ವೈದ್ಯಕೀಯ ಶಿಬಿರ

ಉಚಿತ ವೈದ್ಯಕೀಯ ಶಿಬಿರವು ಹಳ್ಳಿಯ ಜನರ ಅತ್ಯುತ್ತಮ ಸಮಾಜ ಸೇವೆ : ಸುಚರಿತ ಶೆಟ್ಟಿ

ಮೂಡಬಿದ್ರೆ: ಹಳ್ಳಿ ಪ್ರದೇಶದಲ್ಲಿ ಬಡಜನರಿಗೆ ಆರೋಗ್ಯ ತಪಾಸಣಾ ಶಿಬಿರದಿಂದ ಬಹಳಷ್ಟು ಪ್ರಯೋಜನ ಸಿಗಲಿದ್ದು, ಯುವವಾಹಿನಿ ಹಾಗೂ ಇತರ ಸಂಸ್ಥೆಗಳು ಸೇರಿಕೊಂಡು ನಡೆಸುವ ಈ ಶಿಬಿರವು ಅತ್ಯುತ್ತಮ ಸಮಾಜಸೇವೆಯ ಭಾಗವಾಗಿದ್ದು, ಪ್ರತಿಯೊಬ್ಬರು ಇದರ ಪ್ರಯೋಜನ ಪಡೆಯಂತಾಗಲಿ ಎಂದು ಯುವವಾಹಿನಿ(ರಿ.) ಮೂಡಬಿದ್ರೆ ಘಟಕದ ವತಿಯಿಂದ ಹಾಗೂ ಶ್ರೀಶಾ ಸೌಹಾರ್ದ ಸಹಕಾರಿ ಸೊಸೈಟಿ ಮಂಗಳೂರು, ಜೆಸಿಐ ಭಾರ್ಗವ ಮುಂಡ್ಕೂರು, ಬಿಲ್ಲವ ಸಂಘ ಕಡಂದಲೆ – ಪಾಲಡ್ಕ, ಶ್ರೀ ನಾರಾಯಣ ಗುರು ಭಜನಾ ಮಂಡಳಿ ಕಡಂದಲೆ – ಪಾಲಡ್ಕ, ಶ್ರೀ ಸತ್ಯಸಾಯಿ ಬಾಲ ವಿಕಾಸ ಕೇಂದ್ರ ಮಂಗಳೂರು, ಹಾಲು ಉತ್ಪಾದಕರ ಸಹಕಾರ ಸಂಘ ಕದಂದಲೆ , ಇವರ ಸಹಕಾರದೊಂದಿಗೆ, ಕೆ.ಎಂ.ಸಿ ಆಸ್ಪತ್ರೆ ವೈದ್ಯರ ತಂಡ ಹಾಗೂ ಏನೇಪೋಯ ದಂತ ವೈದ್ಯಕೀಯ ಆಸ್ಪತ್ರೆಯ ವೈದ್ಯರ ತಂಡದಿಂದ ನಡೆದ ಉಚಿತ ವೈದ್ಯಕೀಯ ಶಿಬಿರ, ಉಚಿತ ಕಣ್ಣಿನ ತಪಾಸಣೆ, ಉಚಿತ ದಂತ ಚಿಕಿತ್ಸೆ ಶಿಬಿರ ಕಾರ್ಯಕ್ರಮ ಉದ್ಘಾಟಿಸಿದ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಸುಚರಿತ ಶೆಟ್ಟಿ ದೀಪ ಬೆಳಗಿಸಿ ನುಡಿದರು.

