ಯುವವಾಹಿನಿ (ರಿ.) ಪಡುಬಿದ್ರಿ ಘಟಕ

ಪುಟಾಣಿ ಮಕ್ಕಳಿಗಾಗಿ “ಮಕ್ಕಳ ಹಬ್ಬ-2019”

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮ ಪುಟಾಣಿ ಮಕ್ಕಳಿಗಾಗಿ “ಮಕ್ಕಳ ಹಬ್ಬ” ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಚಿನಡ್ಕ ಇಲ್ಲಿ ದಿನಾಂಕ 17/11/2019 ರ ಭಾನುವಾರ ಮುಂಜಾನೆ ಉದ್ಘಾಟನೆಯೊಂದಿಗೆ ಆರಂಭಗೊಂಡು ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳ ನಂತರ ಅಪರಾಹ್ನ ಸಮಾರೋಪ ಕಾರ್ಯಕ್ರಮದೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು.
ಮುಂಜಾನೆಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಇವರು ವಹಿಸಿಕೊಂಡಿದ್ದರು, ಸಮಾರಂಭದ ಉದ್ಘಾಟಕರಾಗಿ ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಸಾದಿಯ ಬಾನು, ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ.)ಕೇಂದ್ರ ಸಮಿತಿ, ಮಂಗಳೂರು ಇದರ ಎರಡನೇ ಉಪಾಧ್ಯಕ್ಷರಾದ ಶ್ರೀ ಉದಯ ಅಮೀನ್ ಮಟ್ಟು, ಉಡುಪಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನೀತಾ ಗುರುರಾಜ್, ಅದಾನಿ ಯು.ಪಿ.ಸಿ.ಎಲ್.ನ ಫೈನಾನ್ಸ್ ಮತ್ತು ಅಕೌಂಟ್ಸ್ ಅಸೋಸಿಯೇಟ್ ಮೇನೇಜರ್ ಶ್ರೀ ಪ್ರೇಮಾನಂದ ಕುಮಾರ್, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಹಸನ್ ಬಾವ,ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಕೆ.ರೇಖಾ ಶೆಣೈ , ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಶ್ರೀ ವಿಧಿತ್ ವಿ .ಪೂಜಾರಿ ಇವರು ಉಪಸ್ಥಿತರಿದ್ದರು.

ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು, ಘಟಕದ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಸರ್ವರನ್ನು ಸ್ವಾಗತಿಸಿದರು,ಶಾಲಾ ನಾಯಕಿ ಕುಮಾರಿ ‌ಸಾದಿಯಾ ಬಾನು ,ಗಣ್ಯರೊಂದಿಗೆ ದೀಪ ಬೆಳಗುವುದರೊಂದಿಗೆ
ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಅತ್ಯುತ್ತಮ ಕಾರ್ಯಕ್ರಮಗಳನ್ನು ನೀಡುತ್ತಿರುವ ಘಟಕದ ಕಾರ್ಯ ವೈಖರಿಯನ್ನು ಶ್ಲಾಘಿಸಿದರು.
ಉದಯ ಅಮೀನ್ ಮಟ್ಟು ಅವರು ಮಕ್ಕಳ ಹಬ್ಬ ಕಾರ್ಯಕ್ರಮದಂತ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡ ಹಾಗೂ ಇತರೆ ಘಟಕಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಪಡುಬಿದ್ರಿ ಘಟಕದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.
ಹಸನ್ ಬಾವ ಅವರು ಘಟಕ ಮತ್ತು ಕಾರ್ಯಕ್ರಮವನ್ನು ಪ್ರಶಂಸಿ ಇನ್ನಷ್ಟು ಪ್ರಶಸ್ತಿಗಳನ್ನು ಯುವವಾಹಿನಿ ಸಂಸ್ಥೆ ಪಡೆಯಲಿ ಎಂದು ಹಾರೈಸಿದರು.

ಉದ್ಘಾಟನಾ ಸಭಾ ಕಾರ್ಯಕ್ರಮದ ನಂತರ ಮಕ್ಕಳಿಗಾಗಿ ಅಭಿನಯ ಗೀತೆ, ಛದ್ಮವೇಷ, ದೇಶಭಕ್ತಿಗೀತೆ, ಭಾಷಣ,ರಸಪ್ರಶ್ನೆ,ಚಿತ್ರಕಲೆ, ಸಮೂಹ ನೃತ್ಯ ಮುಂತಾದ ವಿವಿಧ ಸ್ಪರ್ಧೆಗಳು ವಿಭಾಗ-1 ,1 ರಿಂದ 4ನೇ ತರಗತಿ ಹಾಗೂ ವಿಭಾಗ- 2. 5 ರಿಂದ 7ನೇ ತರಗತಿವರೆಗಿನ ವಿದ್ಯಾರ್ಥಿಗಳಿಗಾಗಿ ನಡೆಯಿತು.

