26-03-2017, 10:24 AM
ಆಧುನಿಕ ಸಮಾಜದಲ್ಲಿ ಬದಲಾಗುತ್ತಿರುವ ಜೀವನ ಕ್ರಮದಲ್ಲಿ ಯುವವಾಹಿನಿ ಸಮಾಜಕ್ಕೆ ಅನಿವಾರ್ಯವಾಗಿದೆ. ಕಳೆದ 30 ವರ್ಷಗಳಿಂದ ಯುವವಾಹಿನಿ ಬಿಲ್ಲವ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಿದೆ ಎಂದು ಬೆಂಗಳೂರಿನ ಖ್ಯಾತ ವಕೀಲರಾದ ನವನೀತ ಡಿ.ಹಿಂಗಾಣಿ ತಿಳಿಸಿದರು. ಅವರು ಉಜ್ಜೋಡಿ ಶ್ರೀ ಮಹಾಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ(ರಿ) ಕಂಕನಾಡಿ ಘಟಕ 2017-18 ನೇ ಸಾಲಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವ್ಯಕ್ತಿತ್ವ ವಿಕಸನ, ಸಾಮಾಜಿಕ ಸ್ಥಾನಮಾನ, ನಾಯಕತ್ವದ ಬೆಳವಣಿಗೆ ಹಾಗೂ ಸಹಸ್ರಾರು ಜನರ ವ್ಯಕ್ತಿತ್ವವನ್ನು ರೂಪಿಸುವಂತಹ ಕಾರ್ಯವನ್ನು ಯುವವಾಹಿನಿ […]
Read More
29-12-2016, 11:43 AM
ದಿನಾಂಕ 29-12-2016 ರಂದು ಕಂಕನಾಡಿ ಘಟಕದ ವತಿಯಿಂದ ಶ್ರೀ ಮಹಾಂಕಾಳಿ ದೈವಸ್ಥಾನದಲ್ಲಿ ವಾರದ ಪೂಜೆ ಹಾಗೂ ಭಜನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಅಲ್ಲದೆ ದೈವಸ್ಥಾನಕ್ಕೆ 50 ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಘಟಕದ ಸಲಹೆಗಾರರಾದ ಜಿ. ಪರಮೇಶ್ವರ ಪೂಜಾರಿ, ಘಟಕದ ಅಧ್ಯಕ್ಷ ಹರೀಶ್ ಕೆ. ಸನಿಲ್, ಶ್ರೀ ಮಹಾಂಕಾಳಿ ದೈವಸ್ಥಾನದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಘಟಕದ ಕಾರ್ಯದರ್ಶಿ ಭವಿತ್ರಾಜ್ ಹಾಗೂ ನಿಕಟಪೂರ್ವ ಅಧ್ಯಕ್ಷ ಶೇಖರ್ ಅಮೀನ್ ಉಪಸ್ಥಿತರಿದ್ದರು.
Read More
20-11-2016, 10:32 AM
ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016 ನೇ ಆದಿತ್ಯವಾರ ಜರಗಿತು. ಯುವವಾಹಿನಿ ಕಂಕನಾಡಿ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.
Read More
10-11-2016, 10:26 AM
ಯುವವಾಹಿನಿ ಕಂಕನಾಡಿ ಘಟಕ ಆಶ್ರಯದಲ್ಲಿ ಘಟಕದ ಕ್ರಿಯಾಶೀಲ ಸದಸ್ಯರ ತಂಡವು ವೈವಿಧ್ಯಮಯವಾಗಿ ರಚಿಸಿದ ಗೂಡುದೀಪವು ನೀರುಮಾರ್ಗದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿ ಆಯೋಜಿಸಿದ್ದ ಗೂಡು ದೀಪ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದಿರುತ್ತದೆ ಹಾಗೂ ನಮ್ಮ ಕುಡ್ಲ ವಾರ್ತಾ ವಾಹಿನಿಯು ಆಯೋಜಿಸಿದ್ದ ಗೂಡುದೀಪ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿರುತ್ತದೆ.
Read More
22-10-2016, 5:52 AM
ದಿನಾಂಕ 22-10-2016 ರಂದು ಕಂಕನಾಡಿ ಘಟಕದ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಮಗು ರಿಶಿತ್ ಕುಮಾರ್ ಅವರಿಗೆ ಧಾನಿಗಳ ಸಹಕಾರದಿಂದ ಒಟ್ಟು ಮಾಡಿದ ರೂ. 17,000/-ದ ಚೆಕ್ನ್ನು ಘಟಕಾಧ್ಯಕ್ಷರು ವಿತರಿಸುತ್ತಿರುವುದು.
Read More
25-09-2016, 5:36 AM
ದಿನಾಂಕ 25-9-2016 ರಂದು ಯುವವಾಹಿನಿ (ರಿ) ಕಂಕನಾಡಿ ಘಟಕದ ವತಿಯಿಂದ ಉಜ್ಜೋಡಿಯ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 162 ನೇ ಜಯಂತಿ ಆಚರಣೆ ಹಾಗೂ ಗುರುಗಳ ಬಗ್ಗೆ ಶಾಲಾ ಮಕ್ಕಳಿಗೆ ಏರ್ಪಡಿಸಿದ ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಜರಗಿತು. ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಸಿಂಚನ ಲೈಟಿಂಗ್ ಕಂಟ್ರೋಲ್ನ CEO ರತ್ನಾಕರ ಸುವರ್ಣ, ಮಾಜಿ […]
Read More