ಯುವವಾಹಿನಿ (ರಿ) ಕೂಳೂರು ಘಟಕದಿಂದ ಕತ್ತಲಿನಿಂದ ಬೆಳಕಿನೆಡೆಗೆ

ಬಡವರ ಮನೆಗೆ ಬೆಳಕು ಮೂಡಿಸಿದ ಕೂಳೂರು ಘಟಕ

ಕೂಳೂರು : ಬೆಳಕಿನ ಒಂದು ಸೆಲೆ ಸಾಕು ಬದುಕಿನಲ್ಲಿ ಜೀವನೋತ್ಸಾಹ ತುಂಬಲು .ಹಣತೆಯ ಬೆಳಕಿನಲ್ಲಿ ಒಬ್ಬರ ಕಷ್ಟ, ನೋವು,ನಲಿವನ್ನು ಕ್ಷಣಕಾಲ ಕಂಡು ಅರ್ಥೈಸಿಕೊಳ್ಳಲು ಇದೊಂದು ಸದಾವಕಾಶ ಎನ್ನುವಂತೆ ಶ್ರೀ ಗುರುವರ್ಯರ ಆಶೀರ್ವಾದದೊಂದಿಗೆ, ಕೂಳೂರು ಘಟಕದ ಆಶಯದಂತೆ ದೀಪಾವಳಿ ಹಬ್ಬದಂದು ಇಡೀ ಜಗತ್ತೇ ಬೆಳಕಿನಲ್ಲಿ ಜಗಮಗಿಸುವಾಗ ಕೆಲವೊಂದು ಮನೆಯಲ್ಲಿ ಹಣತೆ ಹಚ್ಚಲು ಸಾಧ್ಯವೇ ಇಲ್ಲ ಎನ್ನುವ ದಯನೀಯ ಕುಟುಂಬಗಳು ನಮ್ಮ ಸಮಾಜದಲ್ಲಿ ಇರುವುದನ್ನು ಗುರುತಿಸಿ ಅವರಿಗೆ ಒಂದು ತಿಂಗಳ ದಿನಬಳಕೆಯ ಎಲ್ಲ ಸಾಮಗ್ರಿಗಳನ್ನು ಒದಗಿಸಿಕೊಟ್ಟು ದೀಪಾವಳಿಯ ಅರ್ಥಪೂರ್ಣ ಆಚರಣೆಯಲ್ಲಿ ಪಾಲ್ಗೊಂಡು, ಅಜ್ಞಾನದಿಂದ ಸುಜ್ಞಾನದೆಡೆಗೆ ,ಅಂಧಕಾರದಿಂದ ಬೆಳಕಿನೆಡೆಗೆ ಸಿಗುವಲ್ಲಿ ನಾವೆಲ್ಲರೂ ಕೈ ಜೋಡಿಸಿ ಇಂತಹ ಕಾರ್ಯದಲ್ಲಿ ಭಾಗಿಯಾಗೋಣ ಎನ್ನುವ ಆಶಯದಲ್ಲಿ ದಿನಾಂಕ 5/11/2018 ಸೋಮವಾರ ಸಂಜೆ 3 ಗಂಟೆಗೆ ಸರಿಯಾಗಿ ಕೂಳೂರು ಘಟಕವು ದೀಪಾವಳಿ ಪ್ರಯುಕ್ತ ನಾಲ್ಕು ತೀರಾ ಬಡ ಕುಟುಂಬಗಳನ್ನು ಗುರುತಿಸಿ, ಅವರಿಗೆ ದೀಪಾವಳಿ ಹಬ್ಬ ಆಚರಣೆ ಹಾಗೂ ಮುಂದಿನ ದಿನಗಳನ್ನು ನಡೆಸುವುದಕ್ಕಾಗಿ ರೂ. 15,000/- ಮೊತ್ತದ ವಸ್ತುಗಳನ್ನು ದೇಣಿಗೆ ರೂಪದಲ್ಲಿ ಘಟಕದ ಸದಸ್ಯರು ನಾಲ್ಕು ಮನೆಗಳಿಗೂ ಭೇಟಿ ನೀಡಿ ವಸ್ತುಗಳನ್ನು ಹಸ್ತಾಂತರಿಸಿದರು .ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ,ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ಮಾರ್ಗದರ್ಶಕರಾದ ಜಯಾನಂದ ಅಮೀನ್, ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಅಧ್ಯಕ್ಷರಾದ ಹರೀಶ್ ಅಮೀನ್ ಇವರು ಉಪಸ್ಥಿತರಿದ್ದರು .ಕಾರ್ಯಕ್ರಮದ ಸಂಚಾಲಕತ್ವವನ್ನು ಕ್ರೀಡಾ ಮತ್ತು ಸಮಾಜ ಸೇವಾ ನಿರ್ದೇಶಕರಾದ ರೋಹಿತ್ ಅವರು ವಹಿಸಿದ್ದರು .

2 thoughts on “ಬಡವರ ಮನೆಗೆ ಬೆಳಕು ಮೂಡಿಸಿದ ಕೂಳೂರು ಘಟಕ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!