ಯುವವಾಹಿನಿ ರಿ ಕೊಲ್ಯ ಘಟಕದ ಆಶ್ರಯದಲ್ಲಿ

ಅಭಯ ಆಶ್ರಮದ ಸದಸ್ಯರೊಂದಿಗೆ ಕುಟುಂಬ ಮಿಲನ

ಯುವವಾಹಿನಿ ರಿ ಕೊಲ್ಯ ಘಟಕ ಇದರ ವತಿಯಿಂದ ಅಭಯ ಆಶ್ರಮದ ಸದಸ್ಯರೊಂದಿಗೆ ಕುಟುಂಬ ಮಿಲನ ಕಾರ್ಯಕ್ರಮ ತಾ08-07-2018ನೇ ಆದಿತ್ಯವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕೊಣಾಜೆ ಅಸೈಗೋಳಿಯಲ್ಲಿರುವ ಅಭಯ ಆಶ್ರಮದಲ್ಲಿ ಆಶ್ರಮದ ಮಕ್ಕಳಿಗೆ ಹಾಗೂ ಹಿರಿಯರಿಗೆ ವಿವಿಧ ಸ್ಪರ್ಧೆ ಹಾಗೂ ಅರೆಹೊಳೆ ಪ್ರತಿಷ್ಠಾನ ರಿ ಮಂಗಳೂರು ಇದರ ಕಲಾವಿದರಿಂದ ಸೊಗಸಾದ ಹಾಡಿನೊಂದಿಗೆ ಮನರಂಜನಾ ಕಾರ್ಯಕ್ರಮ,ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಘಟಕದ ಸದಸ್ಯ ದಂಪತಿಗಳಿಗೆ ಆಶ್ರಮದ ಹಿರಿಯರಿಂದ ಶುಭಹಾರೈಕೆ,ಆಶ್ರಮದ ಸದಸ್ಯರೊಂದಿಗೆ ಸಹಭೋಜನ ಹಾಗೂ ಕಾರ್ಯಕ್ರಮದ ಸವಿನೆನಪಿಗೆ ಆಶ್ರಮದ ವಠಾರದಲ್ಲಿ ಘಟಕದ ಸದಸ್ಯರು ಗಿಡ ನೀಡುವುದರೊಂದಿಗೆ ಮುಕ್ತಾಯಗೊಂಡಿತು,ಕಾರ್ಯಕ್ರಮದ ಅಂಗವಾಗಿ ಜರಗಿದ ಸಭಾಕಾರ್ಯಕ್ರಮವನ್ನು ಅಭಯ ಆಶ್ರಯದ ಸಂಚಾಲಕರಾದ ಶ್ರೀ ನಾಥ್ ಹೆಗ್ಡೆಯವರು ದೀಪ ಬೆಳಗಿಸಿ ಉಧ್ಘಾಟಿಸಿದರು ಅತಿಥಿಗಳಾಗಿ ಅರೆಹೊಳೆ ಪ್ರತಿಷ್ಠಾನ ದ ರಂಗಸಂಚಾಲಕರಾದ ಜಯದೇವ್ ಕೊಲ್ಯ,ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶ್ರೀಮತಿ ನಮಿತಾಶ್ಯಾಂ,ಬೆಂಗಳೂರು ಬಿಲ್ಲವ ಅಸೋಸಿಯೇಷನ್ ನ ಸ್ಥಾಪಕ ಸದಸ್ಯರಾದ ವೆಂಕಟೇಶ್. ಟಿ, ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ,ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ ಬಂಟ್ವಾಳ,ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರಾಜೀವ ಪೂಜಾರಿಯವರು ಭಾಗವಹಿಸಿದರು.ಘಟಕದ ಅಧ್ಯಕ್ಷರಾದ ಕುಸುಮಾಕರ ಕುಂಪಲರವರು ಅತಿಥಿಗಳನ್ನು ಸ್ವಾಗತಿಸಿದರು.ನಿಕಟಪೂರ್ವ ಅಧ್ಯಕ್ಷರಾದ ಸುರೇಶ್.ಬಿ.ಕೊಲ್ಯ ಹಾಗೂ ಸದಸ್ಯ ಭವಿಷ್ ಕಾರ್ಯಕ್ರಮ ನಿರೂಪಿಸಿದರು.ಒಂದು ದಿನದ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಒಂದೇ ಜಾತಿ,ಒಂದೇ ಮತ,ಒಂದೇ ದೇವರು ಎಂದು ಬ್ರಹ್ಮ ಶ್ರೀ ನಾರಾಯಣ ಗುರುವರ್ಯರು ಪ್ರತಿಪಾದಿಸಿದ ತತ್ವದಡಿಯಲ್ಲಿ ಆಶ್ರಮ ಸದಸ್ಯರೊಂದಿಗೆ ಬೆರೆತು ಅವರೊಂದಿಗೆ ನಾವಿದ್ದೇವೆ ನಾವೆಲ್ಲ ಒಂದೇ ಕುಟುಂಬ ಅನ್ನುವಂತಹ ಸಂದೇಶವನ್ನು ಸಾರುವುದಕ್ಕಾಗಿ ಆಶ್ರಮದ ಸದಸ್ಯರೊಂದಿಗೆ ಕುಟುಂಬ ಮಿಲನ ಕಾರ್ಯಕ್ರಮವನ್ನು ಕೊಲ್ಯ ಘಟಕವು ಮಹತ್ವಪೂರ್ಣವಾಗಿ ಆಯೋಜಿಸಿ ಸರ್ವ ಆಶ್ರಮ ವಾಸಿಗಳಿಗೆ ಮುದ ನೀಡಿದೆವು,ಘಟಕದ ವತಿಯಿಂದ ಆಶ್ರಮದಲ್ಲಿ ಈ ದಿನದ ಊಟದ ವ್ಯವಸ್ಥೆಗೆ ಪ್ರಾಯೋಜಕತ್ವವನ್ನು ನೆರವೇರಿಸಿ ಆಶ್ರಮದ ಹಿರಿಯರಿಗೆ ಹಾಗೂ ಮಕ್ಕಳಿಗೆ ದಿನಬಳಕೆಯ ಕೆಲವೊಂದು ಸಾಮಾಗ್ರಿಗಳನ್ನು ಉಚಿತವಾಗಿ ನೀಡಿ ಪುಣ್ಯದ ಕಾರ್ಯವನ್ನು ನಾವೆಲ್ಲ ಒಟ್ಟಾಗಿ ನೆರವೇರಿಸಿದೆವು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!