ಯುವವಾಹಿನಿ (ರಿ) ಸುಳ್ಯ ಘಟಕ

ದೇಶದಲ್ಲಿ ಕ್ರಾಂತಿಯಕಾರಿ ವಿಚಾರ ಧಾರೆಗಳು ನಿಂತುಹೋಗಿವೆ : ಶಿವರಾಮ

 ಸುಳ್ಯ ; ದೇಶದಲ್ಲಿ ಕ್ರಾಂತಿಯಕಾರಿ ವಿಚಾರ ಧಾರೆಗಳು ನಿಂತುಹೋಗಿವೆ .ಅಸಹಿಷ್ಣುತೆ ಜಾಸ್ತಿ ಯಾಗಿದೆ .ಉಡುಪಿಯಲ್ಲಿ ಧರ್ಮ ಸಂತರ ಸಂಸತ್ ನಡೆಯುತ್ತಿದೆ ಆದರೆ ಅದು ಧರ್ಮ ಸಂತೃಪ್ತರ ಸಭೆ ನಾವೆಲ್ಲ ಧರ್ಮಸಂತ್ರಸ್ತರು .ಪುರೋಹಿತಶಾಹಿ ವರ್ಗದಿಂದ ಧರ್ಮ ಉಳಿದುದಲ್ಲ ಶೋಷಿತ ವರ್ಗದಿಂದ ಉಳಿದುದು ಎಂದು ಬೆಂಗಳೂರಿನ ನಿವೃತ್ತ ಎ.ಸಿ.ಪಿ ಬಿ.ಕೆ .ಶಿವರಾಮ ಹೇಳಿದರು .ಅವರು ನ.25ರಂದುಯುವವಾಹಿನಿ (ರಿ) ಸುಳ್ಯ ಘಟಕ ಮತ್ತು ಸುಳ್ಯದ ಮಾನವ ಬಂಧುತ್ವ ವೇದಿಕೆ ವತಿಯಿಂದ ಯುವಜನ ಸಂಯುಕ್ತ ಮಂಡಳಿ ಸಂಭಾಂಗಣದಲ್ಲಿ ನಡೆದ ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಸಂದೇಶ ವಿಚಾರ ಸಂಕಿರಣದಲ್ಲಿ ಮಾತನಾಡುತ್ತಿದ್ದರು.
ವಿಚಾರ ಸಂಕಿರಣವನ್ನು ಉದ್ಘಾಟಿಸಿದ ಸುಳ್ಯ ಸರಕಾರಿ ಕಾಲೇಜಿನ ಪ್ರಾಂಶುಪಾಲ ಡಾ| ಅಚ್ಚುತ ಪೂಜಾರಿ ಬ್ರಹ್ಮಶ್ರೀ ನಾರಾಯಣ ಗುರುಗಳು ಈ ಸಮಾಜ ಕಂಡ ಅಪ್ರತಿಮ ಸಮಾಜ ಸುಧಾರಕರು. ಅವರು ಕೇರಳ ದಲ್ಲಿ ಸಮಾಜಿಕ ,ಧಾರ್ಮಿಕ ಮತ್ತು ಶೈಕ್ಷಣಿಕ ಕ್ರಾಂತಿಯನ್ನು ಮಾಡಿದರು . ದಲಿತರಿಗೆ ,ಹಿಂದುಳಿದ ವರ್ಗದವರಿಗೆ ತಲೆ ಎತ್ತಿ ನಡೆಯುವಂತಹ ಸ್ವಾಭಿಮಾನ ತುಂಬಿದರು. ಬಿಲ್ಲವ ಸಮುದಾಯವೂ ಸೇರಿದಂತೆ ಹಲವು ಜಾತಿಯ ವರಿಗೆ ದೇವಸ್ಥಾನಗಳಿಗೆ ಪ್ರವೇಶ ಇಲ್ಲದಿದ್ದಾಗ ಪ್ರತ್ಯೇಕ ದೇವಸ್ಥಾನಗಳನ್ನೇ ಕಟ್ಟಿಸುವ ಕಾರ್ಯ ಆರಂಭಿಸಿದರು. ನಿನ್ನ ಧರ್ಮವನ್ನು ಪ್ರೀತಿಸು ಇತರ ಧರ್ಮವನ್ನು ಗೌರವಿಸು ಎಂದು ಹೇಳಿಕೊಟ್ಟರು ಎಂದು ಹೇಳಿದರು.
ಸಭಾದ್ಯಕ್ಷತೆಯನ್ನು ಮಾನವ ಬಂಧುತ್ವ ವೇದಿಕೆ ಯ ಸಂಚಾಲಕ ವಿಲ್ಪ್ರೆಡ್ ಡಿಸೋಜ ವಹಿಸಿದ್ದರು.ಯುವವಾಹಿನಿ ಸುಳ್ಯ ಘಟಕ ದ ಅಧ್ಯಕ್ಷ ಶಿವಪ್ರಸಾದ್ ಕೆ.ವಿ, ಬಿಲ್ಲವ ಸಂಘದ ಕಾರ್ಯದರ್ಶಿ ಬಾಲಕೃಷ್ಣ ನೂಜಾಡಿ, ಎಂ.ಬಿ ಸದಾಶಿವ, ಅಶೋಕ್ ಎಡಮಲೆ,ಶ್ರೀಮತಿ ಲೀಲಾ ಸಂಪಿಗೆ ,ಅಬ್ಬಾಸ್ ಕಟ್ಟೆಕ್ಕಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಾನವ ಬಂಧುತ್ವ ವೇದಿಕೆಯ ಸತೀಶ್ ಕುಮಾರ್ ಪ್ರಸ್ತಾವಿಕ ಭಾಷಣಗೈದರು, ಗೋಪಾಲ ಪೆರಾಜೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಯುವವಾಹಿನಿ ಸಂಘಟನ ಕಾರ್ಯದರ್ಶಿ ಮಹೇಶ್ ಚಂದ್ರ ಸಾಲ್ಯಾನ್, ರವೀಂದ್ರ ಎಚ್, ರವಿಕುಮಾರ್, ರವಿಕಿರಣ್, ರಮೇಶ್ ಜಯನಗರ , ಜಯಂತಿ , ದಿನೇಶ್, ಸರೋಜಿನಿ,ಚಂದ್ರಾವತಿ, ಗುರುನಾಥೇಶ್ವರ ,ಸುಂದರ ಪೂಜಾರಿ, ಚಂದ್ರಶೇಖರ್, ಸುಂದರಿ,ಭಾಸ್ಕರ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!