ಇತ್ತೀಚಿನ ಕಾರ್ಯಕ್ರಮಗಳು

ಯುವವಾಹಿನಿ ವತಿಯಿಂದ ಮೇಯರ್ ಕವಿತಾ ಸನಿಲ್ ಇವರಿಗೆ ಅಭಿನಂದನೆ

ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಜರುಗಿತು. ಮಂಗಳೂರು ಮಹಾನಗರ ಪಾಲಿಕೆಯ ಪ್ರಥಮ ಪ್ರಜೆ ಹಾಗೂ ನೂತನ ಮೇಯರ್ ಶ್ರೀಮತಿ ಕವಿತಾ ಸನಿಲ್ ಇವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮುಂಬೈ ಹೈಕೋರ್ಟು ವಕೀಲರಾದ ಶ್ರೀಮತಿ ರೋಹಿಣಿ ಸಾಲ್ಯಾನ್,ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಗೀತಾಂಜಲಿ ಸುವರ್ಣ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅದ್ಯಕ್ಷ ಎಚ್. ಎಸ್. ಸಾಯಿರಾಂ, […]

Read More

ಆಂತರ್ಯ – ಮನದೊಳಗಿನ ಮಾತು ಉದ್ಘಾಟನೆ

ಎಲ್ಲಾ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆಯ ಹಿಂದೆ ಕಲ್ಲು ಮುಳ್ಳುಗಳ ಹಾದಿಯ ಮೂಲಕ ಕಠಿಣವಾದ ಪರಿಶ್ರಮವಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳೆಯರನ್ನು ಗುರುತಿಸಿ ಗೌರವಿಸಿ ಅಭಿನಂದಿಸಿದ ಯುವವಾಹಿನಿ ಕಾರ್ಯ ಶ್ಲಾಘನೀಯ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ಮಂಗಳೂರಿನ ಪ್ರಥಮ ಪ್ರಜೆ ಶ್ರೀಮತಿ ಕವಿತಾ ಸನಿಲ್ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯ ಗ್ಲಾಸ್ ಹೌಸ್­ನಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಜರುಗಿದ […]

Read More

ಯುವ ಸಿಂಚನ : ಗಂಗಾಧರ ಪೂಜಾರಿ

ಸಂಪಾದಕರ ಮಾತು ಪ್ರೀತಿಯ ವಾಚಕರೇ, ನಮ್ಮ ಸಂಸ್ಕೃತಿಯನ್ನು ಉಳಿಸಲು ನಾವು ನಮ್ಮ ಮಕ್ಕಳಿಗೆ ಯಾವ ರೀತಿಯ ಶಿಕ್ಷಣವನ್ನು ನೀಡುತ್ತಿದ್ದೇವೆ. ಅವರು ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ನಮ್ಮ ಕರ್ತವ್ಯದ ಬಗ್ಗೆ ವಿಮರ್ಷಿಸೋಣ. ಮೌಲ್ಯಾಧಾರಿತ, ಸ್ವಾವಲಂಬನೆಯ, ಸರ್ವತೋಮುಖ ಅಭಿವೃದ್ಧಿಯ ಸಾಮಾಜಿಕ, ಪ್ರಾಕೃತಿಕ ಹಾಗೂ ಜೀವನ ಶಿಕ್ಷಣಗಳನ್ನು ಮಕ್ಕಳು ತಮ್ಮ ಪ್ರಾಥಮಿಕ ಶಿಕ್ಷಣದಲ್ಲೇ ಕಲಿಯಬೇಕು. ಮಕ್ಕಳು ವಾಸಿಸುವ ಮನೆ, ಮೇಲೆ ಹೇಳಿರುವ ಶಿಕ್ಷಣಗಳನ್ನು ಮನೆಗಳಲ್ಲಿ ನೋಡಿ, ಕಲಿಯುವ ಮನೆಯಾಗಬೇಕು. ತಾಯಿ-ತಂದೆ, ಹಿರಿಯರು ಮಕ್ಕಳಿಗೆ ಮೇಲೆ ಹೇಳಿರುವ ವಿವಿಧ ರೀತಿಯ ಶಿಕ್ಷಣದ ವಿಚಾರಗಳ […]

