Yuvavahini

ಉಡುಪಿ ಯುವವಾಹಿನಿಯಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ತಲೆಗೊಂದು ಸೂರು – ಇದು ಯುವವಾಹಿನಿ (ರಿ) ಉಡುಪಿ ಘಟಕದ ಶಾಶ್ವತ ಯಶಸ್ವೀ ಯೋಜನೆ – ವರುಷಕ್ಕೊಂದು ತೀರಾ ಬಡ ಕುಟುಂಬವನ್ನು ಆಯ್ಕೆ ಮಾಡಿ ಅವರಿಗೆ ಮನೆ ನಿರ್ಮಾಣ ಮಾಡಿ ಕೊಡುವುದು ಉಡುಪಿ ಯುವವಾಹಿನಿಯ ಜನಪ್ರಿಯ ಸಮಾಜಮುಖಿ ಕಾರ್ಯಕ್ರಮ. ಈ ವರ್ಷದ ತಲೆಗೊಂದು ಸೂರು ಕಾರ್ಯಕ್ರಮದಲ್ಲಿ ದಿನಾಂಕ 23.04.2017ನೇ ಆದಿತ್ಯವಾರ ಶ್ರೀಮತಿ ಇಂದಿರಾ ಎಂಬ ಬಡ ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲಾಗಿದೆ. ರಾಜ್ಯ ಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಸಾಂಕೇತಿಕವಾಗಿ  ಶ್ರೀಮತಿ ಇಂದಿರಾ ಕುಟುಂಬಕ್ಕೆ ಮನೆ ಹಸ್ತಾಂತರಿಸಿದರು. ಮಾಜಿ ಸಚಿವ […]

Read More

ಪುತ್ತೂರು ಯುವವಾಹಿನಿ ಆಶ್ರಯದಲ್ಲಿ ರಕ್ತದಾನ ಶಿಬಿರ

ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್‌ ಬ್ಯಾಂಕ್ ಇದರ ಸಹಯೋಗದೊಂದಿಗೆ ದಿನಾಂಕ 22.04.2017 ನೇ ಶನಿವಾರ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್‌ ಬ್ಯಾಂಕ್ ಸಭಾಭವನದಲ್ಲಿ ರಕ್ತದಾನ ಶಿಬಿರ ಜರುಗಿತು. ಪುತ್ತೂರು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಬಿಲ್ಲವ ಸಂಘದ ಅದ್ಯಕ್ಷರಾದ ಜಯಂತ ನಡುಬೈಲು ಶಿಬಿರ ಉದ್ಘಾಟಿಸಿ ಮಾತನಾಡಿ ಮನುಷ್ಯನ ಶರೀರದಲ್ಲಿ ಹರಿಯುವ ರಕ್ತ ಒಂದೇ, ಜಾತಿ, ಮತ, ಧರ್ಮಗಳ ವ್ಯತ್ಯಾಸವಿಲ್ಲದೆ ಎಲ್ಲರೂ ಒಂದೇ ತಾಯಿಯ ಮಕ್ಕಳು ಎಂಬ ಸಂದೇಶ ಸಾರುತ್ತದೆ ಎಂದು ತಿಳಿಸಿದರು. ಯುವವಾಹಿನಿ […]

Read More

ಬಜಪೆ ಯುವವಾಹಿನಿಯಿಂದ ಬಿಸು ಪರ್ಬ ಆಚರಣೆ

ಜಾಗತೀಕರಣದ ಭರಾಟೆಯಲ್ಲಿ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯ ನಶಿಸಿಹೋಗುತ್ತಿರುವ ಈ ಕಾಲಘಟ್ಟದಲ್ಲಿ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮೂಲಕ ಯುವ ಜನಾಂಗದಲ್ಲಿ ಹೊಸ ಹುರುಪು ಮೂಡಿಸುವ ಕಾರ್ಯ ಮಾಡುತ್ತಿರುವ ಬಜಪೆ ಯುವವಾಹಿನಿಯು ಉತ್ತಮ ದಾರಿಯಲ್ಲಿ ಮುನ್ನಡೆಯುತ್ತಿದೆ ಎಂದು ರೋಟರಿ ವಲಯ 1ರ ಸಹಾಯಕ ಗವರ್ನರ್ ಜಿನರಾಜ್ ಸಾಲ್ಯಾನ್ ತಿಳಿಸಿದರು. ಅವರು ಯುವವಾಹಿನಿ(ರಿ) ಬಜಪೆ ಘಟಕದ ಆಶ್ರಯದಲ್ಲಿ ದಿನಾಂಕ 16.04.2017 ನೇ ಆದಿತ್ಯವಾರ ಬೆಳಗ್ಗೆ ಬಜಪೆ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಹೊಸ ವರ್ಷಾಚರಣೆಯ ಪ್ರಯುಕ್ತ ಜರುಗಿದ ಬಿಸು […]

