ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು

ಚೆನ್ನಕೇಶವ – ಅಧ್ಯಕ್ಷರು -1998-99

ಶ್ರೀಯುತರ ಅಧ್ಯಕ್ಷ ಅವಧಿಯಲ್ಲಿ ಕಾಸರಗೋಡಿನ ಚಿಪ್ಪಾರು ಘಟಕದಿಂದ ಶೀರೂರಿನ ಘಟಕದವರೆಗೆ ಘಟಕ ಭೇಟಿಯನ್ನು ಮಾಡಿದ ಸಾಧನೆ ಅವಿಸ್ಮರಣೀಯ. ಇವರ ಅಧಿಕಾರ ಅವಧಿಯಲ್ಲಿ ವಿದ್ಯಾನಿಧಿಯಿಂದ ಬಡ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಹಾಯ ನೀಡಲಾಗಿತ್ತು.

ಪುತ್ತೂರಿನ ಓರ್ವ ವಿದ್ಯಾರ್ಥಿ ಶ್ರೀ ಪ್ರವೀಣ್ ಕುಮಾರ್ ಇವರ ಆಥ್ಲೆಟಿಕ್ಸ್‌ನ ತರಬೇತಿ ಸಮಯದಲ್ಲಿ ಪೌಷ್ಠಿಕ ಆಹಾರ ಅವಶ್ಯಕತೆಗೆ ಮಾಸಿಕ 150/-ರಂತೆ ಧನ ಸಹಾಯ ನೀಡಲಾಗಿತ್ತು.

ಕು. ಪ್ರಮೀಳಾರ ಪಿಯುಸಿ ವ್ಯಾಸಂಗದ ಸಂಪೂರ್ಣ ಖರ್ಚಿನ ಜವಾಬ್ದಾರಿಯನ್ನು ತಮ್ಮ ಸಮಾಜದ ದಾನಿಯಾದ ಕೆ.ಎ. ಜಯಚಂದ್ರರವರಿಂದ ಭರಿಸುವಂತೆ ಸಹಕರಿಸಲಾಗಿತ್ತು.

11-10-98 ರಂದು ನಮ್ಮ ಸಮಾಜದ ಶಿಕ್ಷಕರ ಸಮಾವೇಶವನ್ನು ಮಂಗಳೂರಿನ ಕುದ್ರೋಳಿಯ ಶ್ರೀ ಅಧ್ಯಕ್ಷ ಕೊರಗಪ್ಪ ಸಭಾಭವನದಲ್ಲಿ ನಡೆಸಲಾಗಿತ್ತು. ಪಣಂಬೂರಿನಲ್ಲಿ ಅಂತರ್ ಘಟಕ ಕ್ರಿಕೆಟ್ ಪಂದ್ಯಾಟ ನಡೆಸಲಾಗಿತ್ತು.

ಪತ್ನಿ ಶ್ರೀಮತಿ ಮಿತ್ರ ಚೆನ್ನಕೇಶವ, ಮತ್ತು ನಿಶಿತ್ ಹಾಗೂ ನಿಕಿತ್ ಎರಡು ಗಂಡು ಮಕ್ಕಳನ್ನೊಳಗೊಂಡ ಸುಖ ಸಂಸಾರ ಇವರದ್ದು.

ಕಿನ್ನಿಗೋಳಿ Jc ಸ್ಥಾಪಕ ಅಧ್ಯಕ್ಷರಾದ ಇವರು ತನ್ನ ವೃತ್ತಿ ನಿಮಿತ್ತ ಸುರತ್ಕಲ್‌ಗೆ ಸ್ಥಳಾಂತರಗೊಂಡು ಬಳಿಕ JcI ಬೆಳೆಸುವಲ್ಲಿ ತನ್ನ ಉತ್ಕೃಷ್ಠ ಸೇವೆಯನ್ನು ನೀಡಿರುತ್ತಾರೆ.

ವಲಯಾಧಿಕಾರಿಯಾಗಿ ದುಡಿದ ಇವರು ರಾಷ್ಟ್ರೀಯ ಮಟ್ಟದಲ್ಲಿ ಎಛಿ ಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಎಛಿಯ ಉನ್ನತ ಶ್ರೇಣಿಯ ಸೆನೆಟರ್ ಆಗಿ ವಲಯ 15 ರಲ್ಲಿ ಅಂತರ್‌ರಾಷ್ಟ್ರೀಯ ಸಮ್ಮೇಳನಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಪ್ರವಾಸ ಇವರ ಒಂದು ಹವ್ಯಾಸ. ಮಿತ್ರರೊಂದಿಗೆ, ಅನೇಕ ವೇಳೆ ಏಕಾಂಗಿಯಾಗಿ ದೇಶಾದ್ಯಂತ ಸಂಚರಿಸುವ ಇವರು ಉತ್ತಮ ಚಾರಣಿಗರು ಕೂಡ. ಇತ್ತೀಚೆಗೆ ಎವರೆಸ್ಟ್ ಬೇಸ್ ಕ್ಯಾಂಪ್‌ವರೆಗೆ ಚಾರಣ ಮಾಡಿ ಯಶಸ್ವಿಯಾಗಿ ಹಿಂದಿರುಗಿದ್ದಾರೆ. ವಿದೇಶ ಪ್ರವಾಸದಲ್ಲಿ ಹಲವಾರು ದೇಶಗಳನ್ನು ಸುತ್ತಿ ಅನುಭವಗಳಿಸಿರುವ ಇವರು ಮಿತಭಾಷಿ.

ವಿಳಾಸ: ಕೋಸ್ಟಲ್ ಟಯರ್‍ಸ್
ಶ್ರೀ ಗೋವಿಂದಾದಾಸ ಕಾಲೇಜಿನ ಎದುರುಗಡೆ
ಸುರತ್ಕಲ್, ಮಂಗಳೂರು-575014
ಮೊಬೈಲ್: 9901895434

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!