ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ ವತಿಯಿಂದ

ಬಡ ಕುಟುಂಬದ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ

ವರುಷಕ್ಕೊಂದು ಮನೆ ಹರುಷಕ್ಕೊಂದು ನೆಲೆ ಎಂಬ ಘೋಷ ವಾಕ್ಯದ ಮೂಲಕ ಕಳೆದ ವರ್ಷ ಯುವವಾಹಿನಿ ಬಂಟ್ವಾಳ ತಾಲೂಕು ಘಟಕವು ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಅಜಕಳ‌ ನಿವಾಸಿ ಅಕ್ಕಮ್ಮ ಎಂಬ ಬಡ ಕುಟುಂಬಕ್ಕೆ ಸುಮಾರು ಐದು ಲಕ್ಷ ವೆಚ್ಚದ ಮನೆ ನಿರ್ಮಿಸಿ ಹಸ್ತಾಂತರ ಮಾಡಿದೆ.

ಈ ಸಾಲಿನಲ್ಲಿ ಬಂಟ್ವಾಳ ಮೂಡ ಗ್ರಾಮದ ನಂದಬೆಟ್ಟು ಎಂಬಲ್ಲಿನ‌ ಪ್ರೇಮ ಎಂಬ ಬಡ ಕುಟುಂಬಕ್ಕೆ ಮನೆ ನಿರ್ಮಾಣದ ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ದಿನಾಂಕ 18.03.2018 ರಂದು ನಾಟಿ ಕೇಶವ ಶಾಂತಿ ಇವರ ನೇತ್ರತ್ವದಲ್ಲಿ ವೈದಿಕ ವಿಧಿ ವಿಧಾನಗಳ‌ ಮೂಲಕ ಭೂಮಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಯುವವಾಹಿನಿ ಬಂಟ್ವಾಳ ‌ಘಟಕದ ಅಧ್ಯಕ್ಷರಾದ ಲೋಕೇಶ್ ಸುವರ್ಣ, ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾದ ನವೀನ್ ಚಂದ್ರ, ಘಟಕದ ಮಾಜಿ ಅಧ್ಯಕ್ಷರಾದ ರಾಮಚಂದ್ರ ಸುವರ್ಣ, ಶ್ರೀಧರ ಅಮೀನ್, ನಾಗೇಶ್ ಪೊನ್ನೋಡಿ,ಅರುಣ್ ಕುಮಾರ್, ಇಂಜಿನಿಯರ್ ವಸಂತ್, ಸದಸ್ಯರಾದ ನಾಗೇಶ್ ಎಂ, ರಮೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು

3 thoughts on “ಬಡ ಕುಟುಂಬದ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ

Leave a Reply

Your email address will not be published. Required fields are marked *

error: Content is protected !!