Read More

ಮಂಗಳೂರು ಮಹಿಳಾ ಯುವವಾಹಿನಿಯ ಪದಗ್ರಹಣ 2017-18

ಮಹಿಳೆಯರು ಪುರುಷರಿಗಿಂತ ಮಾನಸಿಕವಾಗಿ ದೈಹಿಕವಾಗಿ ಬಲಾಡ್ಯರು ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಯಶಸ್ಸು ಗಳಿಸಲು ಸಾಧ್ಯವಾಗಿದೆ. ಮಾನವ ಧನಾತ್ಮಕ ಮತ್ತು ಋಣಾತ್ಮಕವೂ ಆದ ಚಿಂತನೆ ಮತ್ತು ಗುಣಗಳ ವಿಭಿನ್ನ ರೀತಿಯ ಸಂಕೇತ ತನ್ನಲ್ಲಿರುವ ಕೆಟ್ಟದ್ದನ್ನು ತ್ಯಜಿಸಿ ಒಳ್ಳೆಯದನ್ನು ಮೈಗೂಡಿಸಿಕೊಂಡು ಬಂದಂತೆಲ್ಲಾ ಗೌರವ ಪಡೆದುಕೊಳ್ಳುತ್ತಾರೆ. ಇಂತಹ ಗುಣವಂತರನ್ನು ಸಮಾಜ ಅರಸಿಕೊಂಡು ಬರುತ್ತದೆ, ಆದ್ದರಿಂದ ಮನಸ್ಸು ಮನಸ್ಸುಗಳ ಮಧ್ಯೆ ಸೇತುವೆ ನಿರ್ಮಾಣದ ಕಾರ್ಯ ನಾವು ಮಾಡಬೇಕಾಗಿದೆ ಎಂದು ಬೆಳ್ತಂಗಡಿ DKRDS ಯೋಜನಾಧಿಕಾರಿ ಶೈಲು ಬಿರ್ವ ಅಗತ್ತಾಡಿ ಅಭಿಪ್ರಾಯಪಟ್ಟರು. ಅವರು 16.04.2017 […]

Read More

ಹಳೆಯಂಗಡಿ ಯುವವಾಹಿನಿಯ 2017-18 ನೇ ಸಾಲಿನ ಪದಗ್ರಹಣ ಸಮಾರಂಭ

ವಿದ್ಯೆ ಉದ್ಯೋಗ ಸಂಪರ್ಕ ಎಂಬ ಮೂರು ಮುಖ್ಯ ಉದ್ದೇಶಗಳೊಂದಿಗೆ ಹಳೆಯಂಗಡಿ ಯುವವಾಹಿನಿಯ ಸಮಾಜಮುಖಿ ಕಾರ್ಯ ಶ್ಲಾಘನೀಯವಾದುದು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ ತಿಳಿಸಿದರು. ಅವರು ದಿನಾಂಕ 16.04.2017 ನೇ ಆದಿತ್ಯವಾರ ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಜರುಗಿದ ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2017-18 ನೇ ಸಾಲಿನ ನೂತನ ಪದಾದಿಕಾರಿಗಳ ಪದಪ್ರಧಾನ ನೆರವೇರಿಸಿ ಮಾತನಾಡಿದರು. ಕಟೀಲು ಮೇಳದ ಸುಪ್ರಸಿದ್ಧ ಯಕ್ಷಗಾನ ಕಲಾವಿದ ರಾಮಚಂದ್ರ ಮುಕ್ಕ ಇವರು ಯಕ್ಷಗಾನ ತರಬೇತಿ ತರಗತಿಯನ್ನು ಉದ್ಘಾಟಿಸಿ, ಜಿಲ್ಲೆಯ […]

Read More

ಸಂಪಾದಕರ ಮಾತು – ಗಂಗಾಧರ ಪೂಜಾರಿ

ಪ್ರೀತಿಯ ವಾಚಕರೇ, ಸಮಯ ಸಂದರ್ಭಗಳು ಒಂದೇ ರೀತಿ ಇರುವುದಿಲ್ಲ. ಬದಲಾಗುತ್ತಿರುವ ಈ ಕಾಲದಲ್ಲಿ ಅದೆಷ್ಟೋ ಬಾರಿ ನಾವು ಮಾಡುವ ಕಾರ್ಯದಲ್ಲಿ ನಮಗೆ ವಿರುದ್ಧವಾಗಿ ನಡೆಯಬಹುದು. ಅಂತಹ ಪರಿಸ್ಥಿತಿ ಬಂದಾಗ ದುಃಖಿಸುತ್ತಾ ಇರುವ ಬದಲು, ಎದುರಾದ ಪರಿಸ್ಥಿತಿಯನ್ನು ತನ್ನ ಕಡೆ ಪರಿವರ್ತನೆ ಮಾಡಿಸಿಕೊಳ್ಳುವವನೆ ನಿಜವಾದ ಜಾಣ. ಎಷ್ಟೇ ಗಂಭೀರವಾದ ಸೋಲನ್ನು ಗೆಲುವಾಗಿ ದಕ್ಕಿಸಿಕೊಂಡಿರುವ ಅಗ್ರಗಣ್ಯರು ಈ ಪ್ರಪಂಚದಲ್ಲಿ ತುಂಬಾ ಜನ ಇದ್ದಾರೆ. ಅಂತಹವರನ್ನು ಅನುಕರಿಸಿಕೊಂಡು ತನ್ನ ಯಾವುದೇ ಪ್ರತಿಕೂಲ ಪರಿಸ್ಥಿತಿಗಳನ್ನು ಸಕಾರಾತ್ಮಕವಾಗಿ ಅರ್ಥಮಾಡಿಕೊಂಡು ಮನಸ್ಸಿನ ಮೇಲೆ ಒತ್ತಡ ಹಾಕಿಕೊಳ್ಳದೆ, […]

