18-04-1999, 10:20 AM
ಶ್ರೀಯುತರ ಅಧ್ಯಕ್ಷ ಅವಧಿಯಲ್ಲಿ ಕಾಸರಗೋಡಿನ ಚಿಪ್ಪಾರು ಘಟಕದಿಂದ ಶೀರೂರಿನ ಘಟಕದವರೆಗೆ ಘಟಕ ಭೇಟಿಯನ್ನು ಮಾಡಿದ ಸಾಧನೆ ಅವಿಸ್ಮರಣೀಯ. ಇವರ ಅಧಿಕಾರ ಅವಧಿಯಲ್ಲಿ ವಿದ್ಯಾನಿಧಿಯಿಂದ ಬಡ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಹಾಯ ನೀಡಲಾಗಿತ್ತು. ಪುತ್ತೂರಿನ ಓರ್ವ ವಿದ್ಯಾರ್ಥಿ ಶ್ರೀ ಪ್ರವೀಣ್ ಕುಮಾರ್ ಇವರ ಆಥ್ಲೆಟಿಕ್ಸ್ನ ತರಬೇತಿ ಸಮಯದಲ್ಲಿ ಪೌಷ್ಠಿಕ ಆಹಾರ ಅವಶ್ಯಕತೆಗೆ ಮಾಸಿಕ 150/-ರಂತೆ ಧನ ಸಹಾಯ ನೀಡಲಾಗಿತ್ತು. ಕು. ಪ್ರಮೀಳಾರ ಪಿಯುಸಿ ವ್ಯಾಸಂಗದ ಸಂಪೂರ್ಣ ಖರ್ಚಿನ ಜವಾಬ್ದಾರಿಯನ್ನು ತಮ್ಮ ಸಮಾಜದ ದಾನಿಯಾದ ಕೆ.ಎ. ಜಯಚಂದ್ರರವರಿಂದ ಭರಿಸುವಂತೆ ಸಹಕರಿಸಲಾಗಿತ್ತು. 11-10-98 ರಂದು […]
Read More
05-02-1995, 10:45 AM
ಬಿ.ಎ. ಪದವೀಧರ, ನವ ಮಂಗಳೂರು ಬಂದರು ಮಂಡಳಿಯಲ್ಲಿ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಸಹಾಯಕ ಕಾರ್ಯದರ್ಶಿಯಾಗಿ ನಿವೃತ್ತಿ ಹೊಂದಿದವರು. ಲಯನ್ಸ್, ಜೇಸೀ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ. ನವ ಮಂಗಳೂರು ಬಂದರು ಸಾರ್ವಜನಿಕ ಗಣೇಶೋತ್ಸವ ಮತ್ತು ನಾಗಬನ ಜೀರ್ಣೋದ್ಧಾರ ಸಮಿತಿಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಅಪಾರ ಅನುಭವ ಗಳಿಸಿರುವರು. 1994-95 ರ ಸಾಲಿನ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವರು. 1994 ರ ಆಗಸ್ಟ್ ತಿಂಗಳಲ್ಲಿ ಮಂಗಳೂರು ಶ್ರೀ ಕ್ಷೇತ್ರ ಕುದ್ರೋಳಿಯಿಂದ ಉಡುಪಿ ಬನ್ನಂಜೆಯವರೆಗೆ […]
Read More
24-01-1993, 11:45 AM
1992-93 ರ ಸಾಲಿನ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕನಾಥ ಆರ್. ಸನಿಲ್ರವರ ಅಧಿಕಾರವಧಿಯಲ್ಲಿ BSRB ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ತರಬೇತಿ ಶಿಬಿರ ಉಚಿತವಾಗಿ ನಡೆಸಲಾಗಿದೆ. ಸಮಾಜದ ಬಂಧುಗಳಿಗೆ ಕನ್ನಡ ಹಾಗೂ ತುಳುವಿನಲ್ಲಿ ಪ್ರಬಂಧ ಮತ್ತು ಆಶುಕವನ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕಾರ್ಕಳದಲ್ಲಿ ಯುವವಾಹಿನಿಯ ನೂತನ ಘಟಕವನ್ನು ಪ್ರಾರಂಭಿಸಲಾಯಿತು. ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗುವ ಸಲುವಾಗಿ ವಿದ್ಯಾನಿಧಿಯನ್ನು ಸ್ಥಾಪಿಸಲಾಯಿತು. ಹಳೆಯಂಗಡಿಯಲ್ಲಿ ಸನಿಲ್ಸ್ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ (ಬಳಿಕ ಸನಿಲ್ಸ್ ಇನ್ಸ್ಟಿಟ್ಯೂಟ್ ಆಫ್ ಕಂಪ್ಯೂಟರ್ ಎಜುಕೇಶನ್) ಎಂಬ ಟೈಪ್ರೈಟಿಂಗ್ ಇನ್ಸಿಟ್ಯೂಟನ್ನು […]
Read More