ಇತ್ತೀಚಿನ ಕಾರ್ಯಕ್ರಮಗಳು

ಉಡುಪಿ: ಸೌಂದರ್ಯವೃದ್ಧಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಗಾರ

ದಿನಾಂಕ 22-01-2017 ರಂದು ಯುವವಾಹಿನಿ(ರಿ) ಉಡುಪಿ ಘಟಕದ ನೇತೃತ್ವದಲ್ಲಿ ಮಹಿಳಾ ಸೌಂದರ್ಯವೃದ್ಧಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ ಎಂಬ ಮಹಿಳಾ ಕಾರ್ಯಕ್ರಮ ಶ್ರೀ ಜಗನ್ನಾಥ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಮಲ್ಪೆ ಬಿಲ್ಲವ ಮಹಿಳಾ ಸಂಘ ಅಧ್ಯಕ್ಷೆ ಶ್ರೀಮತಿ ವಿಜಯ ಬಂಗೇರರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ಸೌಂದರ್ಯ ತಜ್ಞೆಯಾದ ವೇದಾವತಿ ಸುವರ್ಣರವರು ಈ ಕಾರ್ಯಾಗಾರವನ್ನು ನಡೆಸಿಕೊಟ್ಟು ಉತ್ತಮ ಮಾಹಿತಿಯನ್ನು ನೀಡಿದರು. ಯುವವಾಹಿನಿ (ರಿ) ಮಂಗಳೂರು ಕೇಂದ್ರ ಸಮಿತಿಯ ಮಹಿಳಾ ಸಂಚಾಲಕಿ ಶ್ರೀಮತಿ ಗುಣವತಿ ರಮೇಶ್ ಅತಿಥಿಗಳಾಗಿ ಭಾಗವಹಿಸಿದರು. ಯುವವಾಹಿನಿ(ರಿ) ಉಡುಪಿ […]

Read More

ಯು.ಪಿಎಸ್.ಸಿ, ಕೆ.ಪಿ.ಎಸ್.ಸಿ. ಮತ್ತು ಐ.ಬಿ.ಪಿ.ಎಸ್ – ಉಚಿತ ಪ್ರೇರಣಾ ಶಿಬಿರ-2016-17

ದಿನಾಂಕ 22-1-2017 ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ(ನಿ) ಮಂಗಳೂರು, ದಿ ಕ್ರಿಶ್ಚಿಯನ್ ಎಜ್ಯುಕೇಶನ್ ಸೊಸೈಟಿ (ರಿ) ಮಂಗಳೂರು, ರೋಟರಿ ಕ್ಲಬ್ ಮಂಗಳೂರು, ಯುವವಾಹಿನಿ (ರಿ) ಮಂಗಳೂರು ಘಟಕ ಮತ್ತು I.A.S. ಮಂಗಳೂರು ಸಂಸ್ಥೆಗಳ ಸಹಯೋಗದೊಂದಿಗೆ UPSC/KAS/IBPS ಉಚಿತ ಪ್ರೇರಣಾ ಶಿಬಿರವು ಜರಗಿತು. ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಎಸ್‌ಪಿ ಭೂಷಣ್ ಗುಲಾಬ್ ರಾವ್ ಬೋರಸೆ IPS ಉದ್ಘಾಟಿಸಿ, ಮಾತನಾಡುತ್ತಾ ಸೇವಾ ಮನೋಭಾವ ಇರುವವರು ಕಠಿಣ ಅಭ್ಯಾಸ, ತರಬೇತು ಪಡೆದು ಜನ ಸೇವೆ ಮಾಡುವ ಮನೋಭಾವವಿದ್ದರೆ ಮಾತ್ರ ಐ.ಎ.ಎಸ್, ಕೆ.ಎ.ಎಸ್‌ನಂತಹ […]

