11-09-2016, 5:14 AM
ಯುವವಾಹಿನಿ ಬೆಳ್ತಂಗಡಿ ಘಟಕದ 2016-17 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿ. 11-9-2016 ರಂದು ಜರಗಿತು. ಕಾರ್ಯಕ್ರಮವನ್ನು ಶಾಸಕ ಕೆ. ವಸಂತ ಬಂಗೇರರವರು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿತಾಂಬರ ಹೇರಾಜೆ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರ ಬಿ. ತಮ್ಮಯ ಭಾಗವಹಿಸಿದ್ದರು. ಈ ಶುಭ ಸಂದರ್ಭದಲ್ಲಿ ಶ್ರೀ ಬಿ. ತಮ್ಮಯರವರು ಬರೆದ ತುಲುವೆ ಅನ್ನುವ ತುಳು ಲಿಪಿ […]
Read More
27-08-2016, 5:28 AM
ದಿನಾಂಕ 27-8-2016ರಂದು ವೇಣೂರಿನಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರವು ಘಟಕದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಅಧ್ಯಕ್ಷತೆಯಲ್ಲಿ ಜರಗಿತು. ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಳದಂಗಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಪ್ರಶಾಂತ್ ಕುಮಾರ್ರವರು ಶಿಬಿರವನ್ನು ನಡೆಸಿಕೊಟ್ಟರು. ಮಹಾಮಾನವತವಾದಿ ನಾರಾ ಯಣ ಗುರುಗಳು ಎಂಬ ವಿಷಯದ ಬಗ್ಗೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ರಕ್ಷಾ ಪ್ರಥಮ ಸ್ಥಾನವನ್ನು ಪಡೆದರು. ಅಂದಿನ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ನಿಶಾ, ನೀರಿಕ್ಷಾ ಎನ್. ನಾವರ, ಆಕೃತಿ […]
Read More
14-08-2016, 5:37 AM
ಘಟಕದ ವಾರ್ಷಿಕ ಮಹಾಸಭೆಯು ದಿನಾಂಕ 14-08-2016ರಂದು ಘಟಕದ ಉಪಾಧ್ಯಕ್ಷ ಯೋಗೀಶ್ ಮಜಿಕುಡೇಲು ಇವರ ಅಧ್ಯಕ್ಷತೆಯಲ್ಲಿ ಸುವರ್ಣ ಆರ್ಕೆಡ್ ಸಂತೆಕಟ್ಟೆ ಇಲ್ಲಿ ಜರಗಿತು. ಸಭೆಯಲ್ಲಿ 2015-16ನೇ ಸಾಲಿನ ವಾರ್ಷಿಕ ವರದಿ ಮಂಡನೆ ಜಮಾ-ಖರ್ಚಿನ ವಿವರ ಮಂಡನೆ, 2016-17ನೇ ಸಾಲಿನ ಅಂದಾಜು ಆಯ-ವ್ಯಯ ಪಟ್ಟಿಯ ಪರಿಶೀಲನೆ, 2016-17ನೇ ಸಾಲಿನ ನಿರ್ದೇಶಕರ ಆಯ್ಕೆ ನಡೆಯಿತು. ಪ್ರಾರಂಭದಲ್ಲಿ ರಘುನಾಥ್ ಶಾಂತಿ ಪ್ರಾರ್ಥಿಸಿ, ಅಶ್ವತ್ ಕುಮಾರ್ರವರು ಸ್ವಾಗತಿಸಿ, ಸ್ಮಿತೇಶ್ ಎಸ್. ಬಾರ್ಯ ವಂದಿಸಿದರು. ನಿರ್ದೇಶಕರ ಸಭೆ ದಿನಾಂಕ 14-8-2016ರಂದು ಘಟಕದ ನೂತನ ನಿರ್ದೇಶಕರ ಪ್ರಥಮ […]
Read More
12-08-2016, 5:40 AM
ತೀರಾ ಅನಾರೋಗ್ಯದಿಂದ ಬಳಲುತ್ತಿರುವ ಆರಂಬೋಡಿ ಗ್ರಾಮದ ನೆಲ್ಲಿಗುಡ್ಡೆ ಮನೆ ಪದ್ಮ ಪೂಜಾರಿಯವರ ಮನೆಗೆ ದಿನಾಂಕ 12-8-2016ರಂದು ಘಟಕದ ಪದಾಧಿಕಾರಿಗಳು, ನಿರ್ದೇಶಕರು, ಸಲಹೆಗಾರರು ಭೇಟಿ ನೀಡಿ ಚಿಕಿತ್ಸಾ ವೆಚ್ಚಕ್ಕಾಗಿ ರೂ. 10,000/- ಮೊತ್ತದ ಸಹಾಯಧನವನ್ನು ನೀಡಿದರು.
Read More