ಯುವವಾಹಿನಿ (ರಿ.) ಮಾಣಿ ಘಟಕದ ಸ್ಪಂದನ ಯೋಜನೆಯ ವತಿಯಿಂದ

ಕಿಡ್ನಿ ವೈಫಲ್ಯ ಚಿಕಿತ್ಸೆಗೆ ನೆರವು

ಮಾಣಿ : ಕಳೆದೆರಡು ವರ್ಷಗಳಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಹಾಕಾಳಿ ಬೆಟ್ಟು , ಬರಿಮಾರು ಗ್ರಾಮದ ನಿವಾಸಿ ದಯಾನಂದ ಪೂಜಾರಿ ಇವರ ಚಿಕಿತ್ಸೆಗಾಗಿ ನಾರಾಯಣ ಗುರು ಸೇವಾ ಸಂಘ ಮಾಣಿ ಮತ್ತು ಯುವವಾಹಿನಿ (ರಿ.)ಮಾಣಿ ಘಟಕದ ಸ್ಪಂದನ ಯೋಜನೆಯ ವತಿಯಿಂದ ಜಂಟಿಯಾಗಿ ಹತ್ತು ಸಾವಿರ ಮೊತ್ತದ ಚೆಕ್ ನೀಡಲಾಯಿತು.ನಾರಾಯಣಗುರು ಸೇವಾ ಮಾಣಿ ಇದರ ಅಧ್ಯಕ್ಷರಾದ ನಾರಾಯಣ್ ಸಾಲ್ಯಾನ್, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ, ಉಪಾಧ್ಯಕ್ಷರು ರಮೇಶ್ ಮುಜಲ, ಬರಿಮಾರು ಗಾಂ.ಪಂ ಅಧ್ಯಕ್ಷರಾದ ವಸಂತ್ ಪೂಜಾರಿ ಮತ್ತು ಮಾಣಿ ಘಟಕದ ಸದಸ್ಯರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

ಎಲೆಕ್ಟ್ರಿಷಿಯನ್ ಆಗಿ ದಿನಕೆಲಸ ಮಾಡುತ್ತಿದ್ದ ದಯಾನಂದ್ ಅವರು ತಮ್ಮ ಮನೆಯ ಆಧಾರ ಸ್ತಂಭವಾಗಿ ಇದ್ದರು. ಆದರೆ ತಮ್ಮ ಎರಡೂ ಕಿಡ್ನಿಯ ವೈಫಲ್ಯದಿಂದ ಇದೀಗ ಕೆಲಸಕ್ಕೂ ಹೋಗಲು ಆಗದೆ ಕಷ್ಟವನ್ನು ಅನುಭವಿಸುತ್ತಿದ್ದಾರೆ. ತಂದೆ ತಾಯಿಗೆ ಒಬ್ಬನೇ ಮಗನಾಗಿ ಸಂಸಾರ ನಡೆಸುತ್ತಿದ್ದ ಇವರು ಕಳೆದ ಐದು ವರ್ಷಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟು 4 ವರ್ಷದ ಮಗುವನ್ನು ಹೊಂದಿರುತ್ತಾರೆ. ತಂದೆ ತಾಯಿಯ ಅನಾರೋಗ್ಯದೊಂದಿಗೆ ತಮ್ಮ ಈ ಕಿಡ್ನಿ ವೈಫಲ್ಯದ ಬಗ್ಗೆ ತೀವ್ರ ಮನನೊಂದಿರುವ ಈ ಕುಟುಂಬಕ್ಕೆ ಸಹಾಯ ಮಾಡುವ ಕರ್ತವ್ಯ ಈಗ ಸಮಾಜದ್ದಾಗಿದೆ.
ತನ್ನ ಗಂಡನ ಎರಡೂ ಕಿಡ್ನಿಯ ವೈಫಲ್ಯದಿಂದ ನೊಂದಿರುವ ಅವರ ಧರ್ಮಪತ್ನಿ ತನ್ನ ಒಂದು ಕಿಡ್ನಿಯನ್ನು ನೀಡಲು ಮುಂದಾಗಿರುತ್ತಾರೆ. ಆದರೆ ಈ ಕಿಡ್ನಿ ವರ್ಗಾವಣೆಗೆ ಸುಮಾರು ಹತ್ತು ಲಕ್ಷಕ್ಕಿಂತಲೂ ಅಧಿಕ ಹಣ ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿರುವುದರಿಂದ ಸಹೃದಯ ದಾನಿಗಳ ನೆರವನ್ನು ಈ ಬಡ ಕುಟುಂಬದ ನಿರೀಕ್ಷಿಸುತ್ತದೆ.

ಎರಡೂ ಕಿಡ್ನಿ ವೈಫಲ್ಯದಿಂದ ವಾರಕ್ಕೆ ಎರಡು ಬಾರಿ ಡಯಾಲಿಸಿಸ್ ಹಾಗೂ ಔಷಧಿಯ ಹಣಕ್ಕೆ ತುಂಬಾ ಕಷ್ಟ ಪಡುತ್ತಿದ್ದ ಕುಟುಂಬಕ್ಕೆ ಬರಿಮಾರು ಊರಿನ ಜನರು ಸಾಕಷ್ಟು ಸಹಾಯ ಮಾಡಿರುತ್ತಾರೆ, ಆದರೆ ಚಿಕಿತ್ಸೆಗೆ ಹತ್ತು ಲಕ್ಷಕ್ಕೂ ಅಧಿಕ ಹಣ ಬೇಕಾಗಿರುವುದರಿಂದ ಸಮಾಜದ ಜನರು ಹೆಚ್ಚಿನ ಸಹಾಯ ಮಾಡಬೇಕಾಗಿ ವಿನಂತಿ.
ದಾನಿಗಳು ಆರ್ಥಿಕ ಸಹಾಯ ಮಾಡಿದರೆ ಅವರ ಧರ್ಮಪತ್ನಿಯ ಒಂದು ಕಿಡ್ನಿಯನ್ನಾದರೂ ಜೋಡಣೆ ಮಾಡಿಸಿ ಅವರ ಮತ್ತು ಅವರ ಕುಟುಂಬದ ಜೀವನ ನಿರ್ವಹಣೆ ಮಾಡಲು ದಯಾನಂದ್ ಅವರನ್ನು ಶಕ್ತರನ್ನಾಗಿಸಬಹುದು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!