Read More

ಕೂಳೂರು ಘಟಕದಿಂದ ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 14-1-2017 ರಂದು ಕೂಳೂರಿನ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಸುವರ್ಣ ಆರೋಗ್ಯಕ್ಕೆ ಸುರಕ್ಷಾ ಯೋಜನೆಗಳು ಎಂಬ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸಂಯೋಜಕರಾದ ಜಗನ್ನಾಥ್ ಶಿರ್ಲಾಲ್‌ರವರು ಆರೋಗ್ಯ ಸುರಕ್ಷಾ ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಸರಕಾರದಿಂದ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಸುರಕ್ಷಾ ಯೋಜನೆಗಳಿದ್ದು, ಆಯೋಜನೆಗಳ ಬಗ್ಗೆ ಸರಿಯಾದ ಮಾಹಿತಿಯನ್ನು ಜನರು […]

Read More

ಉಡುಪಿ : ’ತಲೆಗೊಂದು ಸೂರು’ ಕಾರ್ಯಕ್ರಮದ ಶಿಲಾನ್ಯಾಸ

ಯುವವಾಹಿನಿ (ರಿ) ಉಡುಪಿ ಘಟಕದ ನೇತೃತ್ವದಲ್ಲಿ ತಾ. 14-01-2017 ರಂದು ಉದ್ಯಾವರದ ಈಂದ್ ಬೈಲಿನ ಶ್ರೀಮತಿ ಗಿರಿಜಾ ಇವರಿಗೆ, ಯುವವಾಹಿನಿಯ ಮಹತ್ವಾಕಾಂಕ್ಷೆಯ ತಲೆಗೊಂದು ಸೂರು ಕಾರ್ಯಕ್ರಮದ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ಜರುಗಿತು. ಮಾನ್ಯ ಶಾಸಕರುಗಳಾದ ವಿನಯ ಕುಮಾರ್ ಸೊರಕೆ ಹಾಗೂ ಕೋಟ ಶ್ರೀನಿವಾಸ್ ಪೂಜಾರಿಯವರು ಶಿಲಾನ್ಯಾಸದ ಕಾರ್ಯವನ್ನು ನೆರವೇರಿಸಿದರು. ಯುವವಾಹಿನಿಯ ಸದಸ್ಯರು, ಊರ ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಸಾಂಗವಾಗಿ ನೆರೆವೇರಿತು. ಸುಮಾರು 3 ರಿಂದ 5 ಲಕ್ಷದ ಖರ್ಚಿನಲ್ಲಿ ಈ ಮನೆಯ ನಿರ್ಮಾಣ ಮಾಡಲಾಗುವುದು ಎಂದು ಉಡುಪಿ ಘಟಕದ ಅಧ್ಯಕ್ಷ […]

Read More

ವಿದ್ಯಾನಿಧಿ ಟ್ರಸ್ಟ್ ವತಿಯಿಂದ ’ಪ್ರೇರಣ-2017’

ದಿನಾಂಕ 8-01-2017 ನೇ ರವಿವಾರದಂದು ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ) ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ವೃತ್ತಿ ಮಾರ್ಗದರ್ಶನ ಹಾಗೂ ಯುವಜನತೆಗೆ ಮತ್ತು ಪೋಷಕರಿಗೆ ಉಪಯೋಗವಾಗುವ ಕಾರ್ಯಕ್ರಮವಾಗಿ ಪ್ರೇರಣ-2017’ ಎನ್ನುವ ಕಾರ್ಯಕ್ರಮವು ಶ್ರೀಗೋಕರ್ಣನಾಥೇಶ್ವರ ಕಾಲೇಜು, ಗಾಂಧಿನಗರ, ಮಂಗಳೂರು ಇಲ್ಲಿ ಜರಗಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ರವರು ಪ್ರೇರಣಾ ಶಿಬಿರವನ್ನು ಉದ್ಘಾಟಿಸಿ, ಶುಭಕೋರಿದರು. ಯುವ ವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಶ್ರೀ ಪದ್ಮನಾಭ ಮರೋಳಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಗೋಕರ್ಣನಾಥ ಕಾಲೇಜು ಮಂಗಳೂರು ಇದರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!