ಸ್ಪರ್ಧಾ ಕಾರ್ಯಕ್ರಮ ಮುಕ್ತಾಯದ ನಂತರ ಅಪರಾಹ್ನ ಸಮಾರೋಪ ಸಮಾರಂಭ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಯೋಗೀಶ್ ಪೂಜಾರಿ ವಹಿಸಿದ್ದರು,
ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಪ್ರದಾನ ಕಾರ್ಯದರ್ಶಿಯವರಾದ ಶ್ರೀ ಎಸ್. ಆರ್. ಪ್ರದೀಪ್ ,
ಬಿ.ಜೆ.ಪಿ. ಕಾಪು ವಿಧಾನ ಸಭಾ ಕ್ಷೇತ್ರದ ಕ್ಷೇತ್ರಾಧ್ಯಕ್ಷರಾದ ಶ್ರೀ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು.
ನಿವೃತ್ತ ಅಂಚೆ ಸಹಾಯಕರಾದ ಶ್ರೀ ಬಾಬು ಕೋಟ್ಯಾನ್.
ಯುವವಾಹಿನಿ (ರಿ.) ಕೇಂದ್ರ ಸಮಿತಿ ಇದರ ಸಂಘಟನಾ ಕಾರ್ಯದರ್ಶಿ ಶ್ರೀ ಸಂತೋಷ್ ಎಸ್.ಪೂಜಾರಿ.
ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಕೆ.ರೇಖಾ ಶೆಣೈ.
ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಶ್ರೀ ವಿಧಿತ್ ವಿ.ಪೂಜಾರಿ.
ಘಟಕದ ಕಾರ್ಯದರ್ಶಿ ಕುಮಾರಿ ಯಶೋದ.
ಉಪಸ್ಥಿತರಿದ್ದರು.

ಕುಮಾರಿ ಐಶ್ವರ್ಯ ಸಿ.ಅಂಚನ್ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.
ಕಾರ್ಯದರ್ಶಿ ಎಲ್ಲರನ್ನೂ ಸ್ವಾಗತಿಸಿದರು.
ಎಸ್.ಆರ್.ಪ್ರದೀಪ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಮಕ್ಕಳು , ಪೋಷಕರು ಮತ್ತು ಶಿಕ್ಷಕರಿಗೆ ಗೌರವ ಕೊಟ್ಟು ಒಳ್ಳೆಯ ದಾರಿಯಲ್ಲಿ
ನಡೆಯಬೇಕೆಂದು ಹಿತ ನುಡಿ ನುಡಿದರು.
ನಂತರ ವಿಭಾಗ -1ರ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.
ನಂತರ ಪ್ರಕಾಶ್ ಪಾದೆಬೆಟ್ಟು ಮಾತನಾಡುತ್ತಾ ಘಟಕದ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದರು
ಬಾಬು ಕೋಟ್ಯಾನ್ ಅವರು ಮಾತನಾಡುತ್ತಾ ಶಾಲೆ ಆರಂಭದ ದಿನಗಳ ಬಗ್ಗೆ ತಿಳಿಸಿ ,ಶಾಲೆ ಇನ್ನಷ್ಟು ಅಭಿವೃದ್ಧಿಯಾಗಲಿ ಎಂದು ಹಾರಿಸಿದರು.
ನಂತರ ವಿಭಾಗ -2 ರ 5 ರಿಂದ 7ನೇ ತರಗತಿ ವಿದ್ಯಾರ್ಥಿಗಳ ಬಹುಮಾನ ನೀಡಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರಿಗೂ ವಂದಿಸಿ ಘಟಕದ ಕಾರ್ಯಕ್ರಮ, ಸದಸ್ಯರ ಒಗ್ಗಟ್ಟು ,ಶಿಸ್ತನ್ನು ಶ್ಲಾಘಿಸಿ,ಘಟಕ ಇನ್ನಷ್ಟು ಯಶಸ್ಸು ಗಳಿಸಿ ,ಚಿರಾಯುವಾಗಲಿ ಎಂದು ಹಾರೈಸಿದರು.
ಕಾರ್ಯಕ್ರಮಕ್ಕೆ ಸಹಕರಿಸಿದ ಶಿಕ್ಷಕರಿಗೆ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದ ಪ್ರಮುಖ ಆಕರ್ಷಣೆ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆಗೈದ ತಲಾ ಒಬ್ಬ ವಿದ್ಯಾರ್ಥಿಗೆ ನೀಡುವ ಕಲಾಶ್ರೀ ,ಕಲಾರತ್ನ ,ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಗೌರವ ಪಡೆದ ವಿದ್ಯಾರ್ಥಿಗಳು ವಿಭಾಗ-1ರ ಕುಮಾರಿ ಮಾನ್ವಿ 3 ನೇ ತರಗತಿ ಕಲಾಶ್ರೀ ಪ್ರಶಸ್ತಿ ಹಾಗೂ
ವಿಭಾಗ -2 ರ ಕುಮಾರಿ ಸೃಷ್ಠಿ 7ನೇ ತರಗತಿ ಅವರಿಗೆ ಕಲಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ತೀರ್ಪುಗಾರರ ಮೆಚ್ಚುಗೆ ಗಳಿಸಿದ ಕುಮಾರಿ ನವ್ಯಶ್ರೀ ಅವರನ್ನು ಗೌರವಿಸಲಾಯಿತು.
ವಿಧಿತ್ ವಿ. ಪೂಜಾರಿ ಅವರ ಧನ್ಯವಾದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!