Read More

ಕಾರಣಿಕ ಪುರುಷರಿಂದ ಸಮಾಜಕ್ಕೆ ಪ್ರೇರಣೆ

ಜನಪದ ವೀರರು ಅಥವಾ ಸಾಂಸ್ಕೃತಿಕ ಸ್ತ್ರೀ, ಪುರುಷರನ್ನು ಕಾರಣಿಕ ಶಕ್ತಿಗಳಾಗಿ ಪರಿಭಾವಿಸಲಾಗಿರುವುದು ತುಳುವ ಸಂಸ್ಕೃತಿಯ ವೈಶಿಷ್ಟ್ಯವಾಗಿದೆ. ತಮ್ಮ ಕಾಲದ ವೀರರ ಧೈರ್ಯ ಸಾಹಸ ರೋಮಾಂಚಕ ಗಾಥೆಯನ್ನು ಅದರಿಂದ ರೋಮಾಂಚಿತರಾದ ಇಲ್ಲವೇ ಸ್ಫೂತಿ ಪಡೆದ ಜನಸಮುದಾಯ ಹಾಡುಕಟ್ಟಿ, ಕಥೆ ಪೋಣಿಸಿ, ಸಮಾಜದಲ್ಲಿ ಒಬ್ಬರಿಂದೊಬ್ಬರಿಗೆ, ತಿಳಿಸಿ ಅದು ತಲೆಮಾರಿನಿಂದ ತಲೆಮಾರಿಗೆ ಬಾಯ್ದೆರೆಯಾಗಿ ಹರಿದು ಬಂದ ಪರಂಪರೆ ನಮ್ಮ ಮುಂದಿದೆ. ಇಂತಹ ಪರಂಪರೆ ಭಾರತ ದೇಶದಲ್ಲಷ್ಟೇ ಅಲ್ಲದೆ ಮಧ್ಯ ಏಷಿಯಾ, ಚೈನಾ, ಆಫ್ರಿಕಾ, ಇಂಡೋನೇಶಿಯಾ, ಫಿನ್ಲೆಂಡ್ ಮತ್ತಿತರ ದೇಶಗಳಲ್ಲೂ ಕಂಡು ಬಂದಿದೆ. […]

Read More

ಬದಲಾಗಿದೆಯೇ ನಮ್ಮೂರು..? ಜೊತೆಯಲಿ ನಮ್ಮವರು!

ಒಂದು ತುಂಡು ಉಪ್ಪಿನಕಾಯಿ ಇದ್ದರೂ ಸಾಕು ಮೃಷ್ಟಾನ್ನ ಎದುರಿಗೆದೆಯೆನ್ನುವಷ್ಟೇ ಖುಷಿಯಿಂದ ಗಂಜಿ ಅನ್ನವನ್ನುಂಡು ತಿಂದು ತೇಗುತ್ತಿದ್ದವರು ನಮ್ಮ ನಿಮ್ಮವರ ನಡುವೆ ಹಲವರಿರಬಹುದು. ಕಣಿವೆ, ಬೆಟ್ಟ ಗುಡ್ಡ, ನದಿ ಹಳ್ಳ, ಕಾಡುಬಯಲುಗಳೋ… ಆಯಾಸ ನೋವಿನರಿವಿಲ್ಲದೆ ಬರಿಗಾಲಿನ ನಡಿಗೆಯೋಡಾಟದಲ್ಲಿ ಕಲ್ಲು ಮುಳ್ಳುಗಳ ಗೊಡವೆ ಯಾರಿಗಾದರೂ ಇದ್ದಿತ್ತೆ?…..! ಎಡೆ ಬಿಡದ ದುಡಿಮೆಯಿದ್ದರೂ ನಿತ್ಯದ ಪಾಳಿಗೆ ಸಾಕಾಗದೆ, ಹೊಟೇಲು ಗೂಡಂಗಡಿ ದಿನಸಿ ಅಂಗಡಿಗಳಲ್ಲೆಲ್ಲಾ ಸಾಲ ಮಾಡದೆ ಇರುವವರು ಆ ದಿನಗಳಲ್ಲಿ ವಿರಳವೆನ್ನಬಹುದು. ಊರಿಗೂರೇ ಬದಲಾಗಿದೆ ಕಾಲ ಮಾತ್ರವಲ್ಲ ಊರಿಗೂರೇ ಬದಲಾಗಿದೆ. ಮೊದಲೆಲ್ಲಾ ಮುಂಬಯಿಂದ […]

