ಯುವವಾಹಿನಿ(ರಿ) ಕೂಳೂರು ಘಟಕ

ಕೂಳೂರು ಘಟಕದಿಂದ ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 14-1-2017 ರಂದು ಕೂಳೂರಿನ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಸುವರ್ಣ ಆರೋಗ್ಯಕ್ಕೆ ಸುರಕ್ಷಾ ಯೋಜನೆಗಳು ಎಂಬ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸಂಯೋಜಕರಾದ ಜಗನ್ನಾಥ್ ಶಿರ್ಲಾಲ್‌ರವರು ಆರೋಗ್ಯ ಸುರಕ್ಷಾ ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡಿದರು.

ಸರಕಾರದಿಂದ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಸುರಕ್ಷಾ ಯೋಜನೆಗಳಿದ್ದು, ಆಯೋಜನೆಗಳ ಬಗ್ಗೆ ಸರಿಯಾದ ಮಾಹಿತಿಯನ್ನು ಜನರು ಪಡೆದುಕೊಂಡು ಅದರ ಸದುಪಯೋಗ ಮಾಡಬೇಕೆಂದು ತಿಳಿಸಿದರು. ಮೊದಲನೆಯದಾಗಿ:

ವಾಜಪೇಯಿ ಸುರಕ್ಷಾ ಯೋಜನೆ: ಇದು ಬಿಪಿಎಲ್ ಕಾರ್ಡ್ ಸದಸ್ಯರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದು. ತೃತೀಯ ಹಂತದ ಕಾಯಿಲೆಯಾದ ಹೃದಯ ರೋಗ, ಕ್ಯಾನ್ಸರ್, ಬ್ರೈನ್ ಟ್ಯೂಮರ್, ಸುಟ್ಟ ಗಾಯ ಕಿಡ್ನಿ, ಸ್ಟೋನ್ ಮುಂತಾದ ಅನಾರೋಗ್ಯಕ್ಕೆ ಒಳಪಟ್ಟವರು ಇದರ ಉಪಯೋಗ ಪಡೆಯಬಹುದೆಂಬ ಮಾಹಿತಿಯನ್ನು ತಿಳಿಸಿದರು.

ರಾಜೀವ್ ಆರೋಗ್ಯ ಭಾಗ್ಯ: ಇದು ಎಪಿಎಲ್ ಕಾರ್ಡು ಇರುವವರಿಗೂ ಕೂಡ ಅನ್ವಯಿಸುತ್ತದೆ. ಇದರ ಪ್ರಕಾರ 70% ಸರಕಾರವು ಪಾವತಿಸುತ್ತದೆ ಹಾಗೂ 30% ಮನೆಯವರು ಪಾವತಿಸಬೇಕಾಗುತ್ತದೆ.

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆ: ಇದು 0-18  ವರ್ಷದ ಒಳಗಿನ ಮಕ್ಕಳಿಗೆ ಈ ಯೋಜನೆಯು ಉಪಯೋಗವಾಗುತ್ತದೆ.

ಮುಖ್ಯಮಂತ್ರಿ ಸಾಂತ್ವನ ಹರೀಶ್ ಯೋಜನೆ: ಅಪಘಾತಕ್ಕೆ ಒಳಪಟ್ಟವರಿಗೆ 25,000/- ರೂಪಾಯಿಯವರೆಗೆ ಉಚಿತ ಚಿಕಿತ್ಸೆ.

ಇಂದಿರಾ ಸುರಕ್ಷಾ ಯೋಜನೆ: ರೈತರಿಗೆ ಅನ್ವಯಿಸುತ್ತದೆ.

ರಾಷ್ಟ್ರೀಯ ಸೇವಾಭೀಮಾ ಯೋಜನೆ (RSBY): ಅಸಂಘಟಿತ ಕಾರ್ಮಿಕರಿಗೆ ರೂ. 30,000/- ವರೆಗೆ ಇದರ ಉಪಯೋಗ.

ಹಿರಿಯ ನಾಗರಿಕ ರಾಷ್ಟ್ರೀಯ ಸೇವಾ ಭೀಮಾ ಯೋಜನೆ: 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಈ ಸುರಕ್ಷಾ ಯೋಜನೆಯ ಉಪಯೋಗ ಪಡೆದುಕೊಳ್ಳಬಹುದು.

ಜ್ಯೋತಿ ಸಂಜೀವಿನಿ ಭಾಗ್ಯ.

ಯಶಸ್ವಿನಿ ಯೋಜನೆ: ಹಾಲು ಉತ್ಪಾದಕ ಸಂಘ ಹಾಗೂ ಸಹಕಾರಿ ಸೇವಾ ಸಂಘದ ಸದಸ್ಯರಿಗೆ

ಟಾಕ್ ಕ್ಲಿಯರ್ ಸುರಕ್ಷಾ ಯೋಜನೆ: 6 ತಿಂಗಳಿನಿಂದ 8 ವರ್ಷದ ಒಳಗಿನ ಕಿವುಡ ಮಕ್ಕಳಿಗೆ ಈ ಯೋಜನೆ ಅನ್ವಯಿಸುತ್ತದೆ.

ಹೀಗೆ ಒಟ್ಟು 10 ಸುರಕ್ಷಾ ಯೋಜನೆಗಳ ಬಗ್ಗೆ ತಿಳಿಸಿ ಇದು ಮಂಗಳೂರಿನ ಯಾವೆಲ್ಲಾ ಆಸ್ಪತ್ರೆಗೆ ಅನ್ವಯಿಸುತ್ತದೆ ಎಂಬ ಮಾಹಿತಿಯನ್ನು ಸಭೆಗೆ ತಿಳಿಸಿದರು. ಅಧ್ಯಕ್ಷ ಸುಜಿತ್‌ರಾಜ್ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಶ್ರೀಮತಿ ಪವಿತ್ರ ಅಂಚನ್‌ರವರು ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!