ಯುವವಾಹಿನಿ (ರಿ) ಕೂಳೂರು ಘಟಕ

ಗುರು ಜಯಂತಿ

ಕೂಳೂರು : ಬ್ರಹ್ಮಶ್ರೀ ನಾರಾಯಣ ಗುರು ವರ್ಯರ 170 ನೇ ಜನುಮ ದಿನದ ಪ್ರಯುಕ್ತ ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಸಮಾಜ ಸೇವಾ ನಿರ್ದೇಶಕರು ಜಯಲಕ್ಷ್ಮಿ ಇವರ ಸಂಚಾಲಕತ್ವದಲ್ಲಿ ದಿನಾಂಕ 20-08-2024 ರಂದು ಸಂಜೆ ಚಿರಂತನ ಚಾರಿಟೇಬಲ್ ಟ್ರಸ್ಟ್ ಇಡ್ಯಾ ಸುರತ್ಕಲ್ ಇಲ್ಲಿಗೆ ಭೇಟಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು ಇಂದಿರಾ ಸುರೇಶ್ ವಹಿಸಿದ್ದರು. ನಾರಾಯಣ ಗುರುಗಳ ಭಾವಚಿತ್ರಕ್ಕೆ ಆಶ್ರಮದ ಹಿರಿಯರು ದಯಾನಂದ ಮೆಂಡನ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಘಟಕದ ಮಾಜಿ ಅಧ್ಯಕ್ಷರು ಭಾಸ್ಕರ್ ಕೋಟ್ಯಾನ್ ರವರು ಬ್ರಹ್ಮ ಶ್ರೀ ನಾರಾಯಣ ಗುರುಗಳ ಸಂದೇಶ ಹಾಗೂ ತತ್ವಗಳ ಬಗ್ಗೆ ಮಾಹಿತಿ ನೀಡಿ ಘಟಕದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಚಿರಂತನ ಚಾರಿಟೇಬಲ್ ಟ್ರಸ್ಟ್ ಇದರ ಮ್ಯಾನೇಜಿಂಗ್ ಟ್ರಸ್ಟಿ ಭಾರವಿ ದೇರಾಜೆ ಮಾತನಾಡಿ ಗುರುಗಳ ಜನುಮ ದಿನವನ್ನು ತಮ್ಮ ಸಂಸ್ಥೆಯಲ್ಲಿ ಆಚರಿಸಿದಕ್ಕಾಗಿ ಸಂತಸ ವ್ಯಕ್ತಪಡಿಸಿದರು. ಯುವವಾಹಿನಿ ಕೂಳೂರು ಘಟಕ ಹೆಚ್ಚಿನ ಸಮಾಜಮುಖಿ ಕೆಲಸಗಳನ್ನು ಮಾಡಲಿ ಎಂದು ಶುಭ ಕೋರಿದರು.

ಅಧ್ಯಕ್ಷರು ಇಂದಿರಾ ಸುರೇಶ್ ಮಾತನಾಡಿ ಗುರುಗಳ ಜನುಮ ದಿನವನ್ನು ಪ್ರತೀ ವರ್ಷ ಇದೇ ರೀತಿ ಬೇರೆ ಬೇರೆ ಆಶ್ರಮದಲ್ಲಿ ಆಚರಿಸಿಕೊಂಡು ಬಂದಿರುತ್ತೇವೆ ಎಂದು ಹೇಳಿ ಇಂದು ಈ ಕಾರ್ಯಕ್ರಮ ಇಲ್ಲಿ ನಡೆಸಿಕೊಡಲು ಅನುವು ಮಾಡಿಕೊಟ್ಟ ಟ್ರಸ್ಟ್ ನ ಎಲ್ಲರಿಗೂ ವಂದನೆ ಸಲ್ಲಿಸಿದರು.

ವೇದಿಕೆಯಲ್ಲಿ ಯುವವಾಹಿನಿ (ರಿ.) ಕೂಳೂರು ಘಟಕದ ಕಾರ್ಯದರ್ಶಿ ನಯನ ಕೋಟ್ಯಾನ್, ಕಾರ್ಯಕ್ರಮದ ಸಂಚಾಲಕರು ಸಮಾಜ ಸೇವಾ ನಿರ್ದೇಶಕರು ಜಯಲಕ್ಷ್ಮಿ, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ವಿಮಲಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಘಟಕದ ನಿಕಟಪೂರ್ವ ಅಧ್ಯಕ್ಷರು ಯಶವಂತ್ ಪೂಜಾರಿ, ಮಾಜಿ ಅಧ್ಯಕ್ಷರು ಲೋಕೇಶ್ ಕೋಟ್ಯಾನ್, ನಯನ ರಮೇಶ್, ದೀಕ್ಷಿತ್ ಸಿ ಎಸ್, ಘಟಕದ ಮಾರ್ಗದರ್ಶಕರು ಚಂದಪ್ಪ ಸನಿಲ್, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ ಹಿರಿಯರಿಗೆ ಆಟಗಳನ್ನು ಆಡಿಸಿ ಮನೋರಂಜಿಸಿದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಆಶ್ರಮದ ಹಿರಿಯರಿಗೆ ಒಂದು ಹೊತ್ತಿನ ಊಟದ ವ್ಯವಸ್ಥೆಗಾಗಿ ರೂ. 5000/- ಚೆಕ್ ಅನ್ನು ನೀಡಲಾಯಿತು. ಎಲ್ಲರಿಗೂ ಫಲವಸ್ತು ವಿತರಿಸಲಾಯಿತು.

ವಿದ್ಯಾರ್ಥಿ ಸಂಘಟನಾ ನಿರ್ದೇಶಕರು ಮಧುಶ್ರೀ ಪ್ರಶಾಂತ್ ಪ್ರಾರ್ಥಿಸಿದರು. ಅಧ್ಯಕ್ಷರು ಸ್ವಾಗತಿಸಿದರು. ಮಾಜಿ ಅಧ್ಯಕ್ಷರು ಭಾಸ್ಕರ್ ಕೋಟ್ಯಾನ್ ನಿರೂಪಿಸಿದರು. ಕಾರ್ಯದರ್ಶಿ ನಯನ ಕೋಟ್ಯಾನ್ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!