ಇತ್ತೀಚಿನ ಕಾರ್ಯಕ್ರಮಗಳು

ಮಂಗಳೂರು ಮಹಿಳಾ ಘಟಕದ ಶಿವಗಿರಿ ಯಾತ್ರೆ

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು ದಿನಾಂಕ 04.02.2017 ರಂದು ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮಸ್ಥಾನ ಕೇರಳದ ಶಿವಗಿರಿಗೆ  ಪ್ರವಾಸ ಕೈಗೊಂಡರು.

Read More

ಹೃದಯಂಗಮ ಸನ್ನಿವೇಶ – ಶಿವಗಿರಿ ತೀರ್ಥಾಟನೆ

“ಓಂ ನಮೋಃ ನಾರಾಯಣ ಪರಮ ಗುರುವೇ ನಮಃ”. ಬ್ರಹ್ಮಶ್ರೀ ನಾರಾಯಣ ಗುರುಗಳ ಈ ನಾಮ ಸ್ಮರಣೆ ಮುಗಿಲು ಮುಟ್ಟುವಂತಿದ್ದುದು ಶಿವಗಿರಿಯ ಮಹಾತೀರ್ಥಾಟನಾ ಉತ್ಸವದಲ್ಲಿ. ಬ್ರಹ್ಮಶ್ರೀ ನಾರಾಯಣ ಗುರುಗಳ ಮಹಾಸಮಾಧಿಯ ಪವಿತ್ರ ಭೂಮಿ ವರ್ಕಳದ ಶಿವಗಿರಿಯ ವೈಭವದ ದೃಶ್ಯ ಕಣ್ಮನ ಸೆಳೆಯುವುದು, ಭಕ್ತಸಾಗರವೇ ಹರಿದುಬರುವ ಶಿವಗಿರಿಯ ತಿರ್ಥಾಟನಾ ಸಂದರ್ಭದಲ್ಲಿ. ಇದಕ್ಕೆ ಸಾಕ್ಷೀಭೂತವಾಗಿದ್ದು ಇತ್ತೀಚೆಗೆ ನಡೆದ 84 ನೇ ಶಿವಗಿರಿ ತಿರ್ಥಾಟನೆಯಲ್ಲಿ ಪಾಲ್ಗೊಂಡ ಮಂಗಳೂರು ಯುವವಾಹಿನಿ ಘಟಕದ ತಂಡ. ಹೌದು, ಸೇವಾ ಮನೋಭಾವನೆಯ ಮನಸಂಕಲ್ಪದಿಂದ ಹಾಗೂ ಶಿವಗಿರಿಯ ತೀರ್ಥಾಟನಾ ಉತ್ಸವವನ್ನು ನೋಡಿ […]

Read More

ಶಿವಗಿರಿ ಯಾತ್ರೆ

ಯುವವಾಹಿನಿ (ರಿ.) ಪಡುಬಿದ್ರಿ ಮತ್ತು ಯುವವಾಹಿನಿ (ರಿ.) ಅಡ್ವೆ ಘಟಕದ ಕುಟುಂಬ ಸದಸ್ಯರು ಜಂಟಿಯಾಗಿ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮಸ್ಥಳ ಶಿವಗಿರಿಗೆ ಭೇಟಿ ನೀಡಿದರು.

Read More

ಅಧ್ಯಕ್ಷರ ಮಾತು

ಆತ್ಮೀಯರೇ, ಸ್ವರ್ಗದ ಸುಖವನ್ನಾಗಲೀ ನರಕದ ಯಾತನೆಯನ್ನಾಗಲೀ ಅನುಭವಿಸಿ ಬಂದು ಹೇಳಿದವರಿಲ್ಲ, ಕೆಲವು ವಿಚಾರವಾದಿಗಳು ಸ್ವರ್ಗ ಮತ್ತು ನರಕಗಳು ನಾವು ಬದುಕಿರುವಾಗಲೇ ಸಿಗುತ್ತದೆ ಎನ್ನುತ್ತಾರೆ. ಆದರೂ ಪ್ರಪಂಚದ ಎಲ್ಲಾ ಧರ್ಮೀಯರು ಅವರವರ ಭಾಷೆ ಸಂಸ್ಕೃತಿಗಳಿಗೆ ಅನುಗುಣವಾಗಿ ನಂಬಿಕೊಂಡು ಬಂದಿದ್ದಾರೆ. ಏನೇ ಆಗಲಿ ಇದೆಲ್ಲವನ್ನು ಮೌನವಾಗಿ ಅನುಕರಿಸುವ ನಾವುಗಳು ಜಗತ್ತಿನಲ್ಲಿಯೇ ಶ್ರೇಷ್ಠ ಸಂದೇಶಗಳನ್ನು ನೀಡಿದ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಗಳನ್ನು ಆದಷ್ಟು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದೇವೆ ಎನ್ನುವುದನ್ನು ಆತ್ಮಾವಲೋಕನ ಮಾಡಬೇಕಾಗಿದೆ. ಗುರುಗಳು ಅದೆಷ್ಟು ಉತ್ತಮವಾದ ಭೋದನೆ ಹಾಗೂ ತತ್ವಾದರ್ಶಗಳನ್ನು ನೀಡಿದ್ದಾರೆ. ಎಲ್ಲವನ್ನು […]

