ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನ : 2019

ಕಾವ್ಯ ಕುಂಚ ಗಾಯನದಲ್ಲರಳಿದ ವಿಶುಕುಮಾರ್ ವೇದಿಕೆ

ಮಂಗಳೂರು : ವೇದಿಕೆಯ ಮೇಲೆ ಮಾತು ಆರಂಭಿಸುತ್ತಿದ್ದಂತೆ ಸ್ವಲ್ಪ ಸಮಯದ ಕೂಡಲೇ ವಿಶುಕುಮಾರ್ ಬದುಕಿನ ಚಿತ್ರಣ ರೂಪುಗೊಳ್ಳುವಂತಿತ್ತು. ತಮ್ಮ ಕಾವ್ಯದ ಪದಗಳ ಜೋಡಣೆಯೊಡನೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಸಾಹಿತಿಯ ಜೀವನದ ಕಥೆಗೆ ಸಾಕ್ಷಿಯಾಗಿದ್ದರು..ಜೊತೆಗೆ ಮೇಳೈಸುವ ರಾಗಲಾಪದೊಡನೆ ಅಲ್ಲೇ ಬದಿಯಲ್ಲಿ ಶರವೇಗದಿ ಸಾಗುತ್ತಿದ್ದ ಚಿತ್ರ ಪಟಲ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿತ್ತು.

ಹೌದು,,ಇದು 2019 ಫೆಬ್ರವರಿ 17ರಂದು ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆದ ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನದ ಕಾವ್ಯ ಕುಂಚ ಗಾಯನದಲ್ಲಿ ವಿಶುಕುಮಾರ್ ಎಂಬ ವೇದಿಕೆಯ ಚಿತ್ರಣ..

ವೇದಿಕೆಯಲ್ಲಿ ಸಾಹಿತ್ಯಾಸಕ್ತರ ಸಂಗಮವಾಗಿತ್ತು. ಒಬ್ಬರಾದ ಮೇಲೆ ಮತ್ತೊಬ್ಬರು ಎಂಬಂತೆ ಐದು ಸಾಹಿತಿಗಳು ವಿಶುಕುಮಾರ್ ಕಾವ್ಯ ಚರಿತ್ರೆಗೆ ಸಾಕ್ಷಿಯಾಗಿದ್ದರು.. ವಿಜಯಲಕ್ಷ್ಮಿ ಕಟೀಲ್, ಪ್ರಮೀಳಾ ದೀಪಕ್, ಸುಮತಿ, ಯೋಗೀಶ್ ಕೈರೋಡಿ, ನರೇಶ್ ಕುಮಾರ್ ಸಸಿಹಿತ್ಲು ಇವರೆಲ್ಲರ ಅದ್ಭುತ ನೋಟದಲ್ಲಿ ವಿಶುಕುಮಾರ್ ಬದುಕು – ಬವಣೆಗಳೆಲ್ಲವೂ ಅಕ್ಷರ ರೂಪದಲ್ಲಿ ಬಿಂಬಿತವಾಗಿದ್ದವು.. ಇದಕ್ಕೆ ಸರಿಹೊಂದುವಂತೆ ಶ್ರುತಿ ಬದ್ಧ ನಾದಕ್ಕೆ ದನಿಯಾದವರು ಭಾಸ್ಕರ್ ರಾವ್ ಬಿಸಿರೋಡ್.. ನಾದ ಕಂಠ ಸಿರಿಗೆ ನೆರೆದಿದ್ದ ಜನಸ್ತೋಮ ತೂಗುತ್ತಿತ್ತು. ಅತೀವ ಆಸಕ್ತಿಯಿಂದ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದ ಸಾಹಿತ್ಯಾಭಿಮಾನಿಗಳ ದಂಡೇ ಇತ್ತು.. ಅಲ್ಲೇ ಪಕ್ಕದಲ್ಲಿ ಹಲವು ಬಣ್ಣಗಳನ್ನು ಹಿಡಿದುಕೊಂಡು, ಬೇಗ ಬೇಗನೆ ವರ್ಣಗಳಲ್ಲೇ ಚಿತ್ತಾರ ಬಿಡಿಸುತ್ತಿದ್ದ ಕಲೆಗಾರ.. ತನ್ನ ಕೈಚಳಕದಿಂದ ವಿಶುಕುಮಾರ್ ವ್ಯಕ್ತಿತ್ವವನ್ನು ವೇದಿಕೆ ಮೇಲೆ ತಂದಿಟ್ಟಿದ್ದರು.. ನೋಡುಗರೆಲ್ಲರೂ ಮೂಕವಿಸ್ಮಿತರಾಗಿದ್ದರು. ಈ ಕುಂಚಕ್ಕೆ ಕಾರಣರಾಗಿದ್ದು ಯುವ ಕಲಾವಿದ ದೀಪೇಶ್ ರಾಜ್..

ಹೀಗೆ ವೇದಿಕೆ ಮೇಲಿನ ಎಲ್ಲಾ ಕಲಾವಿದರು – ಸಾಹಿತ್ಯಾಸಕ್ತರು ಅಭೂತಪೂರ್ವ ಕ್ಷಣವೊಂದಕ್ಕೆ ಸಾಕ್ಷಿಯಾಗಿದ್ದರು. ಈ ಕಾರ್ಯಕ್ರಮವನ್ನು ಪ್ರಜ್ಞಾ ಬಿ ಓಡಿಲ್ನಾಳ ನಿರೂಪಿಸಿದರು..

ವರದಿ : ಪ್ರಜ್ಞಾ ಬಿ ಓಡಿಲ್ನಾಳ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!