ಯುವವಾಹಿನಿ (ರಿ) ಕೂಳೂರು ಘಟಕ

ಕೌಟುಂಬಿಕ ಸಾಮರಸ್ಯ, ಸತತ ಪ್ರಯತ್ನ ,ಇಚ್ಛಾಶಕ್ತಿ, ಇವೇ ಯುವವಾಹಿನಿ ಸಾಧನೆಯ ಹಿಂದಿರುವ ಶಕ್ತಿ :- ಸಂಕಮಾರ್

ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಗೌರವಾಧ್ಯಕ್ಷರಾದ ರಾಘವೇಂದ್ರ ಕೂಳೂರು ಉದ್ಘಾಟಿಸುತ್ತಿರುವುದು

ಕೌಟುಂಬಿಕ ಸಾಮರಸ್ಯ,ಇಚ್ಛಾಶಕ್ತಿ, ಆತ್ಮ ಶಕ್ತಿ, ಸತತ ಪ್ರಯತ್ನ, ಇವೇ ಯುವವಾಹಿನಿಯ ಸಾಧನೆಯ ಹಿಂದಿರುವ ಶಕ್ತಿ, ಕೇವಲ 9 ತಿಂಗಳಲ್ಲಿ ಮೌಲ್ಯಯುತ 24 ಕಾರ್ಯಕ್ರಮಗಳನ್ನು ನೀಡಿದ ಕೂಳೂರು ಯುವವಾಹಿನಿ ಘಟಕವು ಯುವ ಜನಾಂಗಕ್ಕೆ ಮಾದರಿಯಾಗಿದೆ, ಕ್ರಿಯಾಶೀಲ ಯೋಜನೆ ಯೋಚನೆಗಳಿಂದ ಕೂಡಿದ ಅಂತರಾಷ್ಟ್ರೀಯ ಸಂಸ್ಥೆ ಗೆ ಸರಿಸಮನಾಗಿರುವ ಪದಗ್ರಹಣ ಸಮಾರಂಭವು ಸರ್ವರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕರಾದ ಡಾ.ಗಣೇಶ್ ಅಮೀನ್ ಸಂಕಮಾರ್ ಅಭಿಪ್ರಾಯ ಪಟ್ಟರು.
ಅವರು ದಿನಾಂಕ 25.06.2017ನೇ ಆದಿತ್ಯವಾರ ಕೂಳೂರು ಚರ್ಚ್ ಹಾಲ್ ನಲ್ಲಿ ಜರುಗಿದ ಯುವವಾಹಿನಿ (ರಿ) ಕೂಳೂರು ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

 ಯುವವಾಹಿನಿ (ರಿ) ಕೂಳೂರು ಘಟಕದ ಸದಸ್ಯರು

ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಗೌರವಾಧ್ಯಕ್ಷರಾದ ರಾಘವೇಂದ್ರ ಕೂಳೂರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ರಾಜ್ಯ ಬಿ.ಜೆ.ಪಿ.ಮಹಿಳಾ ಮೋರ್ಚಾದ ಕಾರ್ಯದರ್ಶಿ ಯಾದ ಶ್ರೀಮತಿ ಗೀತಾಂಜಲಿ ಸುವರ್ಣ ಅವರು ಶ್ರೀಮತಿ ರೇಣುಕಾ ಪ್ರಸಾದ್ ಸಂಪಾದಕೀಯದಲ್ಲಿ ಮೂಡಿ ಬಂದ ಯುವವಾಹಿನಿ ಕೂಳೂರು ಘಟಕದ ಸಾಧನೆಯನ್ನು ಒಳಗೊಂಡ ವಿಶೇಷ ಪುರವಣಿ ಮಾತೃ ಸ್ಪರ್ಶ -2017 ಬಿಡುಗಡೆಗೊಳಿಸಿದರು.

