ಯುವವಾಹಿನಿ (ರಿ) ಕೊಲ್ಯ ಘಟಕದ ಸಹಭಾಗಿತ್ವದಲ್ಲಿ

ಕೊಲ್ಯ ಪರಿಸರದಲ್ಲಿ ಅಭೂತಪೂರ್ವ ಯಶಸ್ಸನ್ನು ಕಂಡ ಹುಚ್ಚುನಾಯಿ ನಿಯಂತ್ರಣ ಲಸಿಕಾ ಶಿಬಿರ

ಕೊಲ್ಯ : ರೋಟರಿ ಕ್ಲಬ್ ಮಂಗಳೂರು ಪೂರ್ವ,ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ,ಎನಿಮಲ್ ಕೇರ್ ಟ್ರಸ್ಟ್ ಮತ್ತು ಯುವವಾಹಿನಿ (ರಿ) ಕೊಲ್ಯ ಘಟಕ ಇದರ ಜಂಟಿ ಸಹಭಾಗಿತ್ವದಲ್ಲಿ ” ಹುಚ್ಚುನಾಯಿ ನಿಯಂತ್ರಣ ಲಸಿಕಾ ಶಿಬಿರ” ವನ್ನು ಕೊಲ್ಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ವಠಾರದಲ್ಲಿ ದಿನಾಂಕ 07/10/2018 ನೇ ಆದಿತ್ಯವಾರದಂದು ಜರಗಿತು.

ರೋಟರಿ ಕ್ಲಬ್ ಮಂಗಳೂರು ಪೂರ್ವದ ಅಧ್ಯಕ್ಷರಾದ ರೋ| ಜ?? ಕುಮಾರ್ ಕೊಲ್ಯರವರು ವಿವಿಧ ಸಂಘಟನೆಗಳ ಆಶ್ರಯದೊಂದಿಗೆ ಕಳೆದ ಹದಿನಾಲ್ಕು ವರುಷಗಳೊಂದಿಗೆ ಯಶಸ್ವಿಯಾಗಿ ನಡೆಸಿಕೊಂಡು ಬಂದಿರುವ ಹುಚ್ಚುನಾಯಿ ನಿಯಂತ್ರಣ ಲಸಿಕಾ ಶಿಬಿರಕ್ಕೆ ಕಳೆದ ವರುಷದಿಂದ ನಮ್ಮೊಂದಿಗೆ ಯುವವಾಹಿನಿ (ರಿ) ಕೊಲ್ಯ ಘಟಕವು ಕೈ ಜೋಡಿಸಿರುವುದು ಅತ್ಯಂತ ಸಂತೋಷದ ವಿಷಯವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಯುವವಾಹಿನಿ (ರಿ) ಕೊಲ್ಯ ಘಟಕದ ಸಲಹೆಗಾರರಾದ ,ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಅಶೋಕ್ ಕುಮಾರ್ ಮಂಗಳೂರು ರವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದು,ಮೂಕಪ್ರಾಣಿಗಳ ರಕ್ಷಣೆಯ ಈ ವಿಶೇಷ ಶಿಬಿರಕ್ಕೆ ಕೈ ಜೋಡಿಸಿದ ಯುವವಾಹಿನಿ (ರಿ) ಕೊಲ್ಯ ಘಟಕಕ್ಕೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಶು ವೈದ್ಯರಾದ ರೋ| ವಸಂತ್ ಕುಮಾರ್ ಶೆಟ್ಟಿಯವರು ಹುಚ್ಚುನಾಯಿ ನಿಯಂತ್ರಣ ಲಸಿಕೆಯ ಅಗತ್ಯತೆಯ ಕುರಿತು ಮಾಹಿತಿಯನ್ನು ನೀಡಿದರು.
ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕೊಲ್ಯ ಇದರ ಟ್ರಸ್ಟಿಗಳಾದ ಪ್ರಕಾಶ್ ಎಚ್ ಕೊಲ್ಯರವರು ವರ್ಷಂಪ್ರತಿ ನಡೆಯುವ ಈ ಶಿಬಿರಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
ಪ್ರಾಣಿಗಳ ರಕ್ಷಣೆಯ ಜೊತೆಗೆ ಸಮಾಜದ ಜನರನ್ನು ರೇಬಿಸ್ ನಂತಹ ಮಾರಕರೋಗಗಳಿಂದ ಕಾಪಾಡುವ ಇಂತಹ ವಿಶೇಷ ಶಿಬಿರದಲ್ಲಿ ನಮ್ಮ ಯುವವಾಹಿನಿ (ರಿ) ಕೊಲ್ಯ ಘಟಕ ಪಾಲ್ಗೊಂಡಿರುವುದು ನಿಜಕ್ಕೂ ಸಂತಸ ತಂದಿದೆ ಎಂದು ಯುವವಾಹಿನಿ (ರಿ) ಕೊಲ್ಯ ಘಟಕದ ಅಧ್ಯಕ್ಷರಾದ ಕುಸುಮಾಕರ್ ಕುಂಪಲರವರು ಅಭಿಪ್ರಾಯ ವ್ಯಕ್ತಪಡಿಸಿದರು.
ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರದ ಅಧ್ಯಕ್ಷರಾದ ಸುಧಾಸುರೇಶ್ ರವರು ಶಿಬಿರದ ಪ್ರಯೋಜನದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.ಎನಿಮಲ್ ಕೇರ್ ಟ್ರಸ್ಟ್ ಟ್ರಸ್ಟಿಯಾದ ಪೌಲ್ ಚಾರ್ಲ್ ಹಾಗೂ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಸ್ಥಳಿಯ ಪರಿಸರದ ಸಾರ್ವಜನಿಕರು ತಮ್ಮ ತಮ್ಮ ಮನೆಯ ಸುಮಾರು 137 ಸಾಕು ನಾಯಿಗಳನ್ನು ತಂದು ಲಸಿಕೆ ಹಾಕಿಸಿಕೊಂಡು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.ರೋಟರಿ ಸಮುದಾಯ ದಳದ ಸದಸ್ಯರಾದ ಸುಕೇಶ್ ಮಂಜನಾಡಿ ಸ್ವಾಗತಿಸಿ ,ಕಾರ್ಯಕ್ರಮ ನಿರೂಪಿಸಿದರು,ರೋಟರಿ ಸಮುದಾಯ ದಳದ ಮಾಜಿ ಜಿಲ್ಲಾ ಪ್ರತಿನಿಧಿ ಜೈ ದೇವ್ ಕೊಲ್ಯ ವಂದನಾರ್ಪಣೆ ಮಾಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!