ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಗುರುನಮನ

ಗುರುಗಳು ಸ್ವಾಭಿಮಾನದ ಸಂಕೇತ : ಅತ್ರಾಡಿ ಅಮೃತ ಶೆಟ್ಟಿ

ಬೆಳ್ತಂಗಡಿ: ನಾರಾಯಣ ಗುರುಗಳು ಸಾಮಾಜಿಕವಾಗಿ ಹಿಂದುಳಿದವರ ಸ್ವಾಭಿಮಾನದ ಸಂಕೇತವಾಗಿದ್ದರೆ. ಅವರ ಉದ್ದೇಶ ಸಾಮಾಜಿಕ ಸೇವೆಯಾಗದೆ ಸಾಮಾಜಿಕ ಪರಿವರ್ತನೆಯಾಗಿತ್ತು. ಎಂದು ಚಿಂತಕಿ ಅಮೃತಾ ಶೆಟ್ಟಿ ಹೇಳಿದರು .
ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ದಿನಾಂಕ ೨೭. ೦೮. ೨೦೧೮ ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯಂತಿಯ ಪ್ರಯುಕ್ತ ಗುರುವಾಯನಕೆರೆ ಶ್ರೀ ಶಾರದಾ ಮಂಟಪದಲ್ಲಿ ಸೋಮವಾರ ನಡೆದ ಗುರು ನಮನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ದೇವಸ್ಥಾನದ ಬದಲು ಗ್ರಂಥಾಲಯ ನಿರ್ಮಿಸಿ ಆ ಮೂಲಕ ತಿಳಿವಳಿಕೆಯುಳ್ಳ ಸಮಾಜವನ್ನು ರೂಪಿಸಿ ಎಂದು ನಾರಾಯಣಗುರುಗಳು ಸಾರ್ವಕಾಲಿಕವಾದ ವಿಚಾರಗಳನ್ನು ಸಮಾಜಕ್ಕೆ ನೀಡಿದ್ದಾರೆ ಎಂದು ಹೇಳಿದರು
ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷ ಪ್ರಶಾಂತ್ ಮಚ್ಚಿನ* ಮಾತನಾಡಿ ನಾರಾಯಣ ಗುರುಗಳ ತತ್ವ ಸಂದೇಶಗಳು ಬದುಕಿನ ಬೆಳಕಾಗಿದೆ ಎಂದರು. ವೇದಿಕೆಯಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯ ಗೋಪಿನಾಥ್ ನಾಯಕ್, ಕುವೆಟ್ಟು ಗ್ರಾಪಂ ಅಧ್ಯಕ್ಷ ಅಶೋಕ್ ಕೋಟ್ಯಾನ್ , ಗುರುವಾಯನಕೆರೆ ಗೆಳೆಯರ ಬಳಗದ ಅಧ್ಯಕ್ಷ ರಾಜೇಶ್ ಕುಲಾಲ್ ಕುಲಾಲ ಯುವ ವೇದಿಕೆಯ ತಾಲೂಕು ಅಧ್ಯಕ್ಷ ಲೋಕೇಶ್ ಶಾರದಾಂಬಾ ಭಜನಾ ಮಂಡಳಿಯ ಅಧ್ಯಕ್ಷೆ ರೀತಾ ವೈ ಆಚಾರ್ಯ ಇದ್ದರು
ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶಾರದಾ ಮಂಟಪಕ್ಕೆ 21,000.00/- ಮೌಲ್ಯದ ಪೀಠೋಪಕರಣಗಳನ್ನು ಶಾರದಾ ಮಂಟಪಕ್ಕೆ ಕೊಡುಗೆಯಾಗಿ ನೀಡಲಾಯಿತು
ಕಾರ್ಯಕ್ರಮದ ನಂತರ ಘಟಕದ ಸದಸ್ಯರಿಂದ ಕಾರ್ಯಕ್ರಮದ ಬಗ್ಗೆ ನನ್ನ ಮಾತು ಎಂಬ ಸಂವಾದ ಕಾರ್ಯಕ್ರಮ ನಡೆಯಿತು ಎಲ್ಲಾ ಸದಸ್ಯರು ತಮ್ಮ ಅನಿಸಿಕೆಗಳನ್ನು ತಿಳಿಸಿದರು
ಕಾರ್ಯದರ್ಶಿ ಜಯರಾಜ್ ನಡಕರ ಪ್ರಾರ್ಥನೆ ನೆರವೇರಿಸಿದರು ಸಂಪತ್ ಬಿ ಸುವರ್ಣ ಪ್ರಾಸ್ತಾವಿಕ ಮಾತುಗಳನ್ನಾಡಿದರು ಘಟಕದ ನಿರ್ದೇಶಕ ರಾಕೇಶ್ ಬಿ ಎಲ್ ಸ್ವಾಗತಿಸಿ ಕೋಶಾಧಿಕಾರಿ ಉಮೇಶ್ ಸುವರ್ಣ ಧನ್ಯವಾದ ಸಲ್ಲಿಸಿದರು ಘಟಕದ ಸಲಹೆಗಾರರದ ಸುಧಾಮಣಿ ರಮಾನಂದ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!