿ-ಇನಿ-ಎಲ್ಲೆ ಕಾರ್ಯಕ್ರಮವನ್ನು ಬತ್ತ ಕುಟ್ಟುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ನಾನಿಲ್ ಅಧ್ಯಕ್ಷತೆಯನ್ನು […]

Read More

ಹಳೆಯಂಗಡಿ ಯುವವಾಹಿನಿಯಿಂದ ಉಚಿತ ಪುಸ್ತಕ ವಿತರಣೆ

  ಮಕ್ಕಳನ್ನು ಸಮಾಜದ ಆಸ್ತಿಯನ್ನಾಗಿಸಲು ಅವರಿಗೆ ಸೂಕ್ತವಾದ ಶಿಕ್ಷಣ ನೀಡುವಂತಹ ವಾತಾವರಣ ನಿರ್ಮಾಣ ಆಗಬೇಕು. ಗುರುಹಿರಿಯರನ್ನು ಗೌರವಿಸುವ ಸಂಸ್ಕೃತಿಯನ್ನು ಹೆತ್ತವರು ಮನೆಯಿಂದ ಆರಂಭಿಸಿದಲ್ಲಿ ಮಾತ್ರ ಅವರ ಬದುಕಿನಲ್ಲಿ ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಳ್ಳಲು ಸಾಧ್ಯವಿದೆ. ಯುವ ಜನರಿಗೆ ಸೂಕ್ತ ಮಾರ್ಗದರ್ಶನ ನೀಡಿ ಸ್ವಾವಲಂಬಿಗಳನ್ನಾಗಿ ಮಾಡಿರಿ ಎಂದು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ನಾನಿಲ್ ಹೇಳಿದರು. ಅವರು ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಆಶ್ರಯದಲ್ಲಿ ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ದಿನಾಂಕ 11.06.2017 ರಂದು ಜರುಗಿದ ಉಚಿತ […]

Read More

ಹಳೆಯಂಗಡಿ ಯುವವಾಹಿನಿಯ 2017-18 ನೇ ಸಾಲಿನ ಪದಗ್ರಹಣ ಸಮಾರಂಭ

ವಿದ್ಯೆ ಉದ್ಯೋಗ ಸಂಪರ್ಕ ಎಂಬ ಮೂರು ಮುಖ್ಯ ಉದ್ದೇಶಗಳೊಂದಿಗೆ ಹಳೆಯಂಗಡಿ ಯುವವಾಹಿನಿಯ ಸಮಾಜಮುಖಿ ಕಾರ್ಯ ಶ್ಲಾಘನೀಯವಾದುದು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ ತಿಳಿಸಿದರು. ಅವರು ದಿನಾಂಕ 16.04.2017 ನೇ ಆದಿತ್ಯವಾರ ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಜರುಗಿದ ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2017-18 ನೇ ಸಾಲಿನ ನೂತನ ಪದಾದಿಕಾರಿಗಳ ಪದಪ್ರಧಾನ ನೆರವೇರಿಸಿ ಮಾತನಾಡಿದರು. ಕಟೀಲು ಮೇಳದ ಸುಪ್ರಸಿದ್ಧ ಯಕ್ಷಗಾನ ಕಲಾವಿದ ರಾಮಚಂದ್ರ ಮುಕ್ಕ ಇವರು ಯಕ್ಷಗಾನ ತರಬೇತಿ ತರಗತಿಯನ್ನು ಉದ್ಘಾಟಿಸಿ, ಜಿಲ್ಲೆಯ […]

Read More

ಹಳೆಯಂಗಡಿ-ಕೊಪ್ಪಳ ರಸ್ತೆಗೆ ಬ್ರಹ್ಮಶ್ರೀ ನಾರಾಯಣ ಗುರು ರಸ್ತೆ ನಾಮಕರಣ

ದಿ. 16-9-2016 ರ ಗುರುಜಯಂತಿಯಂದು ಹಳೆಯಂಗಡಿ ಘಟಕದ ವತಿಯಿಂದ ಹಳೆಯಂಗಡಿ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಹಳೆಯಂಗಡಿ ಪರಿಸರದ ಹಳೆಯಂಗಡಿ-ಕೊಪ್ಪಳ ಸಂಪರ್ಕ ರಸ್ತೆಯನ್ನು ಅಧಿಕೃತವಾಗಿ ಬ್ರಹ್ಮಶ್ರೀ ನಾರಾಯಣ ಗುರು ರಸ್ತೆ ಎಂಬ ನಾಮಕರಣದಲ್ಲಿ ಶಾಸಕ ಅಭಯಚಂದ್ರ ಜೈನ್‌ರವರಿಂದ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಘಟಕದ ಹೆಚ್ಚಿನ ಸದಸ್ಯರು ಭಾಗವಹಿಸಿ, ಹಳೆಯಂಗಡಿ ಪರಿಸರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಹೆಸರು ಸದಾ ರಾರಾಜಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿರುತ್ತೇವೆ.

