ಯುವವಾಹಿನಿ ಯುವಕರ ಪ್ರೇರಕ ಶಕ್ತಿ: ವಸಂತ ಬಂಗೇರ

ವೇಣೂರು : ಸಂಘಟನೆಗಳು ಉದ್ಯೋಗ, ಶಿಕ್ಷಣದ ಜತೆಗೆ ಸಮು ದಾಯದ ಅಭಿವೃದ್ಧಿಗೆ ಶ್ರಮಿಸಬೇಕು. ಅದುವೇ ಮೂಲ ಉದ್ದೇಶವಾಗಬೇಕು. ಸಮುದಾಯದ ಅಭಿವೃದ್ಧಿಯ ವಿಷಯ ದಲ್ಲಿ ಹಸ್ತಕ್ಷೇಪ ಸಲ್ಲದು. ಸಾಮಾಜಿಕ ಸೇವೆಯಲ್ಲಿ ಯುವವಾಹಿನಿ ಯುವಕರ ಪ್ರೇರಕ ಶಕ್ತಿ ಆಗಿದೆ ಎಂದು ಹೇಳಿದರು.ಅಲ್ಲದೆ ಜಿಲ್ಲೆಯಲ್ಲಿ ಯುವವಾಹಿನಿ ಉತ್ತಮ ಕಾರ್ಯಸಾಧನೆ ಮಾಡಿದೆ. ಅದಕ್ಕಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗಳಿಸಿರುವುದು ನಮಗೆಲ್ಲ ಹೆಮ್ಮೆ. ಸಮಾಜದ ಅಭಿವೃದ್ಧಿಗೆ ಪೂರಕವಾಗಿರುವ ಈ ಸಂಘಟನೆಗೆ ಎಲ್ಲರೂ ಬೆಂಬಲ ನೀಡಬೇಕಿದೆ.ಅವಿಭಜಿತ ಜಿಲ್ಲೆ ಯಲ್ಲಿ ಬಿಲ್ಲವರೇ ಬಹುಸಂಖ್ಯಾಕರಾಗಿ ದ್ದಾರೆ. ಆದರೆ ನಮ್ಮಲ್ಲಿ ಒಗ್ಗಟ್ಟಿನ ಕೊರತೆ ಇರುವುದು ಖೇದಕರ. ಸಂಘಟನೆ ಆಗದೆ ಇದ್ದರೆ ಅಭಿವೃದ್ಧಿ ಕಷ್ಟಸಾಧ್ಯ ಶಾಸಕ ವಸಂತ ತಿಳಿಸಿದರು.
ಅವರು ದಿನಾಂಕ 27-01-2019 ಆದಿತ್ಯವಾರದಂದು ವೇಣೂರು ಜೆ.ಪಿ ಟವರ್ ಹಾಲ್ ನಲ್ಲಿ ಜರಗಿದ ಯುವವಾಹಿನಿ(ರಿ) ವೇಣೂರು ಘಟಕದ ೨೦೧೯-೨೦೨೦ ನೇ ಸಾಲಿನ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಯುವವಾಹಿನಿ(ರಿ) ವೇಣೂರು ಘಟಕದ ಅಧ್ಯಕ್ಷ ನಿತೀಶ್‌ ಎಚ್. ಅಧ್ಯಕ್ಷತೆ ವಹಿಸಿ ದ್ದರು. ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ ನಡುಬೈಲು ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶ್ರೀ ಗು.ನಾ.ಸ್ವಾ.ಸೇ. ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಜಿಲ್ಲಾ ಪಂಚಾಯತ್‌ ಸದಸ್ಯ ಪಿ. ಧರಣೇಂದ್ರ ಕುಮಾರ್‌, ವೇಣೂರು ಯುವವಾಹಿನಿ ಘಟಕದ ಸಲಹೆಗಾರ ಪ್ರೇಮನಾಥ ಕೆ., ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನ ಕಾರ್ಯದರ್ಶಿ ರಾಕೇಶ್‌ ಕುಮಾರ್‌ ಮೂಡುಕೋಡಿ, ನಾಮನಿರ್ದೇಶಿತ ಸದಸ್ಯ ಯೋಗೀಶ್‌ ಪೂಜಾರಿ ಬಿಕ್ರೊಟ್ಟು, ನೂತನ ಅಧ್ಯಕ್ಷ ನವೀನ್‌ ಪಚ್ಚೇರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸಮ್ಮಾನ-ಸಹಾಯಹಸ್ತ
ಬೆಳ್ತಂಗಡಿ ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಗೊಂಡಿರುವ ಎಚ್. ದಯಾನಂದ ದಂಪತಿಯನ್ನು ಸಮ್ಮಾನಿಸಿ ಗೌರವಿಸಲಾಯಿತು. ಸಮ್ಮಾನಪತ್ರವನ್ನು ಜಯಂತ್‌ ಕೋಟ್ಯಾನ್‌ ವಾಚಿಸಿದರು.
ಲಯನ್ಸ್‌ ಜಿಲ್ಲಾ ಉಪ ಗವರ್ನರ್‌ ಡಾ| ಗೀತ್‌ಪ್ರಕಾಶ್‌ ಪ್ರಧಾನ ಭಾಷಣ ಮಾಡಿದರು.
ಕಳೆದ ಸಾಲಿನಲ್ಲಿ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ನಿತೀಶ್‌ ಎಚ್., ಕಾರ್ಯದರ್ಶಿ ಸತೀಶ್‌ ಪಿ.ಎನ್‌., ಸಲಹೆಗಾರ ಪ್ರೇಮನಾಥ ಕೆ., ಬಲ್ಯೊಟ್ಟು ಶಾಲೆಯ ಮುಖ್ಯ ಶಿಕ್ಷಕಿ ವಿನಯಾ ಹಾಗೂ ರಾಕೇಶ್‌ ಕುಮಾರ್‌ ಮೂಡುಕೋಡಿ ಅವರನ್ನು ಸಮ್ಮಾನಿಸಲಾಯಿತು.
ಯುವವಾಹಿನಿ ಘಟಕದ ಆಸರೆ ಇದರ ಹಾಗೂ ಬೆಳ್ತಂಗಡಿ ಶ್ರೀ ಗು.ನಾ.ಸ್ವಾ.ಸೇ. ಸಂಘದ ವತಿಯಿಂದ ಒದಗಿಸಲಾದ ಆರ್ಥಿಕ ಸಹಾಯನಿಧಿಯನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.
ಸತೀಶ್‌ ಪಿ.ಎನ್‌. ವರದಿ ವಾಚಿಸಿ, ನೂತನ ಪ್ರ. ಕಾರ್ಯದರ್ಶಿ ಶಿವಪ್ರಕಾಶ್‌ ಅಂಭಾಶ್ರೀ ಸ್ವಾಗತಿಸಿ, ಅರುಣ್‌ ಕೋಟ್ಯಾನ್‌ ಹಾಗೂ ಪ್ರಜ್ಞಾ ಕಾರ್ಯಕ್ರಮ ನಿರ್ವಹಿಸಿದರು. ಜತೆ ಕಾರ್ಯದರ್ಶಿ ರಾಜೇಂದ್ರ ಕೆ. ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!