Read More

ಆತ್ವವಿಶ್ವಾಸ, ಇಂದ್ರಿಯ ನಿಗ್ರಹ ಶಕ್ತಿ ಮತ್ತು ನಮ್ಮ ಸಮಾಜ

ಈ ಜಗತ್ತೆಂಬ ಮಾಯಲೋಕವು ಶತಕೋಟಿ ಜೀವರಾಶಿಗಳಿಂದ ತುಂಬಿ ತುಳುಕುತ್ತಿದ್ದರೂ, ಈ ಎಲ್ಲಾ ಜೀವರಾಶಿಗಳಿಗಿಂತ ಶ್ರೇಷ್ಠವಾದ ಹಾಗೂ ಭಿನ್ನವಾದ ಜೀವಿ ಮಾನವ. ಆಲೋಚನಾ ಶಕ್ತಿ ಮನುಷ್ಯ ಪ್ರಾಣಿಗೆ ಬಿಟ್ಟು ಇನ್ನಾವುದೇ ಪ್ರಾಣಿಗಳಿಗಿಲ್ಲ ಎಂಬ ಸತ್ಯ ನಮಗೆಲ್ಲಾ ತಿಳಿದಿದೆ. ಉಳಿದ ಪ್ರಾಣಿಗಳಿಗಿಂತ ತನ್ನ ಭಾವನೆಗಳನ್ನು ಇತರರೊಂದಿಗೆ ಭಾಷೆಯ ಮೂಲಕ, ಮಾತಿನಿಂದ ಸಂವಹನ ರೂಪದಲ್ಲಿ ವ್ಯಕ್ತಪಡಿಸುವ ವಿಶೇಷ ಸಾಮರ್ಥ್ಯ ಗಳಿಸಿದಂತ ಮಾನವ ವರ್ಗದಲ್ಲಿ ಜನಿಸಿದ ನಾವೇ ಧನ್ಯರು. ಪರಶುರಾಮ ಸೃಷ್ಠಿಯ ಈ ತುಳುನಾಡಿನಲ್ಲಿ ಬೈದ್ಯ ಅಂದರೆ ವೈದ್ಯ, ಬಿರುವ ಅಂದರೆ ವೀರ […]

Read More

ಮೂಲ್ಕಿ: ಪರೀಕ್ಷಾ ಪೂರ್ವ ತರಬೇತಿ ಶಿಬಿರ

ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ದಿನಾಂಕ 31-01-2017 ರಂದು ಶ್ರೀ ನಾರಾಯಣಗುರು ಸಂಯುಕ್ತ ಪದವಿಪೂರ್ವ ಕಾಲೇಜಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ನಡೆಸಲಾಯಿತು. ಶಾಲಾ ಮಂಡಳಿಯ ಕಾರ್ಯದರ್ಶಿ ಬಾಲಚಂದ್ರ ಸನಿಲ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಜೇಸಿಐ. ರಾಷ್ಟ್ರೀಯ ತರಬೇತುದಾರರಾದ ಜೇಸಿ. ರಾಜೇಂದ್ರ ಭಟ್ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸುಮಾರು 3 ಗಂಟೆಗಳ ಕಾಲ ತರಬೇತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತಾಧಿಕಾರಿ ಅಡ್ವೆ ರವೀಂದ್ರ ಪೂಜಾರಿ, ಪ್ರಾಂಶುಪಾಲರಾದ ಯತೀಶ್ ಅಮೀನ್, ಘಟಕದ […]