Read More

ಹಳೆಯಂಗಡಿ ಘಟಕದ ಸಮಾಜ ಸೇವೆ

ದಿ. 7-9-2016 ರಂದು ಹಳೆಯಂಗಡಿ ಸಾರ್ವಜನಿಕ ಗಣೇಶೋತ್ಸವದ ಶೋಭಾ ಯಾತ್ರೆಯಲ್ಲಿ ನೆರೆದ ಭಕ್ತಾಭಿಮಾನಿಗಳಿಗೆ ಘಟಕದ ವತಿಯಿಂದ ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಇದರ ಮುಂಭಾಗದಲ್ಲಿ 1000 ಜನರಿಗೆ ರೂ. 16,000/- ಮೊತ್ತದ ಉಪಹಾರದ ವ್ಯವಸ್ಥೆಯನ್ನು ಕಲ್ಪಿಸಿ, ಹಳೆಯಂಗಡಿ ಸಾರ್ವಜನಿಕ ಗಣೇಶೋತ್ಸವದ ಶೋಭಾ ಯಾತ್ರೆಯ ಯಶಸ್ಸಿಗೆ ಸಹಕಾರ ನೀಡಲಾಗಿರುತ್ತದೆ.

Read More

ಹಳೆಯಂಗಡಿ ಘಟಕದ ವತಿಯಿಂದ ಆಟಿದ ಆಯನ ಕಾರ್ಯಕ್ರಮ

ಯುವವಾಹಿನಿ(ರಿ) ಹಳೆಯಂಗಡಿ ವತಿಯಿಂದ ದಿನಾಂಕ 24-7-2016 ರಂದು ಆಟಿದ ಆಯನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕೋಟಿ ಚೆನ್ನಯರು ಆರಾಧಿಸಿದ ಕೆಮ್ಮಲೆಜೆಯ ನಾಗಬ್ರಹ್ಮ ಗುಡಿಯ ಆಕರ್ಷಕ ರಂಗ ವಿನ್ಯಾಸದ ವೇದಿಯಲ್ಲಿ ಹಳೆಯಂಗಡಿ ಯುವವಾಹಿನಿಯ ಅವಳಿ ಸದಸ್ಯರ ಕೋಟಿ-ಚೆನ್ನಯ ಕಿರು ರೂಪಕದೊಂದಿಗೆ ಕಾರ್ಯಕ್ರಮ ಆರಂಭ. ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಕಸ್ತೂರಿ ಪಂಜ ಹಾಗೂ ತುಳು ಚಿತ್ರನಟ, ರಂಗಭೂಮಿ ಕಲಾವಿದ ಶ್ರೀ ಅರವಿಂದ ಬೋಳಾರ್ ಇವರು ನಾಗಬ್ರಹ್ಮ ಗುಡಿಯ ಜೋಡು ನಂದಾ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಅತ್ಯಂತ ವಿಶಿಷ್ಠವಾಗಿ […]

Read More

ಯುವವಾಹಿನಿ(ರಿ) ಹಳೆಯಂಗಡಿ ಘಟಕದಿಂದ ಉಚಿತ ಪುಸ್ತಕ ವಿತರಣೆ

ಯುವವಾಹಿನಿ(ರಿ) ಹಳೆಯಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ: 12-6-2016 ರಂದು ಹಳೆಯಂಗಡಿ ಬಿಲ್ಲವ ಸಂಘದ ಸಭಾಗೃಹದಲ್ಲಿ ಕೊಲ್ನಾಡು ದಿ! ಕಮಲ ಬೂಬ ಅಮೀನ್‌ರವರ ಸ್ಮರಣಾರ್ಥ ಅವರ ಮಕ್ಕಳಿಂದ (ಪೂಜಾ ಎರೇಂಜರ್‍ಸ್ & ಕೆಟರರ್‍ಸ್) ಇವರ ಪ್ರಾಯೋಜಕತ್ವದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ.ಗಣೇಶ್ ಜಿ. ಬಂಗೇರ ವಹಿಸಿದರು. ಶ್ರೀ ಜೈಕೃಷ್ಣ ಬಿ. ಕೋಟ್ಯಾನ್, ಮಾಲಕರು ಪೂಜಾ ಎರೇಂಜರ್‍ಸ್ & ಕೆಟರರ್‍ಸ್ ಹಳೆಯಂಗಡಿ ಇವರು ಹಳೆಯಂಗಡಿ ಸುತ್ತಮುತ್ತಲ್ಲಿನ 41 ಅರ್ಹ ಶಾಳಾ ಮತ್ತು ಕಾಲೇಜು […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!