Read More

ಅಧ್ಯಕ್ಷರ ಮಾತು

ಆತ್ಮೀಯರೇ, ಶ್ರೀಕ್ಷೇತ್ರ ಗೆಜ್ಜೆಗಿರಿ, ದೇಯಿ ಬೈದ್ಯೆತಿ-ಕೋಟಿಚೆನ್ನಯ ಮೂಲಸ್ಥಾನ ಪುನರುತ್ಥಾನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಎಲ್ಲಾ ಬಿಲ್ಲವರು ಒಮ್ಮತದಿಂದ ಒಟ್ಟು ಸೇರಿ ನಾವೆಲ್ಲರೂ ಒಂದೇ ಛತ್ರದಡಿಯಲ್ಲಿ ಇರಲು ಒಲವುಳ್ಳರಾಗಿದ್ದೇವೆ ಎಂಬುವುದನ್ನು ತೋರಿಸಿಕೊಟ್ಟಿದ್ದೇವೆ. ಇದರಿಂದ ಎಲ್ಲಾ ಬಿಲ್ಲವ ಸಂಘಗಳ ಮುಖಂಡರುಗಳು ಒಟ್ಟು ಸೇರಿ ಚಿಂತನೆ ಮಾಡಬೇಕಾದ ಕಾಲ ಸನ್ನಿಹಿತವಾಗಿದೆ. ಹಿಂದೊಮ್ಮೆ ನಾವು ಈ ಉಭಯ ಜಿಲ್ಲೆಗಳಲ್ಲಿ ಪಡೆದಿದ್ದ ಪ್ರಾಬಲ್ಯವನ್ನು ಮರುಸ್ಥಾಪಿಸಬೇಕಾದ ಮಹತ್ತರವಾದ ಕೆಲಸ ನಮ್ಮೆಲ್ಲರ ಮುಂದಿದೆ. ಈ ದಿಸೆಯಲ್ಲಿ ನಾವೆಲ್ಲರೂ ಚಿಂತಿಸಿ ಸೂಕ್ತ ನಿರ್ಧಾರಗಳನ್ನು ತಳೆದು ನಮ್ಮ ಸಮಾಜದ ಅಭಿವೃದ್ಧಿಗೆ ಪೂರಕವಾದ […]

Read More

ಮೂಲ್ಕಿ ಯುವವಾಹಿನಿಯ ಹೊರೆಕಾಣಿಕೆ ಸೇವೆ

ಕಾಂತಬಾರೆ ಬೂದಬಾರೆ ಜನ್ಮಕ್ಷೇತ್ರ ಕೊಲ್ಲೂರು ಇದರ ಚತುಷ್ಪವಿತ್ರ  ನಾಗಬ್ರಹ್ಮಮಂಡಲ ಸೇವೆಯ ಪ್ರಯುಕ್ತ  ಒಂಬತ್ತು ಮಾಗಣೆಯ ಭಕ್ತಾಧಿಗಳಿಂದ ದಿನಾಂಕ 15-03-2017ರಂದು ಹೊರೆಕಾಣಿಕೆ ಸಮರ್ಪಿಸಲಾಯಿತು. ಈ ಸಂಧರ್ಭದಲ್ಲಿ ಮೂಲ್ಕಿ ಯುವವಾಹಿನಿಯ ವತಿಯಿಂದ ಹೊರೆಕಾಣಿಕೆಯನ್ನು ಸಮರ್ಪಿಸಿ ಶ್ರೀ ಕ್ಷೇತ್ರದಲ್ಲಿ ಮೂಲ್ಕಿ ಯುವವಾಹಿನಿ ಸದಸ್ಯರು   ಸ್ವಯಂಸೇವಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