ಯುವವಾಹಿನಿ ಕೂಳೂರು ಘಟಕದ ಮಾತೃ ಸಂಸ್ಥೆ ಕೂಳೂರು ಬ್ರಹ್ಮ ಶ್ರೀ ನಾರಾಯಣಗುರು ಸೇವಾ ಮಂದಿರ ಪದಾಧಿಕಾರಿಗಳ ನಿರಂತರ ಸಹಕಾರ, ಸ್ಥಳಾವಕಾಶ, ಪ್ರೋತ್ಸಾಹ ಸ್ಮರಿಸಿ ರೂ.16,000/- ಬೆಲೆಯ ದ್ವನಿವರ್ದಕವನ್ನು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಅಧ್ಯಕ್ಷರಾದ ಜಯಾನಂದ ಅಮೀನ್ ಪುನ್ಕೆಮಾರ್ ಇವರಿಗೆ ಹಸ್ತಾಂತರಿಸಲಾಯಿತು.

 

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಯುವವಾಹಿನಿ ಕೂಳೂರು ಘಟಕದ ಸ್ಥಾಪಕ ಅಧ್ಯಕ್ಷರಾದ ಸುಜಿತ್ ರಾಜ್ ಕಳೆದ ಒಂದು ವರ್ಷದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಸ್ಮರಣಿಕೆ ನೀಡಿ ಗೌರವಿಸಿದರು.ಯುವವಾಹಿನಿ ಕೂಳೂರು ಘಟಕದ 2017-18 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಪ್ರಮಾಣ ವಚನ ಬೋಧಿಸಿದರು. ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಪ್ರದಾನ ಕಾರ್ಯದರ್ಶಿ ಸದಾಶಿವ ಬಿ.ಸುವರ್ಣ,ಪಂಜಿಮೊಗರು ಉರುಂದಾಡಿ ಗೋಪಾಲಕೃಷ್ಣ ಭಜನಾ ಮಂದಿರದ ಅಧ್ಯಕ್ಷರಾದ ಗಿರಿಧರ ಸನಿಲ್,ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಅಧ್ಯಕ್ಷರಾದ ಸಂಜೀವ ಪೂಜಾರಿ, ಯುವವಾಹಿನಿ ಮಂಗಳೂರು ತಾಲೂಕು ಸಂಘಟನಾ ಕಾರ್ಯದರ್ಶಿ ಹರೀಶ್ ಕೆ.ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಈ ಸಂದರ್ಭಗಳಲ್ಲಿ ವಾರ್ಷಿಕ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಯುವವಾಹಿನಿ ಕೂಳೂರು ಘಟಕದ ಕಾರ್ಯದರ್ಶಿ ದೀಕ್ಷಿತ್ ಸಿ.ಎಸ್.ಪೂಜಾರಿ 2016-17 ನೇ ಸಾಲಿನ ವಾರ್ಷಿಕ
ವರದಿ ಮಂಡಿಸಿದರು.ಶ್ರೀಮತಿ ನಯನಾ ಹಾಗೂ ಶ್ರೀಮತಿ ಮಧುಶ್ರೀ ಪ್ರಾರ್ಥಿಸಿದರು.ನೂತನ ಕಾರ್ಯದರ್ಶಿ ವಿನೀತ್ ಪೂಜಾರಿ ಧನ್ಯವಾದ ನೀಡಿದರು. ಪವಿತ್ರಾ ಅಂಚನ್,ಪ್ರತೀಶ್,ಗೌರೀಶ್ ಕಾರ್ಯಕ್ರಮ ನಿರ್ವಹಿಸಿದರು

ವರದಿ : ವಿನೀತ್ ಪೂಜಾರಿ ,ಕಾರ್ಯದರ್ಶಿ ಯುವವಾಹಿನಿ (ರಿ )  ಕೂಳೂರು ಘಟಕ

2 thoughts on “ಕೌಟುಂಬಿಕ ಸಾಮರಸ್ಯ, ಸತತ ಪ್ರಯತ್ನ ,ಇಚ್ಛಾಶಕ್ತಿ, ಇವೇ ಯುವವಾಹಿನಿ ಸಾಧನೆಯ ಹಿಂದಿರುವ ಶಕ್ತಿ :- ಸಂಕಮಾರ್

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!