ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು

ಗಂಗಾಧರ ಪೂಜಾರಿ – ಅಧ್ಯಕ್ಷರು -1991-92

ಯುವವಾಹಿನಿಯ ಆರಂಭಿಕ ವರ್ಷಗಳಲ್ಲಿ ಸಕ್ರಿಯ ಸಂಘಟಕರಲ್ಲಿ ಓರ್ವರಾದ ಶ್ರೀ ಗಂಗಾಧರ ಪೂಜಾರಿಯವರು ಯುವವಾಹಿನಿ ಮಂಗಳೂರು ಘಟಕದ ಸದಸ್ಯರಾಗಿದ್ದು 1989 ರಲ್ಲಿ ಘಟಕದ ದ್ವಿತೀಯ ಅಧ್ಯಕ್ಷರಾಗಿದ್ದು 1991-1992 ರಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದರು. ಇವರ ಅವಧಿಯಲ್ಲಿ ಯುವವಾಹಿನಿ ಪಣಂಬೂರು ಘಟಕವು ಪ್ರಾರಂಭವಾಯಿತು.

ಬಿ.ಕಾಂ. ಪದವೀದರರಾಗಿರುವ ಶ್ರೀ ಗಂಗಾಧರ ಪೂಜಾರಿಯವರು ಮಂಗಳೂರಿನ ಸರಕಾರಿ ಕಾಲೇಜಿನ ವಾಲಿಬಾಲ್ ತಂಡದ ಸದಸ್ಯರು. N.C.C. ಯ AIRWING ವಿಭಾಗದ ’B’ ಸರ್ಟಿಫಿಕೇಟ್ ಪಡೆದವರು. 1974-75 ರಲ್ಲಿ NCC, AIRWING ಯ ರಾಷ್ಟ್ರಮಟ್ಟದ ಶಿಬಿರ ಕಾಶ್ಮೀರದಲ್ಲಿ ನಡೆದಾಗ ಅವಿಭಜಿತ ದ.ಕ. ಜಿಲ್ಲೆಯಿಂದ ಭಾಗವಹಿಸಿದ ಏಕೈಕ ವಿದ್ಯಾರ್ಥಿ.

ಓರ್ವ ಸ್ವ ಉದ್ಯೋಗಿಯಾಗಿದ್ದು ಆರಂಭದಲ್ಲಿ ಟೆಲಿಫೋನ್ ಬೂತ್, ಮಿಲ್ಕ್ ಬೂತ್, ನಡೆಸುತ್ತಾ ಸಮಾಜ ಸೇವಕರಾಗಿ ಸಾರ್ವಜನಿಕ ಸೇವೆಗಳ ಪರ ದುಡಿಯುತ್ತಾ ಬಂದು ಪ್ರಸಕ್ತ ಕುಂಟಿಕಾನದಲ್ಲಿ ಒಂದು ಜನರಲ್ ಸ್ಟೋರನ್ನು ನಡೆಸುತ್ತಿದ್ದಾರೆ. ಸಮಾಜ ಸೇವಕರಾಗಿ ನಿರಂತರ ಜನರ ಸೇವೆಯನ್ನು ಮಾಡುತ್ತಾ ಬಂದಿರುವ ಶ್ರೀಯುತರು ತಮ್ಮ ಯುವವಾಹಿನಿ ಅಧ್ಯಕ್ಷತೆಯ ಸಾಲಿನಲ್ಲಿ ದೇರೆಬೈಲು ಕೊಂಚಾಡಿ ಪರಿಸರದ ಬಿಲ್ಲವ ಸಮಾಜದ ಜನಗಣತಿ ನಡೆಸಿ ಜನಾಂಗದ ಸ್ಥಿತಿಗತಿಗಳನ್ನು ಅರಿಯುವ ಪ್ರಯತ್ನ ನಡೆಸಿದರು ಮಾತ್ರವಲ್ಲದೆ ಸಮಾಜದ ಬಡಜನರಿಗೆ ಸರಕಾರದ ಮತ್ತು ಸಂಘ ಸಂಸ್ಥೆಗಳಿಂದ ಸಹಾಯವನ್ನು ದೊರಕಿಸಿಕೊಟ್ಟಿರುತ್ತಾರೆ.

1992 ರಿಂದ 1995 ರ ತನಕ ಮೂರ್ತೆದಾರರ ಸೇವಾ ಸಹಕಾರ ಸಂಘ(ರಿ) ದೇರೆಬೈಲು ಕೊಂಚಾಡಿ ಇದರ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಪ್ರಸಕ್ತ ದೇರೆಬೈಲು ಕೊಂಚಾಡಿ ಶ್ರೀ ಮಹಾಕಾಳಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಹಾಗೂ ಸುರತ್ಕಲ್ ಬ್ಲಾಕ್ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದಾರೆ.

ಪತ್ನಿ ಶ್ರೀಮತಿ ಆಶಾ ಗಂಗಾಧರ್ ಪೂಜಾರಿ ಗೃಹಿಣಿ, ಮಗ ಧನುಷ್ ಇಂಜಿನಿಯರಿಂಗ್ ವಿದ್ಯಾರ್ಥಿ. 1999 ರಿಂದ 2012 ರ ತನಕ 6 ಬಾರಿ ಕಾಶ್ಮೀರ ಕಣಿವೆಯಲ್ಲಿರುವ ಶ್ರೀ ಅಮರನಾಥ ಗುಹಾದರ್ಶನ ಹಾಗೂ ಶ್ರೀ ಮಾತಾ ವೈಷ್ಣೋದೇವಿ ದರ್ಶನ ಮಾಡಿರುತ್ತಾರೆ.

ವಿಳಾಸ : ’ಶ್ರೀ ರಾಮಕೃಪ’ ದೇರೆಬೈಲು, ಕೊಂಚಾಡಿ ಅಂಚೆ, ಮಂಗಳೂರು-575008
ದೂರವಾಣಿ: 0824- 2246166, 9449334244

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!