ಯುವವಾಹಿನಿ (ರಿ) ಮಂಗಳೂರು ಘಟಕ

ಉನ್ನತವಾದ ಮೂರು ಪ್ರವಾಸಗಳು

ದಿನಾಂಕ 05.09.2019 ರಿಂದ 12.09.2019 ರವರೆಗೆ ಮಂಗಳೂರು ಘಟಕದ 36 ಜನರ ತಂಡವು ತಮ್ಮ ಬಂಧುಗಳೊಂದಿಗೆ ಗುಜರಾತ್ ಪ್ರವಾಸ ಕೈಗೊಂಡಿತ್ತು. ಈ ಪ್ರವಾಸದಿಂದ ಪ್ರೇರೆಪಿತಗೊಂಡ ನಮ್ಮ ಘಟಕದ ಎರಡನೇ ತಂಡವು 43 ಜನರ ಬಂಧುಗಳೊಂದಿಗೆ ದಿನಾಂಕ 10.10.2019 ರಿಂದ 17.10.2019 ರವರೆಗೆ ಗುಜರಾತ್ ಪ್ರವಾಸ ವನ್ನು ಹಮ್ಮಿಕೊಂಡಿತ್ತು. ಈ ಎರಡು ತಂಡಗಳು ಗುಜರಾತಿನಲ್ಲಿರುವ ದ್ವಾರಕ ಮಂದಿರ, ಬೆಟ್ ದ್ವಾರಕ, ರುಕ್ಕ್ಮಿನಿ ಮಾತಾ ಮಂದಿರ, ನಾಗೇಶ್ವರ ಜೋತರ್ಲಿಂಗ, ಗೋಪಿತಲಾಬ್, ಕೃಷ್ಣ ಸುಧಾಮ ದೇವಸ್ಥಾನ, ಸೋಮಾನಾಥ ಜೋತಿರ್‍ಲಿಂಗ, ಅಹಮದಾಬಾಧ್ ನಗರ, ಸಬರಮತಿ ಅಶ್ರಮ, ಅಕ್ಷರಧಾಮ, Statue of unity ಸರದಾರವಲ್ಲಭಾಯಿ ಪಾಟೇಲ್ ಬ್ರಹತ್ ಮೂರ್ತಿ, ವಡೋದರ ಮುಂತಾದ ಪ್ರೇಕ್ಷಣೀಯ ಸ್ಥಳಗಳನ್ನು ಸಂದರ್ಶಿಸಿ ಮರಳಿದೆ. ಸುಮಾರು 7 ದಿವಸದ ಪ್ರವಾಸದಲ್ಲಿ
ಸ್ಲಿಪರ್ ಕೋಚ್ ರೈಲ್, ಹವಾನಿಯಾಂತ್ರಿತ ಬಸ್ಸ್, ಹವಾನಿಯಾಂತ್ರಿತ ರೂಮ್‍ಗಳು, ಉತ್ತರ ಮತ್ತು ದಕ್ಷಿಣ ಭಾರತೀಯ ತಿಂಡಿ ಹಾಗೂ ಊಟದ ವ್ಯವಸ್ಥೆಯು ಎಲ್ಲಾ ಪ್ರವಾಸಿಗರ ಮೆಚ್ಚುಗೆಗೆ ಪಾತ್ರವಾಯಿತು. ಪ್ರವಾಸ ಸಂಚಾಲಕರಾದ
ಹರೀಶ್. ಕೆ. ಪೂಜಾರಿಯವರ ಕಾರ್ಯತತ್ಪರತೆ, ಅಧ್ಯಕ್ಷರಾದ ಕೆ.ಅರ್.ಲಕ್ಷ್ಮೀ ನಾರಾಯಣ ಹಾಗೂ ಮಾಜಿ ಅಧ್ಯಕ್ಷರಾದ ಸುನೀಲ್ ಕೆ. ಅಂಚನ್ ರವರ ಸಹಕಾರದೊಂದಿಗೆ ಪ್ರವಾಸವು ಅತ್ಯಂತ ಯಶಸ್ವಿಯಾಗಿದೆ.
ಘಟಕವು ಏರ್ಪಡಿಸಿರುವ ಔತಣ ಕೂಟದಲ್ಲಿ ಎಲ್ಲಾ ಪ್ರವಾಸಿಗರು ಅತ್ಯಂತ ಉತ್ಸಾಹದಿಂದ ಬಾಗವಹಿಸಿ ತಮ್ಮ ಅನಿಸಿಕೆ, ಅನುಭವಗಳನ್ನು ವ್ಯಕ್ತಪಡಿಸಿ ಧನ್ಯವಾದಗಳನ್ನು ಸಲ್ಲಿಸಿದರು ಹಾಗೂ ಯುವವಾಹಿನಿಯ ಶಿಸ್ತು, ಸಂಯಮ ಮತ್ತು ಸಮಯಪಾಲನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ದಿನಾಂಕ 20.10.2019 ರಂದು ನಮ್ಮ ಘಟಕವು 51 ಜನರ ತಂಡದೊಂದಿಗೆ ಒಂದು ದಿವಸದ ಜೋಗ ಪ್ರವಾಸ ಕೈಗೊಂಡಿತ್ತು.

ಬೆಳಿಗ್ಗೆ 6:00 ಗಂಟೆಗೆ ಯುವವಾಹಿನಿ ಸಭಾಂಗಣದಿಂದ ಹೊರಟು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಟಪಾಡಿ ಶ್ರೀ ವಿಶ್ವನಾಥ ದೇವಸ್ಥಾನ, ಬಂಗಾರಮಕ್ಕಿ ಶ್ರೀ ವಿರಾಂಜನೇಯ ದೇವಸ್ಥಾನ, ಜೋಗ ಜಲಪಾತ ವೀಕ್ಷಣೆ ಹಾಗೂ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಗಳನ್ನು ವೀಕ್ಷಿಸಿ ರಾತ್ರಿ 11.00 ಗಂಟೆಗೆ ತಲುಪಿರುತ್ತೇವೆ. ಕಟಪಾಡಿಯಲ್ಲಿ ಯುವವಾಹಿನಿ (ರಿ) ಕಟಪಾಡಿ ಘಟಕದ ಅಧ್ಯಕ್ಷರು ಮತ್ತು ಸದಸ್ಯರು ನಮ್ಮ ತಂಡವನ್ನು ಆತ್ಮೀಯವಾಗಿ ಸ್ವಾಗತಿಸಿ, ಶಾಲು ಹೊದಿಸಿ ಗೌರವಿಸಿದ್ದು, ಯುವವಾಹಿನಿಯ ಘಟಕಗಳ ಭಾಂದವ್ಯವನ್ನು ಎತ್ತಿ ತೋರಿಸುತ್ತಿತ್ತು. ಬಸ್ಸಿನಲ್ಲಿ ಹಾಡು, ಕುಣಿತ ಹರಟೆಯೊಟ್ಟಿಗೆ, ಎಲ್ಲಾ ಪ್ರವಾಸಿಗರಿಗೆ ಒಂದು ದಿನ ಕಳೆದಿದ್ದು ಗೊತ್ತೇ ಆಗಲಿಲ್ಲ, ಪ್ರವಾಸ ಸಂಚಾಲಕರಾದ ಸತೀಶ್ ಕುಮಾರ್ ಮತ್ತು ಸಹಕರಿಸಿದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಹಾಗೂ ಕಾರ್ಯದರ್ಶಿ ಗಣೇಶ್ ವಿ ರವರ ಸಂಘಟಿತ ಕಾರ್ಯ ವೈಖರಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!