ಬಿಲ್ಲವ ಸಂಘ ಕಡಂದಲೆ – ಪಾಲಡ್ಕ ಇಲ್ಲಿಯ ಸಭಾಭವನದಲ್ಲಿ 07-06-2024 ರಂದು ನಡೆದ ಕಾರ್ಯಕ್ರಮ ಅಧ್ಯಕ್ಷತೆಯನ್ನು ಯುವವಾಹಿನಿ(ರಿ.) ಮೂಡಬಿದ್ರೆ ಘಟಕದ ಅಧ್ಯಕ್ಷರಾದ ಶಂಕರ್ ಕೋಟ್ಯಾನ್ ವಹಿಸಿದ್ದರು.
ಸಭಾ ವೇದಿಕೆಯಲ್ಲಿ ಬಿಲ್ಲವ ಸಂಘದ ಅಧ್ಯಕ್ಷ ಲೀಲಾದರ ಪೂಜಾರಿ ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ, ಶ್ರೀಶಾ ಸೌಹಾರ್ದ ಸಹಕಾರಿ ಸೊಸೈಟಿ ಮಂಗಳೂರು ಇಲ್ಲಿಯ ಸುರೇಶ್, ಕೆಎಂಸಿ ಆಸ್ಪತ್ರೆಯ ಡಾ. ಪ್ರೇರಣಾ, ಏನೋಪೋಯ ದಂತ ಚಿಕಿತ್ಸಾಲಯದ ಡಾ. ಅಲ್ಫಿಯಾ , ಎಂ ಎಸ್ ಗುರುರಾಜ್ ಅಧ್ಯಕ್ಷರು ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ಶ್ರೀ ನಾರಾಯಣ ಗುರು ಭಜನಾ ಮಂಡಳಿ ಕಡಂದಲೆ – ಪಾಲಡ್ಕ ಇದರ ಸಂಚಾಲಕರಾದ ಶಿವರಾಂ, ಘಟಕದ ಆರೋಗ್ಯ ನಿರ್ದೇಶಕಿ ಅನಿತಾ ಮುಂಡ್ರೋಟ್ಟು, ಶ್ರೀ ಭರತ್ ಸಂಪರ್ಕ ಅಧಿಕಾರಿ ಏನೋಪೋಯ ಡೆಂಟಲ್ ಕಾಲೇಜ್ ಮಂಗಳೂರು, ವೇದಿಕೆಯಲ್ಲಿ ಉಪಸ್ಥಿತಿರಿದ್ದರು.

ಶಿಬಿರದಲ್ಲಿ ಒಟ್ಟು 225 ಮಂದಿ ಭಾಗವಹಿಸಿದ್ದರು. 183 ಜನರಿಗೆ ಸಾಮಾನ್ಯ ತಪಾಸಣೆ ನಡೆಸಿ, 42 ಮಂದಿ ಉಚಿತ ದಂತ ಚಿಕಿತ್ಸೆ ಪಡೆದುಕೊಂಡರು. ಒಟ್ಟು 43 ಶಿಬಿರಾರ್ಥಿಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆ ಮಂಗಳೂರು ಇಲ್ಲಿಗೆ ಶಿಫಾರಸು ಮಾಡಲಾಯಿತು. ಸಾಮಾನ್ಯ ಕಾಯಿಲೆ ಇದ್ದ 43 ಮಂದಿಗೆ ಚಿಕಿತ್ಸೆ ನಡೆಸಿ ಉಚಿತವಾಗಿ ಔಷಧ ನೀಡಲಾಯಿತು.
ಯುವವಾಹಿನಿ(ರಿ.) ಮೂಡಬಿದ್ರೆ ಘಟಕದ ಮಾಜಿ ಅಧ್ಯಕ್ಷರಾದ ಹರಿಪ್ರಸಾದ್ .ಪಿ. ಸ್ವಾಗತಿಸಿದರು, ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ನವಾನಂದ, ಪ್ರಥಮ ಉಪಾಧ್ಯಕ್ಷ ಮುರಳೀಧರ ಕೋಟ್ಯಾನ್ , ಪ್ರಚಾರ ನಿರ್ದೇಶಕ ಆದರ್ಶ್ ಸುವರ್ಣ ಮೊದಲಾದವರು ಉಪಸ್ಥಿತಿರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!