Read More

ಪುತ್ತೂರು: ನರಿಮೊಗರು ಗ್ರಾಮ ಸಮಿತಿ ಉದ್ಘಾಟನಾ ಸಮಾರಂಭ ಮತ್ತು ಉಚಿತ ವೈದ್ಯಕೀಯ ಶಿಬಿರ

ದಿನಾಂಕ 22-1-2017 ರಂದು ಯುವವಾಹಿನಿ (ರಿ) ಪುತ್ತೂರು ಘಟಕದ ನೇತೃತ್ವದಲ್ಲಿ ಕೇಂದ್ರ ಸಮಿತಿಯ ಸಹಯೋಗದಲ್ಲಿ ನರಿಮೊಗರು ಗ್ರಾಮ ಸಮಿತಿ ಉದ್ಘಾಟನಾ ಸಮಾರಂಭ ಮತ್ತು ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲುರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಪುತ್ತೂರಿನ ಯುವಕರನ್ನೊಳಗೊಂಡ ಯುವವಾಹಿನಿಯು ಇಂದು ಮನೆ ಮಾತಾಗಿದ್ದರೆ ಅದು ಯುವವಾಹಿನಿ ಸದಸ್ಯರಲ್ಲಿನ ಸ್ವಾರ್ಥ ರಹಿತ ಸ್ವಾಭಿಮಾನಿ ಬದುಕಿನಿಂದ ಮಾತ್ರ ಸಾಧ್ಯವಾಗಿದೆ ಎಂದು ತಿಳಿಸಿದರು. ವೇದಿಕೆಯಲ್ಲಿ ನರಿಮೊಗರು ಗ್ರಾಮ […]

Read More

ಸುರತ್ಕಲ್ ಘಟಕದ ಪದಗ್ರಹಣ ಸಾರಥ್ಯ-2017

ದಿನಾಂಕ 22-01-2017 ರಂದು ಯುವವಾಹಿನಿ ಸುರತ್ಕಲ್ ಘಟಕದ ಪದಗ್ರಹಣ ಸಾರಥ್ಯ-2017 ಕಾರ್ಯಕ್ರಮವು ಸುರತ್ಕಲ್‌ನ ಲಯನ್ಸ್‌ಕ್ಲಬ್ ಸಭಾಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಪ್ರಧಾನ ಕಾರ್ಯದರ್ಶಿ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರರಾದ ಬಿ. ತಮ್ಮಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಎಸ್.ಎಸ್. ಪೂಜಾರಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಶ್ರೀಮತಿ ಪ್ರತಿಭಾ ಕುಳಾಯಿ ಮತ್ತು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಮೊದಲಾದವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷ ಭಾಸ್ಕರ […]

Read More

ಮೂಲ್ಕಿ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಶ್ರೀ ನಾರಾಯಣಗುರು ಸೇವಾದಳ, (ಬಿಲ್ಲವ ಸಮಾಜ ಸೇವಾ ಸಂಘ ಮೂಲ್ಕಿ, ಯುವವಾಹಿನಿ (ರಿ) ಮೂಲ್ಕಿ ಘಟಕದ ಹಾಗೂ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ದಿನಾಂಕ 22-01-2017 ರಂದು ಮೂಲ್ಕಿ ಬಿಲ್ಲವ ಸಂಘದಲ್ಲಿ ಜರಗಿರುತ್ತದೆ. ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇದರ ಖ್ಯಾತ ಹೃದಯರೋಗ ತಜ್ಞ ಡಾ| ಸುಬ್ರಹ್ಮಣ್ಯಮ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಗೋಪಿನಾಥ ಪಡಂಗ ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ್ದರು. […]

Read More

ಮಂಗಳೂರು ಮಹಿಳಾ ಯುವವಾಹಿನಿಯ ಮಾಹಿತಿ ಕಾರ್ಯಾಗಾರ

ದಿನಾಂಕ 21-01-2017 ರಂದು ಮಂಗಳೂರು ಮಹಿಳಾ ಘಟಕದ ವತಿಯಿಂದ ಕೆಪಿಟಿ ಬಳಿಯ ಸರಕಾರಿ ಮಹಿಳಾ ತರಬೇತಿ ಕೇಂದ್ರದಲ್ಲಿ ಗೃಹರಕ್ಷಕ ದಳ ಮತ್ತು ಅಗ್ನಿಶಾಮಕ ಇವರಿಂದ ಅಣುಕು ಕಾರ್ಯಾಚರಣೆ ನಡೆಸಲಾಯಿತು. ಈ ಕಾರ್ಯಾಚರಣೆಯಲ್ಲಿ ಡಿಸ್ಟ್ರಿಕ್ಟ್ ಫೈಯರ್ ಆಫೀಸರ್ ಪರಮೇಶ್ವರ್, ಡೆಪ್ಯುಟಿ ಕಮಾಡೆಂಟ್ ಆಫ್ ಹೋಂಗಾರ್ಡ್ ಹಾಗೂ ಐ.ಟಿ.ಐ.ನ ಪ್ರೊಫೆಸರ್ ಎ. ಬಾಲಕೃಷ್ಣ ಇವರುಗಳು ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಉಪಾಧ್ಯಕ್ಷ ಯಶವಂತ ಪೂಜಾರಿ, ಘಟಕದ ಸಲಹೆಗಾರ ಅಶೋಕ್‌ಕುಮಾರ್, ಮಂಗಳೂರು ಘಟಕದ ಮಾಜಿ ಅಧ್ಯಕ್ಷ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!