ಯುವವಾಹಿನಿ (ರಿ) ಕೂಳೂರು ಘಟಕದ ಆಶ್ರಯದಲ್ಲಿ ಜರಗಿದ ಯೋಗದ ಬಗ್ಗೆ ಮಾಹಿತಿ ಕಾರ್ಯಾಗಾರ

ಯೋಗ ವಿಶ್ವದಲ್ಲಿ ಮಹತ್ತರ ಪಾತ್ರ ವಹಿಸಿದೆ : ರವೀಶ್ ಕುಮಾರ್

 ಕೂಳೂರು : ಹಿಂದಿನ ಕಾಲದಲ್ಲಿ ನಮ್ಮ ಪೂರ್ವಜರ ದಿನ ನಿತ್ಯದ ಕೆಲಸವೇ ಒಂದು ಯೋಗ ಆಗಿತ್ತು.ಬೆಳಿಗ್ಗೆ ಬೇಗ ಏಳುವುದು ಯೋಗ.ಶ್ರೀ ಕೃಷ್ಣ ಪರಮಾತ್ಮನು ಭಗವದ್ಗೀತೆಯಲ್ಲಿ ಈ ರೀತಿ ಹೇಳಿದ್ದಾರೆ – ನಮ್ಮ ಪಂಚೇಂದ್ರಿಯಗಳು 5 ಕುದುರೆಗಳು ಇದ್ದಂತೆ ಅವುಗಳನ್ನು ಕಡಿವಾಣ ಹಾಕಿ ಹತೋಟಿಯಲ್ಲಿ ಇಟ್ಟು ಕೊಳ್ಳುವುದೇ ಯೋಗ ,ಮುಖ್ಯವಾಗಿ ನಾವು ತಿನ್ನುವ ಆಹಾರದಲ್ಲಿ ಸಮತೋಲನ ಇರಬೇಕು. ಆಗ ಆರೋಗ್ಯವಂತರಾಗಿ ಇರುತ್ತೇವೆ ಎಂದರು . ಮನಸ್ಸನ್ನು ಹತೋಟಿಯಲ್ಲಿ ಇಟ್ಟು ಕೊಳ್ಳುವುದು ಮುಖ್ಯ .ಯೋಗವೇ ಆರೋಗ್ಯ ಆದ್ದರಿಂದ ಎಲ್ಲರೂ ಯೋಗ ಮಾಡಿ ಆರೋಗ್ಯವಂತರಾಗಿ ಇರೋಣ ಎಂದರು ಯೋಗ ವಿಶ್ವದಲ್ಲಿ ಮಹತ್ತರ ಪಾತ್ರ ವಹಿಸಿದೆ.. ಎಂದು ಯುವವಾಹಿನಿ (ರಿ) ಮಂಗಳೂರು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಹಾಗೂ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ(ರಿ) ಕರ್ಣಾಟಕ ಮಂಗಳೂರು ವಲಯ ಇದರ ಸ್ಥಾಪಕರಾದ ರವೀಶ್ ಕುಮಾರ್ ತಿಳಿಸಿದರು
ಅವರು ದಿನಾಂಕ 27.06.2018 ರಂದು ಯುವವಾಹಿನಿ (ರಿ) ಕೂಳೂರು ಘಟಕದ ಆಶ್ರಯದಲ್ಲಿ ಜರಗಿದ ಯೋಗದ ಬಗ್ಗೆ ಮಾಹಿತಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು . ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷ ರಾದ ಲೋಕೇಶ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು . ಸಲಹೆಗಾರರಾದ ನೇಮಿರಾಜ್ ,ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ,ನಿಕಟಪೂರ್ವ ಅಧ್ಯಕ್ಷರಾದ ಪುಷ್ಪ ರಾಜ್ ಕುಮಾರ್ ,ಗೋಪಾಲಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷರಾದ ಗಿರಿಧರ್ ಸನಿಲ್ ,ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಅಧ್ಯಕ್ಷರಾದ ಜಯಾನಂದ ಅಮೀನ್, ಸ್ಥಾಪಕ ಅಧ್ಯಕ್ಷರಾದ ಸುಜಿತ್ ರಾಜ್,ಮಂಗಳೂರು ಮಹಿಳಾ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಸುಪ್ರೀತಾ ಪೂಜಾರಿ ಇವರು ಉಪಸ್ಥಿತರಿದ್ದರು .ಅಧ್ಯಕ್ಷರು ಎಲ್ಲರನ್ನು ಸ್ವಾಗತಿಸಿದರು . ವಿನೀತ್ ಕುಮಾರ್ ಇವರು ಸಂಪನ್ಮೂಲ ವ್ಯಕ್ತಿಯಾದ ರವೀಶ್ ಕುಮಾರ್ ಇವರ ಪರಿಚಯವನ್ನು ಸಭೆಯ ಮುಂದಿಟ್ಟರು
ಮಾಹಿತಿ ಕಾರ್ಯಾಗಾರದ ನಂತರ ಮಂಗಳೂರು ವಿಶ್ವವಿದ್ಯಾನಿಲಯದ ಪಿ.ಜಿ.ಡಿಪ್ಲೋಮಾ ಇನ್ ಯೋಗಿಕ್ ಸೈನ್ಸ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಯುವ ವಾಹಿನಿ(ರಿ) ಮಹಿಳಾ ಘಟಕದ ಉಪಾಧ್ಯಕ್ಷರಾದ ಉಮಾ ಶ್ರೀಕಾಂತ್ ಇವರನ್ನು ಘಟಕದ ವತಿಯಿಂದ ಅಭಿನಂದಿಸಲಾಯಿತು . ಬಳಿಕ ಉಮಾ ಶ್ರೀಕಾಂತ್ ಇವರು ಮಾತನಾಡಿ ತಮ್ಮನ್ನು ಅಭಿನಂದಿಸಿದ ಯುವ ವಾಹಿನಿ ಕೂಳೂರು ಘಟಕಕ್ಕೆ ಧನ್ಯವಾದ ಸಲ್ಲಿಸಿದರು .ಕಾರ್ಯದರ್ಶಿ ಪವಿತ್ರ ಅಂಚನ್ ಧನ್ಯವಾದ ನೀಡಿದರು .

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!