Read More

ವಿಶುಕುಮಾರ್… ಹೀಗೊಂದು ನೆನಪು

ಮದರಾಸಿನ ’ಚಂದಮಾಮ’ ಪಬ್ಲಿಕೇಶನ್‌ರವರು ಕನ್ನಡದಲ್ಲಿ ’ವಿಜಯಚಿತ್ರ’ ಸಿನೀಮ ಮಾಸಿಕ ಮತ್ತು ವನಿತಾ ಮಹಿಳಾ ಪತ್ರಿಕೆಗಳನ್ನು ಪ್ರಕಟಿಸುತ್ತಿದ್ದರು. ರವಿರಾಜ ಅಜ್ರಿಯವರು 1978 ರಲ್ಲಿ ಈ ಪತ್ರಿಕೆಗಳಿಗೆ ಕೆಲಸಕ್ಕೆ ಸೇರಿ 1983 ರ ತನಕ ಅಲ್ಲಿ ಸೇವೆ ಸಲ್ಲಿಸಿದರು. 1983 ರಲ್ಲಿ ಖ್ಯಾತ ಪತ್ರಕರ್ತ ದಿ| ಎಸ್ ವಿಜಯಶೀಲ ರಾವ್ ಅವರ ’ಮುಂಜಾನೆ’ ಕನ್ನಡ ದಿನ ಪತ್ರಿಕೆಗೆ ಸೇರಿದರು. ಇದು ಸಿನೀಮ ಪತ್ರಿಕೆಯಾಗಿದ್ದು ಇಲ್ಲಿ ಸುಮಾರು ಮೂರು ವರ್ಷ ಕೆಲಸ ನಿರ್ವಹಿಸಿದರು. ಚಂದಮಾಮ ಪಬ್ಲಿಕೇಶನ್‌ನ ಮಾಲಕ ವಿಶ್ವನಾಥ ರೆಡ್ಡಿಯವರು ’ವಿಜಯಚಿತ್ರ’ ಪತ್ರಿಕೆಯ ಕಚೇರಿಯನ್ನು ಬೆಂಗಳೂರಿನ […]

Read More

ಅಧ್ಯಕ್ಷರ ಮಾತು – ಪದ್ಮನಾಭ ಮರೋಳಿ

ಕಲಿಯುತ್ತಿರುವ ಮಕ್ಕಳೆಲ್ಲರೂ ವಾರ್ಷಿಕ ಪರೀಕ್ಷೆಗಳನ್ನು ಎದುರಿಸುತ್ತಿರುವಂತಹ ಸಮಯದಲ್ಲಿ ನಾವಿದ್ದೇವೆ. ಇಂತಹ ಸಮಯದಲ್ಲಿ ಹೆತ್ತವರ ಪಾತ್ರ ಬಹಳ ಮುಖ್ಯವಾದುದು. ನಾವು ಮಕ್ಕಳಿಗೆ ಓದು ಓದು ಎನ್ನುವುದನ್ನು ಬಿಟ್ಟರೆ ಬೇರೇನ್ನನ್ನೂ ಮಾಡುವುದಿಲ್ಲ. ಓದುವ ಮಕ್ಕಳಿರುವ ಮನೆಯವರು ಕೆಲವು ಶಿಷ್ಠಾಚಾರಗಳನ್ನು ಪಾಲಿಸಬೇಕಾದ ಅನಿವಾರ್ಯತೆ ಇದೆ. * ಮಕ್ಕಳಿಗೆ ಓದಲು ಶಾಂತವಾದ ಪರಿಸರವನ್ನು ಒದಗಿಸಬೇಕು. * ಮಕ್ಕಳು ಓದುವ ಸಮಯದಲ್ಲಿ ಆದಷ್ಟು ಟಿ.ವಿ. ಬಂದ್ ಮಾಡಿದರೆ ಒಳ್ಳೆಯದು. * ಮಕ್ಕಳು ಓದುತ್ತಿರುವಾಗ ನಾವು ಕೂಡಾ ಯಾವುದಾದರು ಪುಸ್ತಕ ಅಥವಾ ಪೇಪರ್ ಹಿಡಿದುಕೊಂಡು ಅವರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ : 2026ನೇ ಅಗಸ್ಟ್16 ಬೆಳಗ್ಗೆ ಗಂಟೆ 09.30 ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕದ ನಿರೆಲ್‌ಡ್

ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!