Read More

ರವೀಶ್ ಕುಮಾರ್ ನೇತೃತ್ವದ 17 ಸದಸ್ಯರ ಮಂಗಳೂರು ಯುವವಾಹಿನಿ ತಂಡ ಅಧಿಕಾರ ಸ್ವೀಕಾರ

ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ಮೆ.ಐಡಿಯಲ್ ಎರೇಂಜರ್ಸ್ ವಠಾರದಲ್ಲಿ ಜರುಗಿದ ಯುವವಾಹಿನಿ(ರಿ) ಮಂಗಳೂರು ಘಟಕದ 2017-18ನೇ ಪದಗ್ರಹಣ ಸಮಾರಂಭ ಜರುಗಿತು. 2017-18 ನೇ ಸಾಲಿನ ನೂತನ ಪದಾಧಿಕಾರಿಗಳ ವಿವರ ಅದ್ಯಕ್ಷ : ರವೀಶ್ ಕುಮಾರ್ ಉಪಾಧ್ಯಕ್ಷ : ನವೀನ್ ಚಂದ್ರ ಕಾರ್ಯದರ್ಶಿ : ಪ್ರವೀಣ್ ಕುಮಾರ್ ಕಿರೋಡಿ ಜತೆ ಕಾರ್ಯದರ್ಶಿ : ಯತೀಶ್ ಬಳಂಜ ಕೋಶಾಧಿಕಾರಿ : ಸದಾನಂದ ಕುಳಾಯಿ ಸಂಘಟನಾ ಕಾರ್ಯದರ್ಶಿ : ಜೈ ಕುಮಾರ್ ನಿರ್ದೇಶಕರು ನಾರಾಯಣಗುರು ತತ್ವ ಪ್ರಚಾರ : […]

Read More

ಮಂಗಳೂರು ಯುವವಾಹಿನಿ : ಸಾಧಕರಿಗೆ ಸನ್ಮಾನ

ಮಂಗಳೂರು ಯುವವಾಹಿನಿಯ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಮೆ. ಐಡಿಯಲ್ ಎರೇಂಜರ್ಸ್ ವಠಾರದಲ್ಲಿ ಜರುಗಿತು. ಈ ಶುಭ ಸಂದರ್ಭದಲ್ಲಿ ಮಂಗಳೂರು ಯುವವಾಹಿನಿ ಸದಸ್ಯರಾದ ಸಮಾಜ ಸೇವಕ ಸಂಘಟಕರು ದೇವೇಂದ್ರ ಕೋಟ್ಯಾನ್, ಉದ್ಯಮಿ ಸಂಘಟಕರು ಸಾಧಕ ಉಮಾನಾಥ, ನಿಸ್ವಾರ್ಥ ಸೇವಕ ಶ್ರೀಕಾಂತ್ ಇವರುಗಳ ಸಾಧನೆಯನ್ನು ಗುರುತಿಸಿ ಗೌರವಿಸಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಬಿಲ್ಲವರ ಸಹಾಯಕ ಸಂಘದ ಗೌರವ ಅದ್ಯಕ್ಷ ಪ್ರಭಾಕರ್ ಎಸ್. ಪೂಜಾರಿ, […]

Read More

ಮಂಗಳೂರು ಯುವವಾಹಿನಿ : ಪದಗ್ರಹಣ 2017-18

ಕಣ್ಣು ಸರಿಯಾಗಿದ್ದಲ್ಲಿ ಜಗತ್ತನ್ನು ಪ್ರೀತಿಸಬಹುದು, ಆದರೆ ನಾಲಿಗೆ ಸರಿಯಾಗಿದ್ದಲ್ಲಿ ಜಗತ್ತು ನಮ್ಮನ್ನು ಪ್ರೀತಿಸುತ್ತದೆ. ದುಶ್ಚಟಗಳನ್ನು ತೊರೆದು ಜ್ಞಾನದ ಮಾರ್ಗದಲ್ಲಿ ನಡೆದಾಗ ಮನೆ ಮನೆಯಲ್ಲೂ ದೇವಸ್ಥಾನದ ನಿರ್ಮಾಣ ಸಾಧ್ಯ. ಅವಮಾನಗಳ ಹಿಂದಿರುವ ನೋವಿನಿಂದ ನಮ್ಮ ಹಿರಿಯರು ಸಂಘಟನೆಗಳ ರಚನೆ ಮಾಡಿದರು. ಮನಸ್ಸು ಮನಸ್ಸುಗಳನ್ನು ಬೆಸೆಯುವ ಆದರ್ಶ, ಸಂವಿಧಾನ ಬದ್ದ ಸಂಘಟನೆ ಯುವವಾಹಿನಿ ಎಂದು ಮಂಗಳೂರು ಸಂತ ಎಲೋಶಿಯಸ್ ಕಾಲೇಜ್ ಉಪನ್ಯಾಸಕ ಡಾ. ಗಣೇಶ್ ಅಮೀನ್ ಸಂಕಮಾರ್ ತಿಳಿಸಿದರು. ಅವರು ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ಮೆ.ಐಡಿಯಲ್ ಎರೇಂಜರ್ಸ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!